ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

Date:

ಸರ್ಕಾರಿ, ಖಾಸಗಿ, ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿಯ ವೈದಿಕೀಯ ಕಾಲೇಜು ಸ್ಥಾಪನೆಯನ್ನು ವಿರೋಧಿಸಿ ವಿಜಯಪುರ ಹಾಗೂ ಕರ್ನಾಟಕ ಜನಾರೋಗ್ಯ ಚಳವಳಿ ಸಂಸ್ಥೆಯ ಸಾವಿರಾರು ಕಾರ್ಯಕರ್ತೆಯರು ಜಿಲ್ಲಾದ್ಯಂತ ರಂಗೋಲಿ ಚಳವಳಿ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತ, ಬಸವೇಶ್ವರ ಸರ್ಕಲ್, ಗಾಂಧಿ ಚೌಕ, ಸಿದ್ದೇಶ್ವರ ದೇವಸ್ಥಾನ, ಶಿವಾಜಿ ಸರ್ಕಲ್, ಜಿಲ್ಲಾಸ್ಪತ್ರೆ, ಜಿಲ್ಲಾ ಪಂಚಾಯತಿ ಹತ್ತಿರ ಹಾಗೂ 13 ತಾಲೂಕಿನ ಮುಖ್ಯ ವೃತ್ತದಲ್ಲಿ ರಂಗೋಲಿ ಚಿತ್ರ ಬಿಡಿಸಿ ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಜನವೇದಿಕೆ ಸಂಘಟನೆ ಹಾಗೂ ಜನಾರೋಗ್ಯ ಚಳವಳಿಯ ಮುಖ್ಯಸ್ಥೆ ಟೀನಾ ಜೇವಿಯರ್, “ಕರ್ನಾಟಕ ರಾಜ್ಯ ಸರ್ಕಾರ ತನ್ನ ಖಾಸಗಿಪರ, ಜನವಿರೋಧಿ ಆರೋಗ್ಯ ನೀತಿಗಳನ್ನು ಮತ್ತಷ್ಟು ತೀವ್ರಗೊಳಿಸುತ್ತಾ ಬಂದಿದೆ. ಹೀಗೆ ಮಾಡಿ ನಮ್ಮ ಜಿಲ್ಲಾಸ್ಪತ್ರೆಯ 149 ಎಕರೆ ಭೂಮಿ, ಕಟ್ಟಡ, ಸಿಬ್ಬಂದಿ, ಸಲಕರಣೆಗಳು ಇತ್ಯಾದಿ ಒಳಗೊಂಡಂತೆ ಎಲ್ಲವನ್ನೂ ಖಾಸಗಿ ಕಂಪನಿಗಳ ತಿಜೋರಿಗೆ ಸಾಗಿಸುವ ಹುನ್ನಾರವನ್ನು ತೀವ್ರವಾಗಿ ಖಂಡಿಸುತ್ತೇವೆ. ಬಡ ಮಧ್ಯಮ ವರ್ಗದ ಮಕ್ಕಳನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಉದ್ದೇಶವನ್ನು ಕೈ ಬಿಡಲು ಒತ್ತಾಯಿಸುತ್ತೇವೆ. ಖಾಸಗಿ ಆಸ್ಪತ್ರೆಯಾದರೆ ದುಡ್ಡಿದ್ದರೆ ಆರೋಗ್ಯ, ದುಡ್ಡಿದ್ದರೆ ವೈದ್ಯಕೀಯ ಶಿಕ್ಷಣ ಎಂಬಂತಾಗುತ್ತದೆ, ಆದ್ದರಿಂದ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನ ವೇದಿಕೆ ಸಂಘಟನೆಯ ಕಾರ್ಯಕರ್ತೆ ಸುನಿತಾ ಮೋರೆ ಮಾತನಾಡಿ, “ಬಡ, ದಲಿತ, ಆದಿವಾಸಿ, ಹಿಂದುಳಿದ ಜನಾಂಗಗಳ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಈಗಿರುವ ಅಲ್ಪ ಅವಕಾಶವೂ ಕೂಡ ಕಣ್ಮರೆಯಾಗುತ್ತದೆ. ವೈದ್ಯರಾಗಬೇಕೆನ್ನುವ ನಮ್ಮ ಮಕ್ಕಳ ಕನಸು ನುಚ್ಚು ನೂರಾಗುತ್ತದೆ. ಕೇವಲ ಉಳ್ಳವರು ಮಾತ್ರ ವೈದ್ಯ ವೃತ್ತಿಗೆ ಸೇರಿ ತಾವು ಖರ್ಚು ಮಾಡಿದ ಹಣವನ್ನು ಮರು ಪಡೆದು ಲಾಭ ಗಳಿಸಲು ವೈದ್ಯಕೀಯ ಸೇವೆಯ ವ್ಯಾಪಾರಕ್ಕೆ ಇಳಿಯುವಂತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ | ಸೂಕ್ತ ಪರಿಹಾರ ನೀಡುವುದಾಗಿ ಅಧಿಕಾರಿಗಳ ಭರವಸೆ: ಧರಣಿ ಹಿಂಪಡೆದ ನಿರಾಶ್ರಿತರು

ಜನ ವೇದಿಕೆ ಮುಖಂಡರಾದ ರಾಜೇಶ್ವರಿ ಮಠಪತಿ, ಫರ್ಜನಾ ಜಮಾದಾರ, ಶ್ರೀದೇವಿ ಡೆಂಗಿ, ಕವಿತಾ ರಾಥೋಡ್, ಹಮೀದ ಪಟೇಲ್, ಭಾರತಿ ಶಿವಣಗಿ,ಅರುಣ ಬೂದಿಹಾಳ, ಮೀನಾಕ್ಷಿ ಕಾಲೆಬಾಗ, ಗೀತಾ ಹೊಸಳ್ಳಿ, ರೇಣುಕಾ ತಮ್ಮಗೊಂಡ, ಜ್ಯೋತಿ ರಾಥೋಡ, ಫಾದರ್ ಕೆವಿನ್, ಶ್ರೀಧರ ಕೊಣ್ಣೊರ, ಅಕ್ರಮ್ ಮಾಶಾಳಕರ, ಮುತ್ತು ಬೋವಿ, ದಸ್ತಗಿರಿ ಮುಲ್ಲಾ, ಭರತ್ಕುಮಾರ್ ಎಚ್ ಟಿ, ಗೀತಾ ಎಚ್, ಸುರೇಶ ಬಿಜಾಪುರ, ಅನಿಲ ಹೊಸಮನಿ, ಶ್ರೀನಾಥ ಪೂಜಾರಿ, ಚನ್ನು ಕಟ್ಟಿಮನಿ, ಯಮನಪ್ಪ ಗುಣಿಕಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...