ವಿಜಯಪುರ | ಸಾವಿರಾರು ಬೆಂಬಲಿಗರೊಂದಿಗೆ ರಾಜು ಆಲಗೂರು ನಾಮಪತ್ರ ಸಲ್ಲಿಕೆ; ಬಿಸಿಲನ್ನೂ ಲೆಕ್ಕಿಸದೆ ಮೊಳಗಿದ ಕಾಂಗ್ರೆಸ್ ಜೈಕಾರ

Date:

ಮೋದಿಯವರ ಸುಳ್ಳುಗಳೆಲ್ಲ ಬಹಿರಂಗವಾಗಿವೆ. ಅಚ್ಛೇ ದಿನಗಳೆಂದಯ ಹೇಳಿ ಅಧಿಕಾರ ಹಿಡಿದವರು ಕೆಟ್ಟ ದಿನಗಳನ್ನು ಕೊಟ್ಟರು. ನೋಟ್ ಬಂದ್, ಬೆಲೆ ಏರಿಕೆ, ಜಿಎಸ್‌ಟಿಯಿಂದ ದೇಶವನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಕಾಂಗ್ರೆಸ್ ದೇಶವನ್ನು ಕಟ್ಟಿದ ಪಕ್ಷ. ಸ್ವಾತಂತ್ರ್ಯ ಬಂದ ನಂತರ ಸೂಜಿಯೂ ತಯಾರಾಗದ ಸ್ಥಿತಿಯಲ್ಲಿದ್ದ ಭಾರತವನ್ನು ಉಜ್ವಲಗೊಳಿಸಿದ್ದು ಕಾಂಗ್ರೆಸ್‌ ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರು ಅವರು ಸೋಮವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ವೇಳೆ ಮಾತನಾಡಿದರು.

“ನೀರಾವರಿ ಯೋಜನೆಗಳು, ಗ್ಯಾರಂಟಿ ಫಲಪ್ರದವಾದ ವಿಷಯಗಳನ್ನು ಗಮನಿಸಿ ಮತದಾರರು ಈ ಬಾರಿ ಆಲಗೂರರನ್ನು ಆರಿಸಿ ಕಳಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಶಿವಾನಂದ ಪಾಟೀಲ್‌ ಮಾತನಾಡಿ, “ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಯೋಗ್ಯ ಬೆಲೆ, ಹೆಣ್ಣುಮಕ್ಕಳಿಗೆ ವರ್ಷಕ್ಕೆ ಲಕ್ಷ ರೂ. ನೀಡುವ ಗ್ಯಾರಂಟಿ ಘೋಷಿಸಿದೆ. ರಾಜ್ಯದಲ್ಲಿ ಸಿದ್ದರಾಮಯ್ಯರ ಸರ್ಕಾರ ನೀಡಿದ್ದ ಭರವಸೆಗಳನ್ನೆಲ್ಲ ಈಡೇರಿಸಿದೆ. ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಬದಲಾವಣೆ ಗಾಳಿ ಬೀಸಿದೆ. ಇವೆರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.‌

ತೆರೆದ ವಾಹನ ಏರಿದ ನಾಯಕರುಗಳು, ಭಾಷಣ ಮಾಡುತ್ತಲೇ ಸಾಗಿದ್ದು ವಿಶೇಷವಾಗಿತ್ತು. ಬಿಸಿಲು ಅಧಿಕವಾಗಿದ್ದರೂ ಕೂಡ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿದ್ದ ಜನರು, ಮಹಿಳೆಯರು ದಾರಿಯುದ್ದಕ್ಕೂ ಉತ್ಸಾಹದಿಂದ ಇದ್ದರು. ‘ಈ ಸಲ ಬದಲಿಸಬೇಕು ಬಿಜಾಪುರ’ ಎಂದು ಘೋಷಣೆ ಕೂಗುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಸೂಳಿಬಾವಿ ಕಿಡಿ

ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ್, ಅಪ್ಪಾಜಿ ನಾಡಗೌಡ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ಪ್ರಕಾಶ ರಾಠೋಡ ಮಾತನಾಡಿದರು.‌ ಜಿಲ್ಲೆಯ ಇಬ್ಬರು ಸಚಿವರು ಹಾಗೂ ಕಾಂಗ್ರೆಸ್‌ನ ಎಲ್ಲ ಶಾಸಕರು, ನೂರಾರು ಮುಖಂಡರು, ಸಾವಿರಾರು ಕಾರ್ಯಕರ್ತರು ಇದ್ದರು.

ಮನಸೆಳೆದ ಲಂಬಾಣಿ ನೃತ್ಯ

ಹಲಗೆಯ ಸಪ್ಪಳಕ್ಕೆ ಲಂಬಾಣಿ ಮಹಿಳೆಯರು ಆಕರ್ಷಕ ಹೆಜ್ಜೆ ಹಾಕಿದರು. ನಾನಾ ವಾದ್ಯಗಳು ಸಾಥ್ ನೀಡಿದವು. ದಾರಿ ಮಧ್ಯೆ ಜನರಿಗೆ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಅವರವರ ಪಾಡಿಗೆ ಕಲ್ಲಂಗಡಿ ಹಣ್ಣು, ಕಬ್ಬಿನ ಹಾಲು ಕುಡಿಯುತ್ತ ಹೆಜ್ಜೆ ಹಾಕುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...