ವಿಜಯಪುರ | ಶರಣರ ಶಕ್ತಿ ಚಿತ್ರ ಪ್ರಸಾರಗೊಳಿಸದಂತೆ ಬಸವಪರ ಸಂಘಟನೆಗಳ ಒತ್ತಾಯ

Date:

ಶರಣರ ಶಕ್ತಿ’ ಚಲನಚಿತ್ರ ಪ್ರಸಾರವನ್ನು ತಡೆಹಿಡಿಯಬೇಕು ಹಾಗೂ ನಿರ್ಭಂಧಿಸಬೇಕೆಂದು ಒತ್ತಾಯಿಸಿ ಬಸವ ಮಹಾಮನೆ ಸಮಿತಿ ನೇತೃತ್ವದಲ್ಲಿ, ಅನೇಕ ಬಸವಪರ ಸಂಘಟನೆಗಳ ಸದಸ್ಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಮುದ್ದೇಬಿಹಾಳ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ವಿವಾದಿತ ವಚನ ದರ್ಶನದ ವಿರುದ್ದವೂ ಘೋಷಣೆ ಕೂಗಿ, ಬರುವ 18ರಂದು ಚಲನಚಿತ್ರ ಬಿಡುಗಡೆಯಾಗುತ್ತದೆಂದು ಹೇಳಲಾಗಿದ್ದು, ಈಗಾಗಲೇ ಬಿಡುಗಡೆಯಾದ ಚಿತ್ರದ ಟ್ರೈಲರ್ ನಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ, ಬಸವಾದಿ ಶರಣರಿಗೆ ಅವಮಾನ ಮಾಡುವ ದೋಷಗಳು ಕಂಡುಬಂದಿವೆ.

ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘನ ಸರಕಾರವು ಘೋಷಿಸಿದ ಬಸವಣ್ಣನವರ ಅಕ್ಕ, ಶರಣೆ ಅಕ್ಕನಾಗಮ್ಮನವರು ಅನೈತಿಕವಾಗಿ ಗರ್ಭಧರಿಸಿದ್ದಾರೆಂದು ಚಿತ್ರಿಕರಿಸಿದ್ದು, ಲಿಂಗಾಯತ ಹಾಗೂ ಬಸವಾಭಿಮಾನಿಗಳಿಗೆ ಅವಮಾನವಾಗಿದೆ. ಇಂಥ ತಪ್ಪನ್ನು ಯಾವ ನಾಗರಿಕ ಸಮಾಜವೂ ಒಪ್ಪುವುದಿಲ್ಲ, ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಲವಂತದಿಂದ ಲಿಂಗ ಕಟ್ಟುತ್ತೇವೆ ಎಂಬ ಮಾತು ಲಿಂಗಾಯತ ಧರ್ಮ ಪ್ರಣಾಳಿಕೆಯಲ್ಲಿ ಇಲ್ಲ. ಇದು ಧರ್ಮತತ್ವ (ವಚನವಾಙ್ಮಯ)ಕ್ಕೆ ವಿರುದ್ಧವಾದದ್ದು. ಇದನ್ನು ಬಲವಾಗಿ ಖಂಡಿಸುತ್ತೇವೆ. ವರ್ಣರಹಿತ,‌ ವರ್ಗರಹಿತ, ಸಮಸಮಾಜ ಕಟ್ಟಿದ ಶರಣರಲ್ಲಿ ಕೆಲವರನ್ನು ಕಡುನೀಲಿಬಣ್ಣನಿಂದ ಚಿತ್ರೀಕರಿಸಿದ್ದನ್ನು ಖಂಡಿಸುತ್ತೇವೆ. ಬಸವಣ್ಣನವರ ಅಂತ್ಯವು ಹೇಗಾಯಿತೆಂದು ಯಾರಿಗೂ ತಿಳಿಯದ್ದನ್ನು ಕೊಲೆಯಾಗಿದೆ ಎಂದು ಚಿತ್ರೀಕರಿಸಿರುವುದು ಅಕ್ಷಮ್ಯ ಅಪರಾಧ ಇದನ್ನು ಖಂಡಿಸುತ್ತೇವೆ ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | ಹಣಮಾಪುರ ಗ್ರಾ.ಪಂ. ಚುನಾವಣೆ : ನೂತನ ಸದಸ್ಯರಿಗೆ ಸಚಿವರಿಂದ ಅಭಿನಂದನೆ

ಈ ಚಲನಚಿತ್ರದ ನಿರ್ದೇಶಕ ದಿಲೀಪ ಶರ್ಮ ಮತ್ತು ನಿರ್ಮಾಪಕಿ ಆರಾಧನಾ ಕುಲಕರ್ಣಿ, ವೇದಾಗಮ ಸನಾತನ ಹಿಂದೂ ಮತ್ತು ಹಿಂದುತ್ವದ ಪರ್ಯಾಯವಾದ ಬಸವಾದಿ ಪ್ರಮಥರ ತತ್ವ ಚಿಂತನೆಗಳಾದ ಲಿಂಗಾಯತವನ್ನು ಪ್ರಜ್ಞಾಪೂರ್ವಕವಾಗಿ ಅವಹೇಳನ ಮಾಡಲು ಈ ಚಲನಚಿತ್ರವನ್ನು ಚಿತ್ರೀಕರಿಸಿದ್ದಾರೆಂದು ನಮ್ಮ ಭಾವನೆಯಾಗಿದೆ. ಇದು ಸಮಾಜದಲ್ಲಿ ಕ್ಷೋಭೆಯನ್ನು ಉಂಟುಮಾಡುವ ಕಾರಣದಿಂದ ತೀವ್ರವಾಗಿ ಖಂಡಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...