ವಿಜಯಪುರ | ಪ್ರಜ್ವಲ್‌ ಪ್ರಕರಣ; ಸಂತ್ರಸ್ತೆಯರ ದೂರಿಗೆ ಕಾಯದೆ ಶೀಘ್ರ ಕ್ರಮ ಕೈಗೊಳ್ಳುವಂತೆ ಎಐಡಿವೈಒ ಆಗ್ರಹ

Date:

ಹಾಸನದ ಸಂಸದ ಹಾಗೂ ಪ್ರಸ್ತುತ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿರುವ ದೌರ್ಜನ್ಯಗಳ ಪ್ರಕರಣ‌ವು ಅತ್ಯಂತ ಆಘಾತಕಾರಿಯಾಗಿದೆ. ಹಾಸನದಲ್ಲಿ ಎಲ್ಲೆಂದರಲ್ಲಿ ಸಿಕ್ಕ ಪೆನ್ ಡ್ರೈವ್‌ಗಳ ಮೂಲಕ ಈ ಸಂಗತಿ ಹೊರಬಿದ್ದಿದ್ದು, ಇಡೀ ನಾಗರಿಕ ಸಮಾಜವೇ ದಿಗ್ಭ್ರಮೆಗೊಂಡಿದೆ. ಈ ಅಮಾನುಷ ಕೃತ್ಯಕ್ಕೆ ಖಡನೀಯ ಎಂದು ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ವಿಜಯಪುರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದ, “ಚುನಾಯಿತ ಸಂಸದನಾಗಿ ಕ್ಷೇತ್ರದ ಜನತೆ ತನಗೆ ನೀಡಿದ ಜವಾಬ್ದಾರಿಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕಾದ ವ್ಯಕ್ತಿ ಹೀಗೆ ತನ್ನ ಮನೋವಿಕೃತಿಯನ್ನು ಮೆರೆದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಮಹಿಳೆಯನ್ನು ಕೇವಲ ಭೋಗದ ವಸ್ತುವೆಂದು ಪರಿಗಣಿಸಿರುವ ಇವರನ್ನು ಟೀಕಿಸಲು ಪದಗಳೇ ಸಾಲದಾಗಿದೆ. ಇವರ ಬೆದರಿಕೆಗಳಿಗೆ ಬಲಿಯಾದ ಹೆಣ್ಣು ಮಕ್ಕಳು ಈ ಪ್ರಕರಣ‌ವು ಹೊರ ಬೀಳುವ ಮೂಲಕ ಮತ್ತಷ್ಟು ಕುಸಿದು ಹೋಗಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೋಕ್ಸೊ ಪ್ರಕರಣ; ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರವು ಈ ಪ್ರಕರಣದ ತನಿಖೆಗೆ ತಡವಾಗಿಯಾದರೂ ಎಸ್ಐಟಿಯನ್ನು ನೇಮಿಸಿರುವುದು ಸ್ವಾಗತ. ಆದರೆ ಸಂತ್ರಸ್ತೆಯರು ಬಂದು ದೂರು ದಾಖಲೆಸುವವರೆಗೆ ಕಾಯದೆ ಶೀಘ್ರ ತನಿಖೆ ನಡೆಸಿ ಅಪರಾಧಕ್ಕೆ ತಕ್ಕ ನಿದರ್ಶನೀಯ ಶಿಕ್ಷೆಯನ್ನು ವಿಧಿಸಬೇಕಿದೆ. ಆರೋಪಿತ ವ್ಯಕ್ತಿಯು ಪ್ರಭಾವಿ ರಾಜಕಾರಣಿಯಾಗಿರುವುದರಿಂದ ಸಂತ್ರಸ್ತೆಯರು ಧೈರ್ಯವಾಗಿ ಮುಂದೆ ಬಂದು ದೂರು ನೀಡುತ್ತಿಲ್ಲ. ಅಲ್ಲದೆ ಸಂತ್ರಸ್ತ ಹೆಣ್ಣು ಮಕ್ಕಳ ಜೀವ ಮತ್ತು ಬದುಕು ಅಪಾಯದಲ್ಲಿ ಇರುವುದರಿಂದ ಅವರಿಗೆ ಸೂಕ್ತ ರಕ್ಷಣೆ, ವೈದ್ಯಕೀಯ ಆರೈಕೆ ಮತ್ತು ಸಾಂತ್ವನದ ಅವಶ್ಯಕತೆ ಇದೆ. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಸಕ್ರಿಯಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...