ವಿಜಯಪುರ | ಕಬ್ಬು ನಿಯಂತ್ರಣ ಆದೇಶ ಕಾಯ್ದೆ ಬಲಪಡಿಸಲು ಕಬ್ಬು ಬೆಳೆಗಾರರ ಸಂಘ ಆಗ್ರಹ

Date:

ಪ್ರಸ್ತಾವಿತ ಸಕ್ಕರೆ ನಿಯಂತ್ರಣ ಕರಡು ಆದೇಶ 2024 ಅನ್ನು ವಾಪಸ್ ಪಡೆದು ಈಗಾಗಲೇ ಅಸ್ತಿತ್ವದಲ್ಲಿರುವ ಕಬ್ಬು ನಿಯಂತ್ರಣ ಆದೇಶ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಸದ ರಮೇಶ ಜಿಗಜಿಣಗಿಯವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಅಧ್ಯಕ್ಷೆ ಅಣ್ಣಾರಾಯ ಈಳಗೇರ ಮಾತನಾಡಿ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರ್ಕಾರ ಕಬ್ಬು ಬೆಳೆಗಾರರ ಕೊರಳಿಗೆ ಉರುಲು ಹಾಕಲು ಹೊರಟಿದೆ. ಬಿಜೆಪಿಯ ಮೂಲ ನೀತಿಯಾದ ಬಂಡವಾಳ ಶಾಹಿಗಳ ಹಿತ ಕಾಪಾಡುವ ನಿಟ್ಟಿನಲ್ಲಿ 2024ರ ಪ್ರಸ್ತಾವಿತ ಸಕ್ಕರೆ ನಿಯಂತ್ರಣ ಕರಡು ಆದೇಶವನ್ನು ಜಾರಿ ಮಾಡಲು ಹೊರಟಿದೆ. ಈ ಕರಡು ನೀತಿಯ ಬಗ್ಗೆ ಕಬ್ಬು ಬೆಳೆಗಾರರ ಸಂಘ ಹಾಗೂ ರೈತ ಬಂಧುಗಳ ಜೊತೆ ಚರ್ಚೆ ನಡೆಸದೆ ಅವರ ಅಭಿಪ್ರಾಯಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸಕ್ಕರೆ ಕಾರ್ಖಾನೆಗಳು ಮತ್ತು ರಾಜ್ಯ ಸರ್ಕಾರಗಳ ಸಂಬಂಧಿತ ಸಕ್ಕರೆ ಇಲಾಖೆಯ ಅಭಿಪ್ರಾಯಗಳ ಆಧಾರದ ಮೇಲೆ ನಿಲುವು ತೆಗೆದುಕೊಂಡಿರುವುದು ಖಂಡನೀಯ ಎಂದು ತಿಳಿಸಿದರು.

WhatsApp Image 2024 11 14 at 11.31.07 AM

ಈಗಾಗಲೇ ಆಸ್ತಿತ್ವದಲ್ಲಿರುವ ಕಬ್ಬು ನಿಯಂತ್ರಣ ಸಕ್ಕರೆ ಆದೇಶದಿಂದ ಕಬ್ಬು ಬೆಳೆಗಾರರಿಗೆ ಪ್ರಯೋಜನಕಾರಿಯಾದ ನಿಬಂಧನೆಗಳನ್ನು ಕೇಂದ್ರ ಸರ್ಕಾರವು ಒಂದೊಂದಾಗಿ ಅಳಿಸುತ್ತಿರುವುದು ತಿಳಿಯುತ್ತದೆ. ಕಬ್ಬಿನ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರುವ ಲಾಭದಲ್ಲಿ ಹೆಚ್ಚುವರಿ ಬೆಲೆಯನ್ನು ಪಡೆಯಲು ಅನುವು ಮಾಡಿಕೊಡುವ ಕಾಯ್ದೆಯಿಂದ ತೆಗೆದು ಹಾಕಲಾಗಿದೆ. ಕಬ್ಬು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರಗಳು ರಾಜ್ಯ ಸಲಹೆ ಬೆಲೆಯನ್ನು ಘೋಷಿಸಿಸುವ ಕಬ್ಬು ನಿಯಂತ್ರಣ ಆದೇಶ 1866ರ ನಿಬಂಧನೆಗಳನ್ನು ಸರ್ಕಾರ ರದ್ದು ಮಾಡಲು ಹೊರಟಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಭೀಮರಾಯ ಪೂಜಾರಿ ಮಾತನಾಡಿ, ಈ ಕಾಯ್ದೆಯು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳಬಹುದು ಮತ್ತು ಕೇಂದ್ರ ಸರ್ಕಾರಕ್ಕೆ ರಾಜ್ಯಗಳನ್ನು ತನ್ನ ಅಧೀನದಲ್ಲಿಟ್ಟುಕೊಳ್ಳಲು. ಸಕ್ಕರೆ ಮಾರಾಟಕ್ಕೂ ಪ್ರತಿ ತಿಂಗಳು ಮಾರಾಟದ ಪ್ರಮಾಣದ ನಿಗದಿ ಮಾಡುತ್ತದೆ. ಕೇಂದ್ರ ಸರ್ಕಾರ ತನಗೆ ಇಷ್ಟ ಬಂದ ಕಾರ್ಖಾನೆಗಳಿಗೆ ಮಾತ್ರ ಅನುಕೂಲ ಕಲ್ಪಿಸಿ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಕಡೆಗಣಿಸಿ ರಾಜಕೀಯ ಕಾರಣದಿಂದ ತನ್ನ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಳ್ಳುತ್ತದೆ ಎಂದರು.

ಇದನ್ನು ಓದಿದ್ದೀರಾ? ಉಡುಪಿಯಲ್ಲಿ ಅಬಕಾರಿ ಪೊಲೀಸರ ದಾಳಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯ ವಶಕ್ಕೆ

ಈ ಸಂದರ್ಭದಲ್ಲಿ ಗೋಪಾಲ ಶಿವಗದ್ದಿಗೆ. ಚಿದಾನಂದ ಬೆಳ್ಳಿನವರ, ಮಲ್ಲಿಕಾರ್ಜುನ ಸಾವುಕಾರ, ಪವಾಡಪ್ಪ ಸಾವುಕಾರ, ಸಿದ್ದಣ್ಣ ಗಡಗಿ, ಮಹಬೂಬ ಕಕ್ಕಳಮೇಲಿ, ಸೈಫನಸಾಬ ಬಾಗವಾನ, ಸಿದ್ದಣ್ಣ ಕುಂಬಾರ. ಮುರಿಗೆಪ್ಪ ಕೊಳಕಾರ, ಮಹಾಂತೇಶ ಶಿಂಗಾಡಿ, ಮಹಿಬೂಬ ಕಕ್ಕಳಮೇಲಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...