ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿ, “ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆ ಬಡಜನರ ಜೀವನ ಮಟ್ಟವನ್ನು ಆರ್ಥಿಕವಾಗಿ ಸಬಲಗೊಳಿಸಲು ಸಹಕಾರಿಯಾಗಿವೆ. ಈ ಯೋಜನೆಗಳ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿ ನಾಟಕ, ಜಾನಪದ ಕಲಾ ತಂಡಗಳು ಹಾಗೂ ಕಲಾ ಜಾಥಾ ಮೂಲಕ ಆಯೋಜಿಸಿ ಜನಜಾಗೃತಿ ಮೂಡಿಸಲಾಗುತ್ತಿದೆ” ಎಂದರು.

“ಈ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನವು ಜಿಲ್ಲೆಯ ವಿವಿಧ ಗ್ರಾಮಪಂಚಾಯತಿ ವ್ಯಾಪ್ತಿಯ 20 ಗ್ರಾಮಗಳಲ್ಲಿ ಡಿಸೆಂಬರ್ 18ರವರೆಗೆ ಎರಡು ಎಲ್‌ಇಡಿ ವಾಹನಗಳ ಮೂಲಕ ಸಂಚರಿಸಿ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಸರ್ಕಾರದ ಜನಪರ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 09 at 4.52.53 PM

ಮಲಘಾಣ, ಕಲಗುರ್ಕಿ, ಕೂಡಗಿ, ಮುತ್ತಗಿ, ಸಂಕನಾಳ, ಸಾತಿಹಾಳ, ಡೋಣೂರ, ಎಂಭತ್ನಾಳ, ಹಡಗಲಿ, ಕಗ್ಗೋಡ, ಮಧಬಾವಿ, ನಾಗಠಾಣ, ಅಥರ್ಗಾ, ತಡವಲಗಾ, ಲಿಂಗದಳ್ಳಿ, ನಿಂಬಾಳ, ಹೊರ್ತಿ, ಸಣಕನಹಳ್ಳಿ, ಕನ್ನಾಳ ಹಾಗೂ ಅರಕೇರಿ ಗ್ರಾಮಗಳಲ್ಲಿ ಸಂಚರಿಸಿ ಬೀದಿ ನಾಟಕ ಹಾಗೂ ಜಾನಪದ ಕಲಾತಂಡಗಳ ಕಲಾವಿದರು ಈ ಯೋಜನೆಗಳ ಕುರಿತು ಗೀತೆಗಳು, ಎಲ್‌ಇಡಿ ವಾಹನ, ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸುವರು. ಈ ಕಾರ್ಯಕ್ರಮ ಚಾಲನಾ ಸಂದರ್ಭದಲ್ಲಿ ವಿವಿಧ ಕಲಾವಿದರು ಪಂಚ ಗ್ಯಾರಂಟಿ ಯೋಜನೆಯ ಬೀದಿ ನಾಟಕ ಹಾಗೂ ಗೀತೆಗಳ ಪ್ರದರ್ಶನ ನೀಡಿದರು.

ಇದನ್ನೂ ಓದಿ: ವಿಜಯಪುರ | ನಕಲಿ ವೈದ್ಯರ ಪತ್ತೆ; 22 ಕ್ಲಿನಿಕ್‌ಗೆ ಬೀಗ

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೊರಣ್ಣವರ, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಎಸ್ ಎಸ್ ನಾಯಕಲಮಠ, ಸುರೇಶ ಚಾವಲರ, ಪ್ರೇಮಕುಮಾರ ಪವಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಶಿರಸ್ತೇದಾರ ಸಲೀಂ ಬಿಜಾಪುರ, ಸಚ್ಚಿದಾನಂದ ತೇರದಾಳ, ರಾಜು ಹಾದಿಮನಿ, ಡಿ ಎಂ ಕರ್ನಾಳ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...