ವಿಜಯಪುರ | ಪ್ಯಾಲೆಸ್ತೀನ್‌, ಲೆಬನಾನ್‌ ಮೇಲೆ ಇಸ್ರೇಲ್ ಆಕ್ರಮಣ ಖಂಡಿಸಿ ಪ್ರತಿಭಟನೆ

Date:

ಪ್ಯಾಲೆಸ್ತೀನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನ ಅಕ್ರಮಣವನ್ನು ಖಂಡಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್‌ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಐ.ಸಿ.ಓ.ಆರ್. (ಇಂಟರ್ ನ್ಯಾಷನಲ್ ಕೋ ಆರ್ಡಿನೇಶನ್ ಆಪ್ ರೆವ್ಯೂಲುಷನರಿ ಪಾರ್ಟಿಸ್ ಆ್ಯಂಡ್ ಆರ್ಗನೈಜೇಷನ್) ಕರೆಯ ಮೇರೆಗೆ ಇಡೀ ದೇಶಾದ್ಯಂತ ಎಸ್.ಯು.ಸಿ.ಐ. ಕಮ್ಯುನಿಸ್ಟ್ ಇದರ ಭಾಗವಾಗಿ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಬಿ.ಭಗವಾನರೆಡ್ಡಿ, “ಇಸ್ರೇಲ್ ಪ್ಯಾಲೆಸ್ತೀನ್‌ನ ಶಾಲೆ, ಆಸ್ಪತ್ರೆ, ಮಾಧ್ಯಮ ಕಚೇರಿಗಳು, ನಾಗರಿಕ ನಿವಾಸಗಳ ಮೇಲೆ ಬಾಂಬ್ ದಾಳಿ ಮಾಡುತ್ತಾ, 40 ಸಾವಿರಕ್ಕೂ ಹೆಚ್ಚು ನಾಗರಿಕರನ್ನು ಹತ್ಯೆಗೈದಿದೆ. ಭಯಾನಕ ಮತ್ತು ಕ್ರೂರ ದಾಳಿಗಳು ಪ್ರಾದೇಶಿಕ ಯುದ್ಧದತ್ತ ಒಂದು ಹೆಜ್ಜೆಯಾಗಿದೆ. ಮಧ್ಯ ಪ್ರಾಚ್ಯದಲ್ಲಿ ಮಿಲಿಟರಿ ಅಧಿಪತ್ಯವನ್ನು ಸಾಧಿಸಲು ಅಮೇರಿಕ ಮೊದಲಿನಿಂದಲೂ ಪ್ರಯತ್ನಿಸುತ್ತಾ ಬಂದ ಭಾಗವಾಗಿ, ಈ ಯುದ್ಧಗಳನ್ನು ಅರ್ಥ ಮಾಡಿಕೊಳ್ಳಬೇಕು. ಇಸ್ರೇಲ್ ವಿಶ್ವಸಂಸ್ಥೆಯ ಗೊತ್ತುವಳಿಗಳನ್ನು ಧಿಕ್ಕರಿಸುತ್ತಲೇ ಬಂದಿದೆ. ಪ್ಯಾಲೆಸ್ತೀನ್‌ ವಿಮೋಚನಾ ಹೋರಾಟವನ್ನು ಮಾನ್ಯಮಾಡಿ ಭಾರತ ಸರ್ಕಾರವು ಸಹ ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಪರಂಪರೆಯನ್ನು ಎತ್ತಿ ಹಿಡಿಯಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತಮಿಳುನಾಡು | ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ ಪೈಲಟ್

ಯುದ್ಧಕೋರ ಇಸ್ರೇಲ್ ನ ಸಾಮ್ರಾಜ್ಯಶಾಹಿ ಧೋರಣೆಯ ವಿರುದ್ಧ ಹೋರಾಟ ಮಾಡಲು ದೇಶದ ಶಾಂತಿ ಯುವಜನತೆ ಮುಂದಾಗಬೇಕು ಎಂದರು.

ಸಂಖ್ಯಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಸಿ.ಬಿ.ಪಾಟೀಲ ಮಾತನಾಡಿ, “1948ರಿಂದ ಭಾರತವು ಪ್ಯಾಲೆಸ್ತೀನ್‌ ಅನ್ನು ಬೆಂಬಲಿಸುತ್ತ ಬಂದಿದೆ. ಆದರೆ ವಾಜಪೇಯಿಯವರ ಕಾಲದಲ್ಲಿ ಭಾರತದ ವಿದೇಶಾಂಗ ನೀತಿ ಬದಲಾಗಿ ಯುದ್ಧಕೋರ ಇಸ್ರೇಲ್ ಪರವಾಗಿ ಬದಲಾಯಿತು. ಮುಂದಿನ ಎಲ್ಲ ಸರಕಾರಗಳು ಇದನ್ನೇ ಮುಂದುವರೆಸಿಕೊಂಡು ಹೋಗುತ್ತಿವೆ. ಇದು ಶಾಂತಿಪ್ರೀಯ ಭಾರತೀಯರ ವಿರೋಧಿ ನೀತಿಯಾಗಿದೆ” ಎಂದರು.

ವಿಜಯಪುರದ ಹಿರಿಯ ಪತ್ರಕರ್ತರಾದ ಅನಿಲ ಹೊಸಮನಿ ಮಾತನಾಡಿ, ಜಗತ್ತಿನಾದ್ಯಂತ ಇಂದು ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸ ನಡೆಯುತ್ತಿದೆ. ಸ್ವಾತಂತ್ರ್ಯ ಮತ್ತು ಸೌಹಾರ್ದಪ್ರಿಯ ಜನತೆ ಒಂದಾಗಿ ಈ ಶಕ್ತಿಗಳನ್ನು ಸೋಲಿಸಬೇಕು ಎಂದರು.

ಸ್ಲಂ ಅಭಿವೃದ್ಧಿ ಸಮಿತಿಯ ರಾಜ್ಯ ಮುಖಂಡರಾದ ಅಕ್ರಮ ಮಾಶಾಳಕರ ಮಾತನಾಡಿ, “ಸಾಮ್ರಾಜ್ಯಶಾಹಿ ರಾಷ್ಟ್ರಗಳ ಬೆಂಬಲದೊಂದಿಗೆ ಇಸ್ರೇಲ್ ನಡೆಸುತ್ತಿರುವ ದಾಳಿ ಮನುಕುಲ ವಿರೋಧಿಯಾಗಿದೆ. ನಮ್ಮ ದೇಶದ ಯುದ್ಧವಿರೋಧಿ ಮತ್ತು ಶಾಂತಿಪ್ರಿಯ ಜನತೆ ಒಂದಾಗಿ ಅನ್ಯಾಯಕ್ಕೊಳಗಾದ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಪ್ಯಾಲೆಸ್ತೀನ್‌ ಮತ್ತು ಲೆಬನಾನ್ ರಾಷ್ಟ್ರಗಳ ಪರವಾಗಿ ನಿಲ್ಲಬೇಕು” ಎಂದರು.

ಈ ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಹೆಚ್. ಟಿ. ಸಿದ್ಧಲಿಂಗ ಬಾಗೇವಾಡಿ, ಶಿವರಂಜಿನಿ ಎನ್. ಬಿ. ಪೀರ ಜಮಾದಾರ, ಪಕ್ಷದ ಸದಸ್ಯರುಗಳಾದ ಮಹಾದೇವಿ ಧರ್ಮ ಶೆಟ್ಟಿ, ಕಾಶಿಬಾಯಿ ಜನಗೊಂಡ, ಶರತ್ ಪಿ.ಕೆ.. ಕಾವೇರಿ, ಸಿದ್ರಾಮ ಹಿರೇಮಠ, ಅಶೋಕ ದೇಸಾಯಿ, ಮುಂತಾದವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...