ವಿಜಯಪುರ | ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ: ಮಾಜಿ ಸಚಿವ ವಿನಯಕುಮಾರ ಸೊರಕೆ

Date:

ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ ಸೊರಕೆ ಅಭಿಪ್ರಾಯಪಟ್ಟರು.

ವಿಜಯಪುರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಅನ್ಯಾಯ ಧೋರಣೆ ಮಾಡಿದ್ದು, ನಮಗೆ ತೆರಿಗೆಯಲ್ಲಿ ನ್ಯಾಯವಾಗಿ ಸಿಗಬೇಕಾದ ಪಾಲು ಸಿಗಲಿಲ್ಲ. ಬರಗಾಲ ಸಂದರ್ಭದಲ್ಲಿ ಪರಿಹಾರ ಕೊಡದೆ ಇರುವುದು, ದ್ವೇಷ ಹರಡುವುದು ರಾಜಕೀಯ ಲಾಭವನ್ನು ಪಡೆದುಕೊಳ್ಳುವುದು ಬಿಜೆಪಿಯ ಚಾಳಿಯಾಗಿದೆ” ಎಂದು ಟೀಕಿಸಿದರು.

“ನಾವು ಕೊಟ್ಟಿರುವ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿರುವುದು ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಸರ್ಕಾರ. ಹಾಗಾಗಿ ಕರ್ನಾಟಕ ಭಾರತದಲ್ಲಿಯ ಅತಿ ಶ್ರೇಷ್ಟ 5 ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತಿಯೊಬ್ಬ ಪ್ರಜೆಗೆ ತಲುಪುತ್ತಿರುವುದು ಸಾಧ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದೃಢವಾಗಿದೆ. ಕೇಂದ್ರದಲ್ಲಿಯೂ ಮನಮೋಹನ್‌ ಸಿಂಗ್‌ರವರ ಸರ್ಕಾರ ಮಾಡಿದ ಸಾಧನೆ ನೋಡಿದರೆ ಈಗಿನ ಬಿಜೆಪಿ ಸರ್ಕಾರದ ಸರ್ವಾಧಿಕಾರ ಧೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತ ಜನರ ಭಾವನೆ ಕೆರಳಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್‌ನ ಅತಿ ಹೆಚ್ಚು ಸಂಸದರು ಜಯಶಾಲಿಗಳಾಗಲಿದ್ದಾರೆ” ಎಂದು ಹೇಳಿದರು.

“ರೈತರ, ಮಹಿಳೆಯರ, ಯುವಕರ ಹಾಗೂ ಶ್ರಮಿಕರ ಸಮಸ್ಯೆಗಳ ಬಗ್ಗೆ ನಾವು ಕೇಂದ್ರ ಪ್ರಣಾಳಿಕೆಯಲ್ಲಿ ಮಾನ್ಯತೆ ನೀಡುತ್ತಿದ್ದೇವೆ. ಅದನ್ನೂ ನಾವು ಕೊಡುತ್ತೇವೆ. ಎಂಎಸ್‌ಪಿ, ನಿರುದ್ಯೋಗ ಯುವಜನರಿಗೆ 2 ಕೋಟಿ ಉದ್ಯೋಗ ಕೊಡುವುದು, 15 ಲಕ್ಷ ರೂ ಕಪ್ಪುಹಣ ತರುವುದು ಸೇರಿದಂತೆ ಎಲ್ಲ ಆಶ್ವಾಸನೆಗೆ ನಮ್ಮ ಪ್ರಧಾನಿಗಳು ವಿಫಲರಾಗಿದ್ದಾರೆ. ಇವರ ಸಾಧನೆ ಶೂನ್ಯವಾಗಿದೆ. ಇಂದಿನ ಯುವಪೀಳಿಗೆ ಎಲ್ಲವನ್ನು ಅರಿತಿದ್ದು, ಈ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ” ಎಂದರು.

“ವಿಜಯಪುರ ಜಿಲ್ಲೆಯ ಹಿಂದಿನ ಬಿಜೆಪಿ ಸಂಸದರು ಒಂದೇ ಒಂದು ಬಾರಿಯೂ ಸಂಸತ್‌ನಲ್ಲಿ ಭಾಗಿಯಾಗಿಲ್ಲ. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸ್ಮಾರ್ಟ್‌ಸಿಟಿ, ದತ್ತುಗ್ರಾಮದಂತಹ ಯೋಜನೆ ಅನುಷ್ಠಾನಗೊಳಿಸಿಲ್ಲ. 3 ಬಾರಿ ಸಂಸದರಾದರೂ ಕೇವಲ ಮೋದಿ ಹೆಸರು ಹೇಳಿ ಆರಿಸಿ ಬಂದು ಜಿಲ್ಲೆಯ ಜನತೆಗೆ ದ್ರೋಹ ಬಗೆದಿದ್ದಾರೆ” ಎಂದು ಆರೋಪಿಸಿದರು.

ನೀರಾವರಿಯಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಪ್ರವಾಸೋದ್ಯಮ ಬೆಳವಣಿಗೆ ಆಗಿಲ್ಲ. ಬರ ಹಣೆಪಟ್ಟಿ ಅಳಿಸುವಲ್ಲಿ ವಿಫಲರಾದ ಜಿಗಜಿಣಗಿ ಮತ್ತೇ ಮೋದಿ ಮುಖ ನೋಡಿ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹರಿಹಾಯ್ದರು.

“ನಾವು ವಿಜಯಪುರದಲ್ಲಿ ಒಳ್ಳೆಯ ಅಭ್ಯರ್ಥಿಗಳನ್ನು ನೀಡಿದ್ದೇವೆ. ವಿಜಯಪುರದ ಅಭಿವೃದ್ಧಿ ಮಾಡುವುದೇ ಮುಖ್ಯ ಗುರಿಯಾಗಿದೆ. ರಾಜ್ಯದಲ್ಲಿ ಸಾಕಷ್ಟು ಮತದಾರರು ಬದಲಾವಣೆ ಬಯಸಿರುವುದನ್ನು ನಾವು ಕೇಳಿದ್ದೇವೆ. ಬಿಜೆಪಿಯ ಶೇ.10ರಿಂದ 15ರಷ್ಟು ಮತಗಳನ್ನು ನಾವು ಹೆಚ್ಚು ತೆಗೆದುಕೊಳ್ಳಲಿದ್ದೇವೆ. 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸನ್ನಿವೇಶವಿದೆ” ಎಂದು ವಿನಯಕುಮಾರ ಸೊರಕೆ ಹೇಳಿದರು.

ಕೆಪಿಸಿಸಿ ವಕ್ತಾರೆ ಹಾಗೂ ಮಾಜಿ ಸಂಸದ ತೇಜಶ್ವಿನಿ ಗೌಡ ಮಾತನಾಡಿ, “ರಾಜ್ಯದಲ್ಲಿ ನಾವು ನುಡಿದಂತೆ ೫ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದು, ಇದು ರಾಜ್ಯದ ಪ್ರತಿಯೊಬ್ಬರಿಗೂ ಪ್ರತಿ ಮನೆಗೂ ಯೋಜನೆಗಳು ತಲುಪುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ

“ದೇವೆಗೌಡರು ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವ ಭರದಲ್ಲಿ ಜೆಡಿಎಸ್ ಅಸ್ತಿತ್ವವನ್ನೇ ಅಳಿಸಿ ಹಾಕಿದ್ದಾರೆ” ಎಂದರು.

ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಲೋಣಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹ್ಮದ್ ರಫೀಕ್ ಟಪಾಲ್, ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರುಕ್ಸಾನಾ ಉಸ್ತಾದ್, ಐ ಎಂ ಇಂಡಿಕರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...