ವಿಜಯಪುರ | ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ

Date:

ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಅ.16ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಓರ್ವ ನ್ಯಾಯಾಧೀಶರ ಮೇಲಿಗೆ ಈ ರೀತಿ ಹಲ್ಲೆ ಮಾಡಿದರೂ ಕೇಂದ್ರ ಸರ್ಕಾರ ಏಕೆ ಆರೋಪಿ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ? ಆರೋಪಿಯ ಮೇಲೆ ಪ್ರಕರಣ ದಾಖಲು ಮಾಡಿಕೊಂಡು, ತಕ್ಷಣ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಅ.16 ರಂದು ಸಂವಿಧಾನದ ರಕ್ಷಣೆಗಾಗಿ ಜಾತಿ, ಪಕ್ಷ, ಧರ್ಮತೀತವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಹಿಂದುಳಿದವರು, ದಲಿತರು, ಸಾಹಿತಿಗಳು ಹಾಗೂ ಸಮಾನ ಮನಸ್ಕರು ಸಂಘಟನೆಗಳು ಭಾಗವಹಿಸಬೇಕು” ಗಣಿಹಾರ ವಿನಂತಿಸಿದರು.

“ಸಮಾಜದಲ್ಲಿ ಸಮಾನತೆಯನ್ನು ಬಯಸದ ಸನಾತನ ಹಿನ್ನೆಲೆಯವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಹಾಗೂ ಸಂಘ ಪರಿವಾರದವರಿಗೆ ಸಮಾನತೆ ಬೇಕಾಗಿಲ್ಲ. ದೇಶದ ದಲಿತರಿಗೆ ಸ್ಥಾನಮಾನ, ಸಾಮಾಜಿಕ ನ್ಯಾಯ ಸಿಗುವುದು ಬೇಕಾಗಿಲ್ಲ. ಆರ್ ಎಸ್ ಎಸ್ ಮುಸ್ಲಿಮರನ್ನು ತೋರಿಕೆಗೆ ವಿರೋಧಿಸುತ್ತಾರೆ. ಆದರೆ ಅವರ ಅಸಲಿ ಟಾರ್ಗೆಟ್ ದಲಿತರೆ ಆಗಿದ್ದಾರೆ. ಇನ್ನು ಆರ್ ಎಸ್ ಎಸ್ ಕಾರ್ಯ ಚಟುವಟಿಕೆಗಳನ್ನು ಸರ್ಕಾರಿ ಸ್ಥಳಗಳಲ್ಲಿ ಮಾಡುವುದು ಬಂದ್ ಮಾಡಬೇಕು ಎಂದು ಸಿಎಂ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದಾರೆ. ಇದನ್ನೇ ಕೆಲವರು ಆರ್ ಎಸ್ ಎಸ್ ಬ್ಯಾನ್ ಮಾಡುವಂತೆ ಪತ್ರ ಬರೆದಿದ್ದಾರೆ ಎಂದು ತಿರುಚಲಾಗಿದೆ. ಆರ್ ಎಸ್ ಎಸ್ ಮೇಲೆ ಸರಿಯಾದ ಸಾಕಾದಾರಗಳನ್ನು ಸಂಗ್ರಹಿಸಿ ಬ್ಯಾನ್ ಮಾಡುತ್ತಾರೆ ಎಂದರು. ಸಂಘಟನೆ ಹುಟ್ಟಿ ನೂರು ವರ್ಷಗಳು ಪೂರೈಸಿದ್ದೀರಿ, ದೇಶಕ್ಕಾಗಿ ಏನು ಮಾಡಿದ್ದೀರಿ ಅದನ್ನು ಜನರಿಗೆ ತಿಳಿಸಬೇಕು. ಆರ್ ಎಸ್ ಎಸ್ ಸಂಘಟನೆ ಅಧಿಕೃತವಾಗಿ ನೋಂದಣಿಗೆ ಆಗಿಲ್ಲ. ಇಷ್ಟೇ ಅಲ್ಲದೆ ಕೈಯಲ್ಲಿ ಲಾಟಿ ಹಿಡಿದುಕೊಂಡು ಗಲ್ಲಿಗಳಲ್ಲಿ ಅಡ್ಡಾಡಿದರೆ ಏನು ಪ್ರಯೋಜನವಿದೆ? ಇದೆಲ್ಲವನ್ನು ದೇಶದ ಜನರಿಗೆ ಹೆದರಿಸಲು ಅವರು ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಇರುವಲ್ಲಿ ಆರ್ ಎಸ್ ಎಸ್ ನವರು ಬೇಹುಗಾರಿಕೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

ಬಸವ ಚಿಂತಕ ಡಾ. ಜೆ ಎಸ್ ಪಾಟೀಲ ಮಾತನಾಡಿ, “ಸಂವಿಧಾನ, ಸಾಮಾಜಿಕ ನ್ಯಾಯ ಬೆಂಬಲಿಸುವವರು ಪ್ರತಿಭಟನೆಗೆ ಬೆಂಬಲ ಕೊಡಬೇಕು. ಕನ್ನೆರಿ ಸ್ವಾಮೀಜಿ ಕಾವಿ ಪುಡಾರಿಯಾಗಿದ್ದು, ಅವರು ಸ್ವಾಮೀಜಿಯಾಗಲು ಯೋಗ್ಯರಲ್ಲ. ಲಿಂಗಾಯತ ಸಮಾಜವನ್ನು ನಾಶ ಮಾಡಲೆಂದೇ ಹುಟ್ಟಿರುವವನು ಕನ್ನೆರಿ ಸ್ವಾಮೀಜಿ” ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸನಗೌಡ ಹಾರನಾಳ, ರವಿಕುಮಾರ ಬಿರಾದಾರ, ಪ್ರಭುಗೌಡ ಪಾಟೀಲ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...