ವಿಜಯಪುರ | ಸೆ.5ರಂದು ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ಬಿಡುಗಡೆ; ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ವಿರೋಧ

Date:

ವಿಜಯಪುರದಲ್ಲಿ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿರುವ ವಿವಾದಾಸ್ಪದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕವನ್ನು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ವಿರೋಧಿಸಿದ್ದಾರೆ.

ವಿಜಯಪುರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಬಸವ ತತ್ವದ ಚಿಂತಕ ಜೆ ಎಸ್ ಪಾಟೀಲ ಅವರು ಮಾತನಾಡಿ, “ಶರಣ ಸಂಸ್ಕೃತಿಯನ್ನು ಮತ್ತು ಲಿಂಗಾಯತ ಧರ್ಮ ತತ್ವಗಳನ್ನು ನಾಶಪಡಿಸುವ ಉದ್ದೇಶದಿಂದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವುದು ಬಸವ ಭಕ್ತರು ಹಾಗೂ ಲಿಂಗಾಯತರಿಗೆ ನೋವು ತಂದಿದೆ. ಈ ಪುಸ್ತಕ ಬಿಡುಗಡೆಯ ಸಮಾರಂಭವನ್ನು ನಾವು ಸಾತ್ವಿಕವಾಗಿ ವಿರೋಧಿಸುತ್ತೇವೆ” ಎಂದು ತಿಳಿಸಿದರು.

“ಪುಸ್ತಕವನ್ನು ಪ್ರತಿ ಜಿಲ್ಲೆಗಳಲ್ಲಿ 3 ರಿಂದ 5 ಲಕ್ಷ ರೂಪಾಯಿ ಖರ್ಚು ಮಾಡಿ ಬಿಡುಗಡೆ ಮಾಡುತ್ತಿರುವುದರ ಹಿಂದಿನ ಹುನ್ನಾರ ಬಯಲಾಗಬೇಕಿದೆ. ಈ ಪುಸ್ತಕ ಬಿಡುಗಡೆಯಾದರೆ ನಾಡಿನಾದ್ಯಂತ ಸಾಮಾಜಿಕ ಸ್ವಾಸ್ಥ್ಯವನ್ನು ಕದಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಶಕಗಳಿಂದಲೂ ಎಂ ಆರ್ ಶ್ರೀನಿವಾಸಮೂರ್ತಿ, ಆರ್ ಆರ್ ದಿವಾಕರ, ಡಂಕಿನ್ ಝಳಕಿ, ರಾಜಾರಾಮ್ ಹೆಗಡೆ ಮುಂತಾದವರ ಮೂಲಕ ವಚನ ಚಳುವಳಿಯ ಆಶಯಗಳನ್ನು ಹಾಗೂ ಲಿಂಗಾಯತ ಸಂಸ್ಕೃತಿಯನ್ನು ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಶರಣರ ಆಶಯಗಳನ್ನು ಸರ್ವಾಂಗೀಣ ಕ್ರಾಂತಿಯ ಹಿನ್ನೆಲೆಯಲ್ಲಿ ನೋಡದೆ ಸನಾತನ ವೈದಿಕ ದರ್ಶನದ ಚೌಕಟ್ಟಿನಲ್ಲಿ ಸೇರಿಸಿ ಅದೊಂದು ಶುಷ್ಕ ಭಕ್ತಿ ಚಳವಳಿ ಎಂಬಂತೆ ಬಿಂಬಿಸುವ ಪ್ರಯತ್ನದ ವಿರುದ್ದ ಬಸವಾನುಯಾಯಿಗಳು ಸಾತ್ವಿಕ ಹಾಗು ತಾತ್ವಿಕ ಆಕ್ರೋಶವನ್ನು ದಾಖಲಿಸುತ್ತಿದ್ದೇವೆ” ಎಂದು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ವಿವಿಧ ಸಂಘಟನೆಗಳ‌ ಪ್ರತಿಭಟನೆ

ಶರಣ ಸಂಸ್ಕೃತಿ ಹಾಗೂ ಲಿಂಗಾಯತ ಧರ್ಮ ರಕ್ಷಣಾ ವೇದಿಕೆಯ ಸಂಚಾಲಕ ಡಾ ಜೆ ಎಸ್ ಪಾಟೀಲ, ಜಿ ಬಿ ಸಾಲಕ್ಕಿ, ಮನಗೂಳಿ ವಿರಕ್ತಮಠದ ವಿರೇಶಾನಂದ ಸ್ವಾಮೀಜಿ, ಕಲಕೇರಿ ಶಿವಾಚಾರ್ಯ ಸ್ವಾಮೀಜಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗುಳಿ, ಕಲ್ಲಪ್ಪ ಕಡೆಚೂರ, ಹನುಮಂತ ಚಿಂಚಲಿ, ಮಹಾದೇವಿ ಗೋಕಾಕ, ರಾಜೇಶ್ವರಿ ಅರನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...