ವಿಜಯಪುರ | ಹೆಚ್‌ಐವಿ ಪೀಡಿತರು ಸರ್ಕಾರದಿಂದ ಸಿಗುವ ಆರೋಗ್ಯ ಸೌಲಭ್ಯ ಬಳಸಿಕೊಳ್ಳಬೇಕು: ಡಾ. ಸಂಪತ್ ಗುಣಾರಿ

Date:

ಅನೌಪಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ, ಸಂತ ಹೊಸಪರ್ ಸಮುದಾಯ ಮತ್ತು ಆರೋಗ್ಯ ಕೇಂದ್ರ, ವಿಜಯಪುರ ಹಾಗೂ ವೀಣಾಧರಿ ಚೇತನ ವಿಶೇಷ ಬಾಧಿತರ ಒಕ್ಕೂಟ, ವಿಜಯಪುರ ಇವರ ಸಹಯೋಗದಲ್ಲಿ ವಿಶೇಷ ಬಾಧಿತರ ಬೆಂಬಲ ಸಭೆಯನ್ನು ನಡೆಸಲಾಯಿತು.

ಈ ಸಭೆಯನ್ನು ಉದ್ಘಾಟಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಡಾ.ಸಂಪತ್ ಗುಣಾರಿ ಮಾತನಾಡಿ, ವಿಜಯಪುರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್‌ಐವಿ ತಪಾಸಣೆಯನ್ನು ಉಚಿತವಾಗಿ ಮಾಡಲಾಗುತ್ತದೆ ಮತ್ತು ಚಿಕಿತ್ಸೆ ಕೂಡಾ ಉಚಿತವಾಗಿ ನೀಡಲಾಗುತ್ತದೆ. ಹೆಚ್‌ಐವಿ ಪೀಡಿತರು ಸರ್ಕಾರದಿಂದ ಸಿಗುವ ಆರೋಗ್ಯ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರವು ಹೆಚ್‌ಐವಿ ಸೋಂಕಿತರ ಹಿತ ದೃಷ್ಟಿಯಿಂದ ಪ್ರತಿ ತಿಂಗಳು ದುಬಾರಿ ವೆಚ್ಚದ ಎ ಆರ್ ಟಿ ಮಾತ್ರೆಗಳನ್ನು ವಿತರಿಸುತ್ತಿದೆ. ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್‌ಐವಿ ಸೋಂಕಿತರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿವಹಿಸಿ ದಿನಾಲು ತಪ್ಪದೇ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಮನೆಯಲ್ಲಿ ತಯಾರಿಸಿದ ಶುಚಿಯಾದ, ಪೌಷ್ಠಿಕ ಆಹಾರ ಸೇವನೆ ಮಾಡಿ ಯಾವುದೇ ಒತ್ತಡಕ್ಕೆ ಒಳಗಾಗದೇ ದಿನಾಲು ಕ್ರಿಯಾಶೀಲರಾಗಿ ಜೀವನ ಸಾಗಿಸಬೇಕು ಎಂದು ಹೆಚ್‌ಐವಿ ಬಾಧಿತರಿಗೆ ಹಾಗೂ ಪಿಡಿತರಿಗೆ ಡಾ. ಸಂಪತ್ ಗುಣಾರಿ ಆತ್ಮಸ್ಥೆರ್ಯ ತುಂಬಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 23 at 7.42.30 PM

ಕರ್ನಾಟಕ ಸರ್ಕಾರ ಆಹಾರ ಇಲಾಖೆಗೆ ಸಂಬಂಧಿಸಿದ ಎಲ್ಲ ವ್ಯವಸ್ಥೆಯು ಕಂಪ್ಯೂಟ‌ರ್ ಮೂಲಕ ಮಾಡಲಾಗಿದೆ. ಆಹಾರ ಇಲಾಖೆಯ ಎಲ್ಲ ಸೇವೆ ಅಥವಾ ಸೌಲಭ್ಯವು ಎಲ್ಲರಿಗೂ ತಲುಪುವ ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬವು ಆನ್‌ ಲೈನ್ ಅರ್ಜಿ ಸಲ್ಲಿಸಿ ರೇಶನ್ ಕಾರ್ಡ್‌ ಪಡೆಯಬಹುದಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!

ಹೆಚ್‌ಐವಿ ಬಾಧಿತರಿಗೆ ವಿಶೇಷವಾಗಿ ಆಹಾರ ಇಲಾಖೆಯಲ್ಲಿ ಯಾವುದೇ ಸೌಲಭ್ಯವಿರುವುದಿಲ್ಲ. ಆದರೆ ಎಲ್ಲರೂ ಕೂಡ ರೇಶನ ಕಾರ್ಡ್‌ ಪಡೆದು ಪ್ರತಿ ವ್ಯಕ್ತಿಗೆ 5 ಕೆ ಜಿ ಆಹಾರ ಧಾನ್ಯ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ಅದರಂತೆ ಇಂದಿನ ಸಭೆಯಲ್ಲಿ ರೇಶನ ಕಾರ್ಡಿಗೆ ಸಂಬಂಧಿಸಿದಂತೆ ಸಮಸ್ಯೆಗಳ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ಸಂಯೋಜಕಿ ಸಿಸ್ಟರ್ ಜಯಾ ಮೇರಿ, ವೀಣಾಧರಿ ಚೇತನ ವಿಶೇಷ ಬಾಧಿತರ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶೈಲಾ ರೂಗಿ ಹಾಗೂ ಸಭೆಯಲ್ಲಿ 50ಕ್ಕೂ ಹೆಚ್ಚು ಹೆಚ್‌ಐವಿ ಬಾಧಿತರು ಭಾಗಿಯಾಗಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶೃತಿ ನೀಡೊಣೆ ಮಾಡಿದರೆ, ಸುನೀತಾ ಮೋರೆ ಸ್ವಾಗತಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...