ವಿಜಯಪುರ | ಕಾಂಗ್ರೆಸ್ ಸೋಲಿನ ಪರಾಮರ್ಶೆ; ಚಿಂತನ ಮಂಥನ ಸಭೆ

Date:

ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಇಡೀ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಮ್ಮತದಿಂದ ಕೆಲಸ ಮಾಡಿದ್ದು, ನಮಗೆಲ್ಲರಿಗೆ ತೃಪ್ತಿ ತಂದಿದೆ ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಈ ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯಪುರ ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ ಕುರಿತು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಚಿಂತನ ಮಂಥನ ಸಭೆ ಮಾತನಾಡಿದರು.

“ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು 5 ಗ್ಯಾರಂಟಿ ಯೋಜನೆಗಳನ್ನು ಕೊಟ್ಟಾಗಲೂ ಜನತೆ ನಮಗೆ ಬೆಂಬಲಿಸದಿರುವುದು ಬೇಸರವಾಗಿರಬಹುದು. ಆದರೂ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಸಮಾಜಗಳು ಬೆಂಬಲಿಸಿ ಬಿಜೆಪಿಯವರ ಓಟಕ್ಕೆ ಬ್ರೆಕ್ ಹಾಕಿದ್ದು, ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಭವಿಷ್ಯವಿದೆ. ಯಾರೂ ದೃತಿಗೆಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದಂತಹ ಎಲ್ಲ ಮತದಾರ ಪ್ರಭುಗಳಿಗೆ ಪಕ್ಷದಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಕ್ಷವು ಇಂದು ಸೋಲಲು ಅನೇಕ ಕಾರಣಗಳಿರಬಹುದು. ಮುಂದಿನ ದಿನಗಳಲ್ಲಿ ಸರಿ ಮಾಡಲಾಗುವುದು. ಇಂದು ದೇಶದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿ ಜನ ಬಿಜೆಪಿಯ ವಿರುದ್ಧ ಇರುವುದು ಸಾಬೀತಾಗಿದೆ. ರಾಹುಲ್‌ ಗಾಂಧಿಯವರು ದಲಿತರ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ರೈತರ, ಯುವಕರ ಹಿತ ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮಾಡಿರುವುದೇ ಇಂದು ಜನ ನಮ್ಮ ಕೈ ಹಿಡಿದಿರುತ್ತಾರೆ. ನಾವೆಲ್ಲರೂ ಹೀಗೆಯೇ ಒಟ್ಟಾಗಿ ಪಕ್ಷದ ಸಂಘಟನೆ ಬಲಪಡಿಸುವುದರ ಜತೆಗೆ ಗಟ್ಟಿಯಾಗಿ ನಿಂತು ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಕ್ರಮ ಖಾತೆ ಇ-ಸ್ವತ್ತು ರದ್ದು ಭರವಸೆ ನೀಡಿ, ಅಧಿಕಾರಿಗಳ ನಿರ್ಲಕ್ಷ್ಯ: ಸಂತ್ರಸ್ತೆ ಮಹಿಳೆ ಆರೋಪ

ಈ ಸಂದರ್ಭದಲ್ಲಿ ಅನೇಕ ಜನ ಮುಖಂಡರು ಸಲಹೆ ಸೂಚನೆಗಳನ್ನು ನೀಡಿ ಚರ್ಚಿಸುತ್ತಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದ್‌ ರಫೀಕ್ ಟಪಾಲ, ಪ್ರಭುಗೌಡ ಪಾಟೀಲ, ಬಿ.ಎಸ್. ಪಾಟೀಲ ಯಾಳಗಿ, ವೈಜನಾಥ ಕರ್ಪೂರಮಠ, ಸುಭಾಸ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ಬಸೀರ ಶೇಠ, ಆರ್.ಡಿ. ಹಕ್ಕೆ, ಗುರು ತಾರನಾಳ, ರಫೀಕ ಪಕಾಲೆ, ಜಾವಿದ ಮೋಮಿನ್, ಪಕ್ಷದ ಮುಖಂಡರಾದ ಎಂ.ಎಸ್. ನಾಯಕ, ಡಿ.ಎಚ್. ಕಲಾಲ, ಇಲಿಯಾಸಅಹ್ಮದ ಸಿದ್ದಿಕಿ, ಇಲಿಯಾಸ ಬೋರಾಮಣಿ, ಅಮಿತ ಚವ್ಹಾಣ, ಶಬ್ಬೀರ ಜಾಗೀರದಾರ, ವಿಜಯಕುಮಾರ ಘಾಟಗೆ, ಬಿ.ಎಸ್. ಗಸ್ತಿ, ದಸ್ತಗೀರ ಸಾಲೋಟಗಿ, ಲಕ್ಷ್ಮಿ ಶಿವಣಗಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...