ವಿಜಯಪುರ | ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಒದಗಿಸಿ: ರೈತ ಸಂಘದ ಯುವ ಸಂಚಾಲಕ ಸಿದ್ದನಗೌಡ ರೆಡ್ಡಿ ಆಗ್ರಹ

Date:

ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ಅಂಗಡಗೇರಿ ಗ್ರಾಮದ ರೈತರಿಗೆ ನೀರಾವರಿ ಭಾಗ್ಯ ಬರುತ್ತದೆ, ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ನಿರಾಶೆ ಉಂಟಾಗಿದೆ. ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಒದಗಿಸಬೇಕು ಹಾಗೂ ಬಸವನ ಬಾಗೇವಾಡಿ, ನಿಡುಗುಂದಿಯನ್ನು ನೀರಾವರಿ ತಾಲೂಕನ್ನಾಗಿಸಬೇಕು ಎಂದು ವಿಜಯಪುರ ಜಿಲ್ಲೆಯ ರೈತ ಸಂಘದ ಯುವ ಸಂಚಾಲಕ ಸಿದ್ದನಗೌಡ ರೆಡ್ಡಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಇನ್ನೂ ದೊರೆಯದ ನೀರಾವರಿ ಭಾಗ್ಯ ಪಟ್ಟಣದಲ್ಲಿ ನಿರುದ್ಯೋಗವನ್ನು ಅನುಭವಿಸಿ ತಮ್ಮುರಿನತ್ತ ಬಂದು ವ್ಯವಸಾಯ ಕೃಷಿ ಮಾಡಬೇಕೆಂಬ ಹಂಬಲವಿರುವ ಅನೇಕ ಯುವಕರಲ್ಲಿ ನಮ್ಮೂರಿಗೆ ನೀರಾವರಿ ಭಾಗ್ಯ ಇಂದಲ್ಲ ನಾಳೆ ಲಭಿಸುವುದು ಎಂಬ ಆಶಾಭಾವನೆ ಇಟ್ಟುಕೊಂಡಿದ್ದರು. ಅದೆಲ್ಲವೂ ಹುಸಿಯಾಗಿದ್ದು, ರೈತ ಯುವಕರ ಆಕ್ರೋಶದ ಕಟ್ಟೆ ಒಡೆಯುತ್ತಿದೆ ಎಂದು ಹೇಳಿದರು.

ಜನಪ್ರತಿನಿಧಿಗಳ ಹಾಗೂ ಶಾಸಕರ ಮುತ್ತಿಗೆ ಹಾಕುವ ಕಾಲ ದೂರವಿಲ್ಲ ಎಂಬ ಭಾವನೆ ರೈತ ಹಾಗೂ ಯುವಕರಲ್ಲಿ ಮೂಡುತ್ತಿದೆ. ಸುತ್ತಮುತ್ತಲಿನ ಎಲ್ಲ ಗ್ರಾಮಗಳಿಗೂ ನೀರಾವರಿ ವ್ಯವಸ್ಥೆ ಆದರೂ ಕೂಡ ಅಂಗಡಗೇರಿ ಗ್ರಾಮದ ಪಾಲಿಗೆ ನೀರಾವರಿ ವ್ಯವಸ್ಥೆ ಇನ್ನೂ ಕನಸಾಗಿಯೇ ಉಳಿದಿದೆ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಭಾಗದ ಶಾಸಕರು ಅಂಗಡಗೇರಿ ಎಂಬ ಗ್ರಾಮ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನಲ್ಲಿ ಅಂಗಡಗೇರಿ ಗ್ರಾಮ ಇದೆ ಎಂಬುವುದನ್ನು ಇನ್ನೊಮ್ಮೆ ಮನವರಿಕೆ ಮಾಡುತ್ತಿದ್ದೇವೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿಯ ಭಾಗ್ಯ ಇದೆ. ತೆಲಗಿ, ಮಟ್ಟಿಹಾಳ,ಚೀರಲದಿನ್ನಿ, ಕೂಡಗಿ,ಮಸೂತಿ,ಮಲಘಾನ, ಸಿದ್ದನಾಥ ಹಣಮಾಪೂರ, ಕವಲಗಿ, ಅರಷಣಗಿ, ಗಣಿ, ಚೀಮ್ಮಲಗಿ, ವಂದಾಲ, ಈಗಾಗಲೇ ನೀರಾವರಿಯ ಭೂಮಿಗಳಾಗಿದ್ದು ಜಾಕ್ವೇಲ್ ಮುಖಾಂತರ ನೀರಾವರಿಯ ಸೌಲಭ್ಯವನ್ನು ಏಕೆ ಒದಗಿಸಲಾಗುತಿಲ್ಲ ಎಂದು ಪ್ರಶ್ನಿಸಿದ್ದಾರೆ.

ದನ್ನು ಓದಿದ್ದೀರಾ? ಉಡುಪಿ‌ | ಸರ್ವರ್ ಸಮಸ್ಯೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆಗೆ ಸೂಚನೆ

ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಿಗೂ ನೀರಾವರಿಯಾದರೂ ಕೂಡಾ ನಮ್ಮೂರಿಗೆ ಇನ್ನೂ ನೀರಾವರಿಯ ಸೌಲಭ್ಯ ದೊರಕುತ್ತಿಲ್ಲ. ನೀರಾವರಿ ಆದರೆ ರೈತರ ಬಾಳು ಹಸನಾಗುವುದು ಎಂಬ ಆಶಾಭಾವನೆಯೊಂದಿಗೆ ರೈತರು ಇನ್ನೂ ಕಾಲಕಳೆಯುತ್ತಿದ್ದಾರೆ. ಇನ್ನೂ ಆದಷ್ಟು ಬೇಗ ಸರ್ಕಾರ ಮತ್ತು ಶಾಸಕರು ನಮ್ಮೂರಿನತ್ತ ಗಮನ ಹರಿಸಿ ರೈತರ ಗೊಳು ಆಲಿಸುವರೆಂದು ಅಂದುಕೊಂಡಿದ್ದೇವೆ. ಈ ತಾರತಮ್ಯವನ್ನು ಹೋಗಲಾಡಿಸಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡುವುದನ್ನು ಬಿಟ್ಟು ಬಸವನ ಬಾಗೇವಾಡಿ ಹಾಗೂ ನಿಡುಗುಂದಿ ತಾಲೂಕು ಸಂಪೂರ್ಣ ನೀರಾವರಿ ಗ್ರಾಮಗಳನ್ನಾಗಿ ಮಾಡಬೇಕು ಎಂದು ಸಿದ್ದನಗೌಡ ರೆಡ್ಡಿ ಒತ್ತಾಯಿಸಿದ್ದಾರೆ.

ನೀರು ಪ್ರತಿಯೊಂದು ಗ್ರಾಮಕ್ಕೂ ಅತಿ ಅವಶ್ಯಕ. ಕೃಷಿ ಜನ ಜಾನುವಾರುಗಳಿಗೆ. ನೀರು ಒದಗಿಸಿ ಆದಷ್ಟು ಬೇಗ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಶೀಘ್ರದಲ್ಲಿ ಅಂಗಡಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರಾವರಿಗೊಳಿಸಲು ಮತ್ತು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಶೀಘ್ರದಲ್ಲಿ ಮಾಡಬೇಕೆಂದುನಮ್ಮ ಕ್ಷೇತ್ರದ ರೈತರು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...