ವಿಜಯಪುರ | ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

Date:

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ಐದು ತಿಂಗಳು ಕಳೆದರೂ ಇನ್ನುವರೆಗೂ ಯಾವ ರೈತರಿಗೂ ಪರಿಹಾರ ಬಂದಿಲ್ಲ. ಫಸಲ್ ಭೀಮಾ ಯೋಜನೆಯಲ್ಲಿ ಭಾರಿ ಪ್ರಮಾಣದ ಅನ್ಯಾಯವಾಗುತ್ತಿದೆ, ಅದೇರೀತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಲವಾರು ಸಮಸ್ಯೆಗಳಿವೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ, ಸ್ಪಿಂಕಲರ್ ಪೈಪಗಳ ಸಮಸ್ಯೆ ದೊಡ್ಡದಾಗಿದೆ. ಕಳೆದ 2-3 ವರ್ಷಗಳ ಹಿಂದೆ ಡಿ.ಡಿ ತುಂಬಿದ ಹಣವನ್ನು ಮರಳಿ ಹಾಕಲಾಗಿದೆ, ಈಗ ಮತ್ತೆ ಡಿ.ಡಿ ತುಂಬುವಂತೆ ಹೇಳುತ್ತಿದ್ದಾರೆ, ಅದು ನಿಮ್ಮ ಸರದಿ ಬಂದಾಗ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ಮನವಿಯಲ್ಲಿ ರೈತ ಸಂಘ ಉಲ್ಲೇಖಿಸಿದೆ.

ಈ ವೇಳೆ ರಾಜ್ಯ ಪ್ರಧಾನ ಕಾರ್ಯದಶಿಗಳಾದ ರಾಹುಲ ಕುಬಕಡ್ಡಿ, ಹಾಗೂ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ, ಜೊತೆಗೆ ವಿಮೆಯಲ್ಲಿ ದೊಡ್ಡಪ್ರಮಾಣದ ಅವ್ಯವಹಾರ ನಡೆಯುತ್ತಿದೆ. ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಬಗ್ಗೆ ಸರಿಯಾದ ಮಾರ್ಗಸೂಚಿ ಇಲ್ಲ. ಅದುಕೂಡಾ ಗೊಂದಲವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಯಲ್ಲಿ ವಿಜಿಲೇನ್ಸ್ ತಂಡವನ್ನು ಇನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಅಕ್ರಮವಾಗಿ ನಕಲಿ ಬೀಜ ಗೊಬ್ಬರ, ಕೀಟನಾಶಕ ಮಾರಾಟವಾಗುವುದು ತಡೆಯುವಂತೆ ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ರಾಜಶೇಖರ ವಿಲಿಯಮ್ಸ್, ಬೆಳೆವಿಮೆಗೆ ಸರ್ಕಾರದ ಮಾರ್ಗಸೂಚಿಯಿದೆ. ಇಲ್ಲಿ ಕೇವಲ ಕೃಷಿ ಇಲಾಖೆ ಮಾತ್ರವಲ್ಲದೇ ಇನ್ನು 4-5 ಇಲಾಖೆಯ ಅಧಿಕಾರಿಗಳ ತಂಡ ಸರ್ವೇ ಮಾಡಿ ವರದಿ ಸಲ್ಲಿಸಲಾಗುತ್ತದೆ, ಇನ್ನು ಜಿಲ್ಲೆಗೆ ಸುಮಾರು 600ಕೋಟಿಗಳ ಬೇಡಿಕೆಯನ್ನು ಸಲ್ಲಿಸಲಾಗಿದೆ, ಅದ್ದರಿಂದ ಈ ವರ್ಷ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸ್ಪಿಂಕಲರ್ ಪೈಪ್ ಸೇರಿದಂತೆ ಎಲ್ಲಾ ವಸ್ತುಗಳ ಸರಿಯಾದ ಸಮಯಕ್ಕೆ ಹಾಗೂ ನೈಜ ರೈತರಿಗೆ ಸಿಗುವಂತಹ ವ್ಯವಸ್ಥೆ ಕಲ್ಪಿಸಲಾಗುವುದು, ನಾವೂ ಯಾವಾಗಲೂ ರೈತರ ಏಳ್ಗೆಗಾಗಿ ಇರುವವರು ಎಂದರು.

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷರಾದ ರೇಖಾ ಪಾಟೀಲ, ಈರಪ್ಪ ಕುಳೆಕುಮಟಗಿ, ಸಾತಲಿಂಗಯ್ಯ ಸಾಲಿಮಠ, ಮಹಾದೇವ ಬನಸೋಡೆ, ಶ್ರೀಶೈಲ ವಾಲಿಕಾರ, ಸೇರಿದಂತೆ ಮುಖಂಡಾರಾದ ಶಿವಾನಂದಯ್ಯ ಹಿರೇಮಠ, ಸುಭಾಸ ಸಜ್ಜನ, ನಜೀರ ನಂದರಗಿ, ಶಾನೂರ ನಂದರಗಿ, ಖಾದರಸಾಬ ವಾಲಿಕಾರ,  ರಾಮನಗೌಡ ಪಾಟೀಲ, ಮಹಾದೇವ ತೇಲಿ, ಅರುಣಗೌಡ ತೇರದಾಳ, ಸಂಗಪ್ಪ ಟಕ್ಕೆ, ಸಂಪತ್ತ ಜಮಾದಾರ, ಸಂಗಮೇಶ ಹುಣಸಗಿ, ಹಣಮಂತ ಬ್ಯಾಡಗಿ, ಎಚ್.ಎನ್.ಪಾಟೀಲ, ಮಹಾದೇವ ಕದಂ, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...