ವಿಜಯಪುರ | ರೈತರ ಪರವಾಗಿ ಧ್ವನಿ ಎತ್ತಿ; ಶಾಸಕರಿಗೆ ಸಂಗಮೇಶ ಸಗರ ಆಗ್ರಹ

Date:

ಬಜೆಟ್ ಪೂರ್ವ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲಾ ಎಂಟೂ ಶಾಸಕರುಗಳು ರೈತರ ಪರವಾಗಿ ಧ್ವನಿ ಎತ್ತಿ, ರೈತರ ಶ್ರೇಯೋಭಿವೃದ್ಧಿಗಾಗಿ ಮಾತನಾಡಿ. ರೈತರ ಮತದಿಂದ ಆರಿಸಿ ಬಂದಿರುವ ತಾವು ಅವರ ಋಣ ತೀರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆಂದೂ ಕಂಡು ಕಾಣದಂತಹ ಬೀಕರ ಬರಗಾಲ ನಮ್ಮ ರಾಜ್ಯಕ್ಕೆ ಒಕ್ಕರಿಸಿದೆ. ಕಳೆದ 7-8 ತಿಂಗಳಿನಿಂದ ಮಳೆ ಕಾಣದೇ ಕಂಗಾಲಾಗಿರುವ ರೈತ ಸಮುದಾಯವನ್ನು ಗಣನೆಗೆ ತೆಗೆದುಕೊಂಡು, ನಾಳೆ ನಡೆಯಲಿರುವ ಬಜೆಟ್ ಪೂರ್ವ ಅಧಿವೇಶನದಲ್ಲಿ ಜಿಲ್ಲೆಗೆ ಸಂಬಂಧಿಸಿದ ಎಲ್ಲಾ 8 ಶಾಸಕರುಗಳು ರೈತರ ಪರವಾಗಿ ಧ್ವನಿ ಎತ್ತಿ, ರೈತರ ಮತದಿಂದ ಆರಿಸಿ ಬಂದಿರುವ ತಾವುಗಳು ಅವರ ಋಣ ತೀರಿಸಬೇಕೆಂದರು.

ಅಧಿವೇಶನವೆಂದರೆ ಕೇವಲ ಜಗಳವಾಡುವುದು ಆಗಬಾರದು, ಜಿಲ್ಲೆಗೆ ಹಾಗೂ ಜಿಲ್ಲೆಯ ರೈತರಿಗೆ ಅವಶ್ಯವಾಗಿ ಬೇಕಾಗಿರುವ ಹೊಸ ಯೋಜನೆಗಳ ಕುರಿತು ಹಾಗೇ ನೆನಗುದಿಗೆ ಬಿದ್ದಿರುವ ಕಾಮಗಾರಿಗಳ ಹಣವನ್ನು ಮಂಜೂರು ಮಾಡುವಂತೆ ಜಿಲ್ಲೆಯ ಶಾಸಕರು ಸಧನದಲ್ಲಿ ಧ್ವನಿ ಎತ್ತಬೇಕು. ಕೇಳದಿದ್ದರೇ ಯಾರು ಏನು ಕೊಡುವುದಿಲ್ಲ ಈಗ ಸಮಯ ಬಂದಿದೆ. ಜಿಲ್ಲೆಯ ಶ್ರೇಯೋಭಿವೃದ್ದಿಗೆ ಧ್ವನಿಯಾಗುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಅನೇಕ ರೈತರು ಆತ್ಮಹತೈ ಮಾಡಿಕೊಂಡಿದ್ದಾರೆ, ರೈತರ ಬಗ್ಗೆ ಕೇವಲ ಬಾಯಿ ಮಾತಿನಲ್ಲಿ ಕನಿಕರ ತೊರದೇ ಬರಗಾಲದಿಂದ ತತ್ತರಿಸಿರುವ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಬೆಳೆದಿರುವ ಎಲ್ಲಾ ಬೆಳೆಗಳಿಗೆ ವರ್ಷಪೂರ್ತಿ ಬೆಂಬಲ ಬೆಲೆ ನೀಡಿ ಖರೀದಿಸಬೇಕು. ಕೃಷಿಗೆ ಬಡ್ಡಿ ರಹಿತ ಬೇಷರತ್ತ ಸಾಲ ಸಿಗುವಂತಾಗಬೇಕು, ಕೃಷಿ ಚಟುವಟಿಕೆ ನಡೆಯದೇ ರೈತ ಕಾರ್ಮಿಕರು ಗುಳೆ ಹೋಗುತ್ತಿರುವುದನ್ನು ತಪ್ಪಿಸಲು ಉದ್ಯೋಗ ಸೃಷ್ಠಿಸಬೇಕು, ರೈತರಿಗೆ ಸಂಬಂಧಿಸಿದ ಕೃಷಿ, ಅರಣ್ಯ, ತೋಟಗಾರಿಕೆ, ಮೀನು, ಪಶುಸಂಗೋಪನೆ, ಇಲಾಖೆಯಲ್ಲಿ ಅವಶ್ಯವಿರುವ ಎಲ್ಲಾ ಸಾಧನ ಸಲಕರಣೆಗಳು, ಬೀಜ, ಗೊಬ್ಬರ, ಸ್ಪಿಂಕಲರ್ ಪೈಪ ಸೇರಿದಂತೆ ಎಲ್ಲ ಉಪಕರಣಗಳು ದೊರೆಯಬೇಕು ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಬೇಕು ಎಂದು ಆಗ್ರಹಿಸಿದರು.

ಆಲಮಟ್ಟಿ ಆಣೆಕಟ್ಟು 519.6ರಿಂದ 524.256ಕ್ಕೆ ಎತ್ತರಿಸಿ, ಪರಿಹಾರ ಹಾಗೂ ಪುರ್ನವಸತಿ ಕಲ್ಪಿಸಬೇಕು, ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಏತ ನೀರಾವರಿ ಯೋಜನೆಗಳನ್ನು ಗುಣಮಟ್ಟದಿಂದ ನಿರ್ಮಿಸಿ, ಜಿಲ್ಲೆಯ ಕಡೆಯ ಹಳ್ಳಿಯ ಕಟ್ಟಕಡೆಯ ರೈತರ ಜಮೀನಿಗೂ ನೀರು ಹರೆಯಬೇಕು.

ರೈತರಿಗೆ ಮರಣ ಶಾಸನವಾಗಿರುವ ಭೂ ಸುಧಾರಣಾ ಕಾಯ್ದೆ, ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಜಾನುವಾರ ಹತ್ಯೆ, ತಂದಿರುವ ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರ ತಂದಿರುವುದನ್ನು ದೇಶದ ಎಲ್ಲಾ ರೈತರು ವಿರೋಧಿಸಿರುವ ಪ್ರತಿಫಲವಾಗಿ ಕೇಂದ್ರದಲ್ಲಿ ಮರಳಿ ಪಡೆದಿದ್ದರು ರಾಜ್ಯ ಸರಕಾರಗಳು ಇನ್ನು ಮರಳಿ ಪಡೆದಿಲ್ಲ, ಅಧಿಕಾರಕ್ಕೆ ಬರುವ ಮುಂಚೆ ರೈತರಿಗೆ ನೀಡಿರುವ ಆಶ್ವಾಸನೆಯಂತೆ ಕೂಡಲೆ ಈ ಅಧಿವೇಶನದಲ್ಲಿ ಈ ಎಲ್ಲಾ ಕಾಯ್ದೆಗಲನ್ನು ಪಾವಸ ಪಡೆಯಬೇಕು ಎಂದು ಒತ್ತಾಯಿಸಿದರು.

ಸರಿಸುಮಾರು ಶೇ.75ರಷ್ಟು ರೈತರು  ಕೃಷಿಯನ್ನೇ ಅವಲಂಭಿಸಿರುವ ಈ ರಾಜ್ಯದಲ್ಲಿ ರೈತಪರ ಚಿಂತನೆಗಳನ್ನು ಮಾಡಿ. ತಜ್ಞರಿಂದ, ಹಿರಿಯ ರೈತ ಹೋರಾಟಗಾರರಿಂದ ಮಾರ್ಗದರ್ಶನ ಪಡೆದು ರೈತಪರ ಬಜೇಟ್ ಮಂಡನೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಲ್ಲಿ ಸಮಸ್ತ ರೈತ ಬಾಂಧವರ ಪರವಾಗಿ ಕೇಳಿಕೊಳ್ಳುತ್ತೆವೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...