ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Date:

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಗೀಳಿಗೆ ಇಂದಿನಯುವಕರು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಸರ್ಕಾರ ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧ ಮಾಡಬೇಕು ಎಂದು ಬಲಿಷ್ಠ ಭಾರತ ನಿರ್ಮಾಣ ಸೇನೆ ಹಾಗೂ ಕರುನಾಡ ಕ್ರಾಂತಿ ಸೇನೆ ಪದಾಧಿಕಾರಿಗಳು ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಸೇನೆ ಅಧ್ಯಕ್ಷ ಪುನೀತ್ ಸಜ್ಜನ ಮಾತನಾಡಿ, “ಆನ್‌ಲೈನ್ ಜೂಜು, ಇಸ್ಪೀಟ್, ಲೂಡೊ, ಕ್ರಿಕೆಟ್, ಫುಟ್ಬಾಲ್ ಸೇರಿದಂತೆ ಅನೇಕ ಅಪ್ಲಿಕೇಷನ್‌ಗಳು ಹಣದ ವಂಚನೆ ಮಾಡುತ್ತಿವೆ. ಯುವಕರನ್ನು ಈ ಗೀಳಿಗೆ ಹಣ ಹಾಕುವಂತೆ ಪ್ರೇರೇಪಿಸಿ ನಂತರ ಅವರನ್ನು ಸಾಲಗಾರರನ್ನಾಗಿ ಮಾಡಿ ಪ್ರಾಣ ಬಿಡುವಂತೆ ಮಾಡುತ್ತಿವೆ. ಸರ್ಕಾರ ಆರ್ಥಿಕ ಅಪರಾಧಗಳನ್ನು ನಿಯಂತ್ರಿಸಲು ಆನ್‌ಲೈನ್ ಬೆಟ್ಟಿಂಗ್ ಹಾಗೂ ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧ ಮಾಡಬೇಕು” ಎಂದು ಆಗ್ರಹಿಸಿದರು.

“ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್ ಆಟಗಳನ್ನು ಆಡಿಸುವಂತಹ ಆ್ಯಪ್‌ಗಳು ವಿಪರೀತ ಪ್ರಮಾಣದಲ್ಲಿ ಹುಟ್ಟಿಕೊಂಡಿವೆ. ವಯಸ್ಸಿನ ಮಿತಿ ಇಲ್ಲದೆ ಎಲ್ಲಾ ವರ್ಗದ ಜನರು ಇವುಗಳ ಆಮಿಷಕ್ಕೆ ಒಳಗಾಗಿ, ಸಾಕಷ್ಟು ಹಣವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಸರ್ಕಾರ ಅಂತಹ ಆ್ಯಪ್‌ಗಳ ವಿರುದ್ಧ ಆರ್ಥಿಕ ಅಪರಾಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವುಗಳನ್ನು ನಿಷೇಧಗೊಳಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ರಂಜಾನ್‌, ಹೋಳಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸ್ ಸಿಪಿಐ ಮಹಮ್ಮದ್‌

ಕರುನಾಡ ಕ್ರಾಂತಿ ಸೇನೆಯ ಸಂಭಾಜಿ ಪಾಟೀಲ, ರವಿ ಗಾಯಕವಾಡಿ, ತೀರ್ಥಪ್ಪ ಪೂಜಾರಿ, ರವಿ ಗಾಯಕವಾಡ, ಭೀಮಾರೆಡ್ಡಿ ಬ್ಯಾಕೋಡ, ಉತ್ಕರ್ಷ ಪಾಟೀಲ, ದೀಪಕ ಸೂರ್ಯವಂಶಿ, ಪ್ರಶಾಂತ ಪಾಟೀಲ, ಮುತ್ತಣ್ಣ ಭೋವಿ, ಮಹೇಶ ಯಲ್ಲಕ್ಷ, ರಾಜು ರೂಗಿ, ಮುತ್ತು ಬಿರಾದಾರ. ರುದ್ರಗೌಡ ಪಾಟೀಲ, ಈರಣ್ಣ ಪಾಟೀಲ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...