ವಿಜಯಪುರ | ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಒಡಲ ದನಿ ಮಹಿಳಾ ಒಕ್ಕೂಟ ಪ್ರತಿಭಟನೆ

Date:

ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆ ಕೇಳಬೇಕು. ಅದಲ್ಲದೇ, ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು ಇಲ್ಲವಾದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಒಡಲ ದನಿ ಮಹಿಳಾ ಒಕ್ಕೂಟದ ವಿಜಯಪುರ ಜಿಲ್ಲಾ ಮುಖಂಡರಾದ ಭುವನೇಶ್ವರಿ ಕಾಂಬಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಅವರು ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಪ್ರಾರಂಭಿಸಿ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಪ್ರಮುಖ ರಸ್ತೆಯಲ್ಲಿ ವಿವಿಧ ಘೋಷಣೆಗಳನ್ನು ಕೂಗುವ ಹಾಗೂ ತಮಟೆ ಬಾರಿಸುವ ಮೂಲಕ ಆಡಳಿತ ಸೌಧದ ಎದುರು ಬೃಹತ್‌ ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಒಡಲ ದನಿ 1

ಮುಂದುವರಿದು ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವ ಅಮಿತ್ ಶಾ ಚಳಿಗಾಲದ ಅಧಿವೇಶನದಲ್ಲಿ ಅವಮಾನದ ಹೇಳಿಕೆ ನೀಡುವ ಮೂಲಕ ಸಂವಿಧಾನ ಶಿಲ್ಪಿ ಡಾ. ಬಿ.ಆ‌ರ್.ಅಂಬೇಡ್ಕ‌ರ್ ಅವರನ್ನು ಅಪಮಾನಗೊಳಿಸಿದ್ದಾರೆ.ಅಂಬೇಡ್ಕ‌ರ್ ಅಂಬೇಡ್ಕ‌ರ್ ಅಂಬೇಡ್ಕ‌ರ್ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕ‌ರ್ ಹೆಸರು ಜಪ ಮಾಡುವ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತಿತ್ತು ಎನ್ನುವ ಮೂಲಕ ಅಂಬೇಡ್ಕ‌ರ್ ಅವರನ್ನು ಅವಮಾನಿಸಿದ್ದಾರೆ. ಅಮಿತ್ ಶಾ ನೀಡಿರುವ ಹೇಳಿಕೆಯು ಅಂಬೇಡ್ಕ‌ರ್ ಅವರೊಂದಿಗೆ,ಅವರ ಸಂವಿಧಾನದಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿಯೂ ಮುಖ್ಯವಾಹಿನಿಗೆ ಬಂದಿರುವ ಎಲ್ಲ ಸಮುದಾಯಗಳಿಗೂ ಅವಮಾನಿಸಿದಂತಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ

ಈ ಸಂದರ್ಭದಲ್ಲಿ ಶ್ರೀಮತಿ ರಮಾಬಾಯಿ ಅಂಬೇಡ್ಕ‌ರ್ ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷ ಇಂದಿರಾಗಾಂಧಿ ಹೊಸಮನಿ, ಸುಶೀಲಾ ಬನಸೊಡೆ, ಬೈಜಾಬಾಯಿ ಹರಿಜನ, ಮಹಾದೇವಿ ಶಿವಶರಣ, ಭಾಗವ್ವ ದಶವಂತ, ಯಲಬಾಯಿ ಬನಸೊಡೆ, ಲಕ್ಷ್ಮೀ ದ್ರಾವಿಡ, ರೇಣುಕಾ ದಶವಂತ, ಪವಿತ್ರ ಮಾದರ, ಸುನಂದ ದಶವಂತ, ಜ್ಯೋತಿ ಹೊಸಮನಿ, ರೂಪಾ ಕಾಲೇಬಾಗ, ಪವಿತ್ರ ಸಾವಳಸಂಗ, ಸರೋಜನಿ ಕಟ್ಟಿಮನಿ, ಶೋಭಾ ಲೋಗಿ, ಗುಂಡವ್ವ ಕಾಂಬಳೆ, ಸುಜಾತ ಬಬಲಾದಿ, ಸುಭಾಸ ತಳಕೇರಿ, ಪಾಂಡುರಂಗ ರೇವಪ್ಪ ಹೊಸಮನಿ, ವಿಕಾಸ ಬನಸೋಡೆ, ಆನಂದ ಅಗರಖೇಡ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...