ವಿಜಯಪುರ | ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಧ್ವನಿಯೆತ್ತುವ ಕೆಲಸವಾಗಲಿ: ವಿರಾತಿಶಾನಂದ ಸ್ವಾಮೀಜಿ

Date:

ಇವತ್ತಿನ ಯುವ ಪೀಳಿಗೆ ಮೊಬೈಲ್ ಜಗತ್ತಿನಲ್ಲಿ ಓಡಾಡುತ್ತ, ವೈಚಾರಿಕತೆ ಮತ್ತು ಅಂಬೇಡ್ಕರ್ ವಿಚಾರದಿಂದ ದೂರ ಉಳಿಯುತ್ತಿದ್ದು, ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಧ್ವನಿಯೆತ್ತುವ ಕೆಲಸಕ್ಕೆ ಮುಖಮಾಡಲಿ ಎಂದು ಮನುಗೊಳಿ ವಿರಕ್ತ ಮಠದ ವಿರಾತಿಶಾನಂದ ಸ್ವಾಮೀಜಿ ತಿಳಿಸಿದರು.

ನಗರದ ಬೌದ್ಧ ವಿಹಾರದಲ್ಲಿ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆಯ ನಿಮಿತ್ಯ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾವೆಲ್ಲರೂ ಗಟ್ಟಿಯಾಗಿ ಸಂವಿಧಾನ ವಿರೋಧ ಮಾಡುವವರ ವಿರುದ್ಧ ವೈಚಾರಿಕ ಧ್ವನಿ ಎತ್ತಬೇಕಿದೆ. ಬುದ್ಧ, ಬಸವ, ಅಂಬೇಡ್ಕರ್ ವಿಚಾರ ಅರ್ಥೈಸಿಕೊಂಡು, ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಿದೆ. ಆದರೆ ಇವತ್ತಿನ ಯುವಪೀಳಿಗೆ ಮೊಬೈಲ್ ಜಗತ್ತಿನಲ್ಲಿ ಓಡಾಡುತ್ತ, ವೈಚಾರಿಕತೆ ಮತ್ತು ಅಂಬೇಡ್ಕರ್ ವಿಚಾರದಿಂದ ದೂರ ಉಳಿಯುತ್ತಿದ್ದಾರೆ” ಎಂದು ಬೇಸರಪಟ್ಟರು.

“ಶಿಕ್ಷಣ ಸಂಘಟನೆ ಹೋರಾಟದ ಮೂಲಕ ಮತ್ತೆ ಗಟ್ಟಿಯಾದ ವೈಚಾರಿಕ ಪಡೆಯನ್ನು ಕಟ್ಟಬೇಕಿದೆ ಹಾಗೂ ಅಂಬೇಡ್ಕರ್ ದಾರಿಯಲ್ಲಿ ನಡೆಯಬೇಕಿದೆ. ಜತೆಗೆ ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಧ್ವನಿಯೆತ್ತುವ ಕೆಲಸವಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಅಭಿವೃದ್ಧಿ ಪ್ರಾಧಧಿಕಾರ ಸದಸ್ಯೆ ದಾಕ್ಷಾಯಿಣಿ ಹುಡೆದ ಮಾತನಾಡಿ, “ದೇಶಕ್ಕೆ ಸಂವಿಧಾನ ಕೊಟ್ಟ ಮಹಾನ್ ಮಾನವತಾವಾದಿ ಡಾ. ಬಿ ಆರ್ ಅಂಬೇಡ್ಕರ್ ವಿಚಾರ ಇಂದು ಅತ್ಯವಶ್ಯಕವಾಗಿ ಬೇಕಾಗಿದೆ. ಅಂಬೇಡ್ಕರ್ ಪರಿನಿರ್ವಾಣವು ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ ನಿರಂತರವಾಗಿ ಸಮುದಾಯಗಳ ಮಧ್ಯೆ ಬೆಳಕು ಚೆಲ್ಲುವ ಕೆಲಸವಾಗಬೇಕು” ಎಂದರು.

ಫಾದರ್ ಟಿಯೋಲ್ ಮಾಚಾದೊ ಮಾತನಾಡಿ, “ಅತ್ಯುತ್ತಮವಾಗಿ ದೊರೆತ ಅಂಬೇಡ್ಕರ್ ಸಂವಿಧಾನವನ್ನು ಸದ್ಭಳಕೆ ಮಾಡಿಕೊಂಡು ಶೋಷಿತ ಸಮುದಾಯಗಳನ್ನು ಮುಂಚೂಣಿಗೆ ತರುವ ಕೆಲಸ ಅಗತ್ಯವಾಗಿದೆ” ಎಂದರು.

ಈ ವರದಿ ಓದಿದ್ದೀರಾ? ವಿಜಯಪುರ | ಕಾರು-ಕಬ್ಬು ಕಟಾವು ಮಷಿನ್ ನಡುವೆ ಭೀಕರ ಅಪಘಾತ; ಐವರ ಸಾವು

ರಾಜಶೇಖರ ಯಡಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅನಿಲ ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚನ್ನು ಕಟ್ಟಿಮನಿ ಸ್ವಾಗತಿಸಿದರು. ಸಂಜು ಕಾಂಬೋಗಿ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಪ್ರಭುಗೌಡ ಪಾಟೀಲ, ವಿದ್ಯಾವತಿ ಅಂಕಲಿಗಿ, ಜೆ ಎಸ್ ಪಾಟೀಲ, ಬಿ ಎಸ್ ಗಸ್ತಿ, ಅಶೋಕ ಛಲವಾದಿ, ಎಂ ಬಿ ಕಟ್ಟಿಮನಿ, ಸಿದ್ದಲಿಂಗ ಬಾಗೇವಾಡಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...