ವಿಜಯಪುರ | ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವನೆ ಕೈಬಿಡಬೇಕು: ಸಚಿವ ಶಿವಾನಂದ ಪಾಟೀಲ

Date:

ವಿಜಯಪುರ ನಗರದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ವೈದ್ಯಕೀಯ ಕಾಲೇಜು ಆರಂಭಿಸುವುದರಿಂದ ಬಡವರ ಶೋಷಣೆಯಾಗಲಿದೆ. ಇದರಿಂದ ಯಾವುದೇ ಅನುಕೂಲವಾಗುವುದಿಲ್ಲ. ಹಾಗಾಗಿ ಇಂತಹ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಮ್ಮ ನಿಲುವು ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, “ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವ ಅನಿವಾರ್ಯತೆ ಇಲ್ಲ. ಒಂದು ವೇಳೆ ಈ ಮಾದರಿಯಲ್ಲಿ ಕಾಲೇಜು ಸ್ಥಾಪನೆಯಾದರೆ ಬಡವರ ಶೋಷಣೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಈ ನಿರ್ಧಾರವನ್ನು ಸಂಪುಟ ಸಭೆಯಲ್ಲೂ ವ್ಯಕ್ತಪಡಿಸಿದ್ದೇನೆ. ಸಿಎಂ ಅವರಿಗೂ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿರುವೆ” ಎಂದು ಹೇಳಿದರು.

”ವಿಜಯಪುರ ಜಿಲ್ಲಾಸ್ಪತ್ರೆ 140 ಎಕರೆ ಜಾಗದ ವಿಶಾಲ ಕ್ಯಾಂಪಸ್ ಹೊಂದಿದೆ. ಟ್ರಾಮಾ ಸೆಂಟರ್, ಕ್ಯಾನ್ಸರ್ ಚಿಕಿತ್ಸಾ ಘಟಕ, ಸೂಪರ್ ಸ್ಪೆಷಾಲಿಟಿ ಸೆಂಟರ್ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಬೇಕಾದ ಸಕಲ ಸೌಲಭ್ಯಗಳಿರುವಾಗ ಖಾಸಗಿಯವರಿಗೆ ಮಣೆಹಾಕುವ ಅವಶ್ಯಕತೆ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಾಸಗಿ ಸಹಭಾಗಿತ್ವ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಈ ಹಿಂದೆಯೂ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ಪತ್ರ ಬರೆದಿದ್ದೇನೆ. ಅವಶ್ಯಕತೆ ಇದ್ದರೆ ಇನ್ನೊಮ್ಮೆ ಪತ್ರ ಬರೆಯುವೆ” ಎಂದು ಹೇಳಿದರು.

“ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಟ್ರಾಮಾ ಸೆಂಟರ್, 300 ಹಾಸಿಗೆಯುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಘಟಕ ಆರಂಭಿಸಲು ದಿವ್ಯ ಸಂಕಲ್ಪ ಮಾಡಿ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ, ಇವುಗಳಿಗೆ ಸಿಬ್ಬಂದಿಯನ್ನೇ ಕೊಡಲಿಲ್ಲ. ಕಾರ್ಯಾರಂಭ‌ ಮಾಡುವಂತೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ” ಎಂದು ಶಿವಾನಂದ ಪಾಟೀಲ ತಿಳಿಸಿದರು.

“ನನಗೆ ಕ್ರೆಡಿಟ್ ಬರುವುದನ್ನು ತಪ್ಪಿಸಲು ವಿಳಂಬವಾಗುತ್ತಿದೆಯೇನೋ ಎಂದು ನೋವಾಗುತ್ತದೆ. ಆದರೆ ನಾನು ಕ್ರೆಡಿಟ್‌ಗಾಗಿ ಮಾಡಿಲ್ಲ. ಜನರ ಒಳಿತಿಗಾಗಿ ಇದನ್ನು ಮಾಡಿದ್ದೇನೆ. ನನಗೆ ಕ್ರೆಡಿಟ್ ಬರುತ್ತದೆಯೆಂದು ಯೋಚಿಸುವವರು ಬೇಕಾದರೆ ತಾವೇ ಕ್ರೆಡಿಟ್ ತೆಗೆದುಕೊಂಡರೂ ಚಿಂತೆಯಿಲ್ಲ; ಜನರಿಗಾಗಿ ಈ ಕಾರ್ಯ ಮಾಡಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ನಾಡ ಹಬ್ಬದಲ್ಲಿ ಜಾತಿ-ಧರ್ಮ ತರೋದು ಸರಿಯಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಏಮ್ಸ್ ತರಲಿ ‘ಸಂಸದರಿಗೆ ಗೋಳಗುಮ್ಮಟವನ್ನಂತೂ ಕಟ್ಟಲು ಆಗಲ್ಲ, ಕೊನೆಪಕ್ಷ ಏಮ್ಸ್ ಕಾಲೇಜು ವಿಜಯಪುರದಲ್ಲಿ ಸ್ಥಾಪನೆಯಾಗುವಂತೆ ಮಾಡಲು ಕೇಂದ್ರ ಸರ್ಕಾರದ ಮನವೊಲಿಸಲಿ” ಎಂದು ಸಚಿವ ಶಿವಾನಂದ ಪಾಟೀಲ ಅವರು ಸಂಸದ ರಮೇಶ್ ಜಿಗಜಿಣಗಿಯವರಿಗೆ ಒತ್ತಾಯಿಸಿದರು.

”ಈಗಾಗಲೇ ಧಾರವಾಡದಲ್ಲಿ ಐಐಟಿ ಸೇರಿದಂತೆ ಅನೇಕ ಪ್ರತಿಷ್ಠಿತ ಕಾಲೇಜುಗಳು ಸ್ಥಾಪನೆಯಾಗಿವೆ. ಉತ್ತರ ಕರ್ನಾಟಕದ ಕೊನೆಯ ಜಿಲ್ಲೆಯಾದ ವಿಜಯಪುರದಲ್ಲಿ ಏಮ್ಸ್ ಸ್ಥಾಪನೆಯಾದರೆ ಅತ್ಯಂತ ಅನುಕೂಲವಾಗುತ್ತದೆ. ಈ ಬಗ್ಗೆ ಸಂಸದರು ಗಂಭೀರವಾಗಿ ಪರಿಗಣಿಸಬೇಕು. ಬೇಡಿಕೆ ಕುರಿತು ಅವರಿಗೂ ಪತ್ರ ಬರೆಯುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...