ವಿಜಯಪುರ | ಶಿಕ್ಷಕನ ಮೇಲೆ ಪೋಲಿಸ್ ಪೇದೆಯ ಗೂಂಡಾ ವರ್ತನೆ; ಆರೋಪ

Date:

ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್‌ ಪೇದೆಯೋರ್ವ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿಸಿದ್ದು, ಹಲ್ಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಎಂ ಬಿ ಪಾಟೀಲ ಕಾಲೋನಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ಶಿಕ್ಷಕ ಚಿದಾನಂದಗೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಅಶೋಕ ಮಿಂಚನಾಳ ಜೀವ ಬೆದರಿಕೆ ಹಾಕಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಗರದ ಎಂ.ಬಿ ಪಾಟೀಲ ಬಡಾವಣೆಯಲ್ಲಿ ಅಕ್ಕಪಕ್ಕದಲ್ಲಿ ನಿವೇಶನ ಹೊಂದಿರುವ ತಿಕೋಟಾ ತಾಲೂಕಿನ ಬರಟಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಕ ಚಿದಾನಂದ ಜಿಗಜೇವಣಿ ಮತ್ತು ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯ ಪೇದೆ ಅಶೋಕ ಮಿಂಚನಾಳ ನಡುವೆ ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ವಿವಾದ ಏರ್ಪಟ್ಟಿದೆ. ಈ ವೇಳೆ ಪೊಲೀಸ್‌ ಪೇದೆ ಶಿಕ್ಷಕನಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ನಗರದಲ್ಲಿ ಗುರುವಾರ ಮಾಧ್ಯಮದ ಎದುರು ಮಾತನಾಡಿದ ಶಿಕ್ಷಕ ಚಿದಾನಂದ ಅವರು, “ಗ್ರಾಮೀಣ ಪೊಲೀಸ ಠಾಣೆಯ ಪಿ.ಸಿ ಅಶೋಕ ಮಿಂಚನಾಳ ನಿವೇಶನದ ವಿಚಾರಕ್ಕಾಗಿ ನನ್ನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೋಸ್‌ ಪೇದೆ ಅಶೋಕ ಮಿಂಚಿನಹಾಳ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ಮಾಡಿದ್ದು, ಜೀವ ಬೆದರಿಕೆ ಹಾಕಿರುವುದರಿಂದ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಅಶೋಕನ ಮೇಲೆ ಎಸ್‌ಪಿ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ನಾನು ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

“ಸಮಾಜವನ್ನು ರಕ್ಷಿಸಬೇಕಾದ ಆರಕ್ಷಕರೇ ಭಕ್ಷಕರಾದಾಗ ನಾವು ಸಮಾಜದಲ್ಲಿ ಬದುಕುವುದು ಹೇಗೆ? ನಾನೊಬ್ಬ ಶಿಕ್ಷಕನಾಗಿ ಪೊಲೀಸ್‌ ಠಾಣೆ ಕುರಿತು ಮಕ್ಕಳಿಗೆ ಏನೆಂದು ಪಾಠ ಮಾಡಲಿ? ಪೊಲೀಸರು ಗೂಂಡಾಗಳೆಂದೋ ಅಥವಾ ಸಮಾಜದ ರಕ್ಷಕರೆಂದೋ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...