ವಿಜಯಪುರ | ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ವಿರುದ್ಧ ತಮಟೆ ಚಳವಳಿ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದೂ ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ತಾಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳವಳಿ ಪ್ರತಿಭಟನೆ ಮಾಡಲಾಯಿತು.

ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶ ಹೊರಹಾಕಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹರೀಶ ನಾಟೇಕರ ಮಾತನಾಡಿ, “ಪುರಸಭೆ ಅಧ್ಯಕ್ಷರು ಪದೇ ಪದೇ ಜಾತಿ ನಿಂದನೆ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದು, ಇವರ ಮೇಲೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ತಾಲೂಕು ಪಂಚಾಯಿತಿ ವಸತಿ ಗೃಹ ನೆಲಸಮ ಮಾಡಿದ್ದು, ಸರಕಾರದ ಆಸ್ತಿಯನ್ನು ಹಾನಿ ಮಾಡಿದ್ದಕ್ಕಾಗಿ ಇವರ ಮೇಲೆ ಕೂಡಲೇ ಸರ್ಕಾರದಿಂದ ಕ್ರಿಮಿನಲ್ ಕೇಸು ದಾಖಲಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 22 at 10.48.20 AM

“ಇಂದಿರಾ ನಗರದಲ್ಲಿ ದಲಿತರಿಗೆ ಶೆಡ್ ನಿರ್ಮಿಸಿಕೊಳ್ಳಲು ಅನುಮತಿ ನೀಡಬೇಕು. ಶೆಡ್ ತೆರವುಗೊಳಿಸಿದ ಪುರಸಭೆ ಅಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಬೇಕು. ಪುರಸಭೆ ಅಧ್ಯಕ್ಷರ ಮೇಲೆ ದೌರ್ಜನ್ಯ, ಗುಂಡಾ, ಕೋಮುಗಲಭೆ ಕೇಸು ದಾಖಲಾಗಿದ್ದು ಇವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ದಲಿತ ಸಂಘಟನೆ ನಾಯಕರಿಗೆ ತೇಜೋವಧೆ ಮಾಡಿರುವ ಇವರ ಮೇಲೆ ಮಾನನಷ್ಟ ಮೊಕ್ಕದ್ಧಮೆ, ಜಾತಿನಿಂದನೆ ಕೇಸು ದಾಖಲಿಸಬೇಕು” ಎಂದು ಮನವಿಯಲ್ಲಿ ಕೋರಲಾಗಿದೆ. ಮುಖ್ಯ ಅಧಿಕಾರಿ ಮಲ್ಲನಗೌಡ ಬಿರಾದಾರ್ ಮನವಿ ಪತ್ರ ಸ್ವೀಕರಿಸಿದರು.

ಇದನ್ನೂ ಓದಿ: ವಿಜಯಪುರ | ಬಿಎಲ್‌ಒ ಕೆಲಸ ನೀಡದಂತೆ ಅಂಗನವಾಡಿ ಕಾರ್ಯಕರ್ತೆಯರ ಮನವಿ

ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಆನಂದ ಮದೊರು, ಬಸವರಾಜ ಸರೊರು, ಪರಶುರಾಮ ನಾಲತವಾಡ, ಸಂಜೀವ ಬಾಗೇವಾಡಿ, ಪ್ರಶಾಂತ ಕಾಳೆ, ಶಿವು ಕನ್ನೊಳ್ಳಿ, ಬಾಲಚಂದ್ರ ಹುಲ್ಲರು ಸೇರಿದಂತೆ ಹಲವಾರು ದಲಿತ ಮುಖಮಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...