ವಿಜಯಪುರ | ಫಲವತ್ತಾದ ಕೃಷಿಭೂಮಿ ಕೈಗಾರಿಕಾ ಉದ್ದೇಶಕ್ಕೆ ಬಳಸಿದರೆ ಹೋರಾಟಕ್ಕೆ ಸಿದ್ಧ: ರೈತ ಸಂಘ

Date:

ವಿಜಯಪುರ ಜಿಲ್ಲೆಯ ತಿಡಗುಂದಿ ಸಮೀಪ 1,203 ಎಕರೆ ರೈತರ ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವ ಯೋಜನೆಯನ್ನು ಇಲ್ಲಿಗೆ ಬೀಡಬೇಕು. ಇಲ್ಲವಾದಲ್ಲಿ 350 ಸದಸ್ಯರೊಡನೆ ತೀವ್ರ ಹೋರಾಟಮಾಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿತು.

ಜಿಲ್ಲಾಧಿಕಾರಿ ಮೂಲಕ ರಾಜ್ಯದ ಕೈಗಾರಿಕಾ ಸಚಿವ ಎಂ ಬಿ ಪಾಟೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ಹಾಗೂ ಕೈಗಾರಿಕಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ವಿಜಯಪುರ ನಗರದ ಡಾ. ಬಿ ಆ‌ರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಜಿಲ್ಲೆಯ ನಾಗಠಾಣ ಹೋಬಳಿಯ ತಿಡಗುಂದಿ ವ್ಯಾಪ್ತಿಯ ಒಟ್ಟು 1,203 ಎಕರೆ ರೈತರ ಫಲವತ್ತಾದ ಕಪ್ಪು ಮಣ್ಣಿನ ಎರೆ ಜಮೀನುಗಳನ್ನು ಕೈಗಾರಿಕಾ ಪ್ರದೇಶಕ್ಕೆ ಬಳಸಿಕೊಳ್ಳಲು ತಯಾರಿ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಭಾಗದ ಯಾವ ರೈತರು ಕೂಡಾ ಈ ಬೆಲೆಬಾಳುವ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲು ತಯಾರಿಲ್ಲ. ಕೂಡಲೇ ಈ ಯೋಜನೆಯನ್ನು ಇಲ್ಲಿಗೆ ಕೈಬೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಗಿರೀಶ ತಾಳಿಕೋಟಿ ಮಾತನಾಡಿ, “ಸಚಿವ ಎಂ ಬಿ ಪಾಟೀಲರೇ ನಮ್ಮ ಭಾಗಕ್ಕೆ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಪದವಿಧರರಾದ ನಾವೂಗಳು ಬೇರೆಕಡೆ ಕೆಲಸ ಮಾಡುವುದು ಬೇಡ. ನಮ್ಮ ಜಮೀನಿನಲ್ಲಿಯೇ ದುಡಿದು ಮಾಲೀಕರಾಗಿ ಇರೋಣ ಎನ್ನುವ ಆಸೆಯಿಂದ ನಮ್ಮ ಸ್ವಗ್ರಾಮಕ್ಕೆ ಬಂದು ವ್ಯವಸಾಯ ಮಾಡಿಕೊಂಡು ಸಂತೋಷದಿಂದ ಇದ್ದೇವೆ. ಆದರೆ ಈಗ ಏಕಾ-ಕೈಗಾರಿಕೆಗಾಗಿ ಒಳ್ಳೆಯ ಜಮೀನನ್ನು ಬಳಸಿಕೊಳ್ಳುವುದು ಯಾವ ನ್ಯಾಯ, ನಾವ್ಯಾರೂ ನಮ್ಮ ಭೂಮಿಯನ್ನು ಮಾರಿಕೊಳ್ಳಲ್ಲು ತಯಾರಿಲ್ಲ” ಎಂದರು.

ಹಿರಿಯರಾದ ಅಶೋಕ ಪಾಟೀಲ ಹಾಗೂ ಸಿದ್ದರಾಮ ತಿಲ್ಯಾಳ ಮಾತನಾಡಿ, “ಜಿಲ್ಲೆಯಲ್ಲಿ ಈ ಮುಂಚೆ ಬೇರೆ ಬೇರೆ ಉದ್ದೇಶಕ್ಕಾಗಿ ನಿಗದಿ ಮಾಡಿರುವ ಭೂಮಿಯನ್ನು ಸಂಪೂರ್ಣವಾಗಿ ಬಳಸಿಕೊಂಡು ನಂತರದಲ್ಲಿ ಹೊಸ ಹೊಸ ಯೋಜನೆಗಳಿಗೆ ಕೈಹಾಕಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ತಾಲೂಕು ಅಧ್ಯಕ್ಷ ಮಹಾದೇವಪ್ಪ ತೇಲಿ, ಸಂಗಪ್ಪಟಕ್ಕೆ, ಜಕರಾಯ ಪೂಜಾರಿ, ಮುಖಂಡ ಭೀರಪ್ಪ ಬಿಜ್ಜರಗಿ, ಅಶೋಕಗೌಡ ಬಿರಾದಾರ, ಮಡಿವಾಳ ತಿಲ್ಯಾಳ, ಗೋಪಾಲ ಭೋಸಲೆ, ಗೌಸಪಾಕ್ ವಾಲಿಕಾರ, ಅಶೋಕ ಪಾಟೀಲ, ಚನ್ನಪ್ಪಗೋಟೆ, ಗೌಡಪ್ಪ ಬಿರಾದಾರ, ಶ್ರೀಶೈಲ ನಾವಿ, ಮಹೇಶ ನಾಟಿಕಾರ, ಚಿದಾನಂದಕಟ್ಟಿಮನಿ, ಅಂಜನಾ ತಿಲ್ಯಾಳ, ನೀಲವ್ವ ಬಿಜ್ಜರಗಿ, ಪ್ರದೀಪ ಚಲವಾದಿ, ಪರಶುರಾಮ ಹತ್ತಿ, ಮಲ್ಲಿಕಾರ್ಜುನಕಟ್ಟಿಮನಿ, ಶ್ರೀಶೈಲ ನಾವಿ, ಶಿವಪ್ಪ ಪೂಜಾರಿ, ನೀಲಮ್ಮಜಂಬಗಿ, ಶ್ರೀದೇವಿ ಹೂಗಾರ, ಶಾಂತಾದರ್ಗಾ, ನೀಲವ್ವ ಬಿಜಾಪುರ ಸೇರಿದಂತೆ ಸುಮಾರು 350 ಕುಟುಂಬ ಸದಸ್ಯರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...