ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ತ್ಯಾಗ, ಸೇವೆ ಮಹತ್ವದ ಪಾತ್ರ ವಹಿಸುತ್ತವೆ: ಅರವಿಂದ ಕೊಪ್ಪ

Date:

ದೇಶದ ಅಭಿವೃದ್ಧಿಯಲ್ಲಿ ತ್ಯಾಗ, ಸೇವೆ ಮಹತ್ವದ ಪಾತ್ರ ವಹಿಸುತ್ತವೆ. ಯುವಜನತೆ ಇವುಗಳನ್ನು ಸರಿಯಾಗಿ ಅರಿತು ಜೀವನದಲ್ಲಿ ಅಳವಡಿಸಿಕೊಂಡರೆ ದೇಶ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ರೈತ ಮುಖಂಡ, ಪ್ರಗತಿಪರ ಚಿಂತಕ ಅರವಿಂದ ಕೊಪ್ಪ ಹೇಳಿದರು.

ವಿಜಯಪುರ ಪಟ್ಟಣದ ಹೊರವಲಯದ ನಾಲತವಾಡ ರಸ್ತೆಯಲ್ಲಿರುವ ಬಿಬಿಆರ್ ಹವಾಾರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 162ನೇ ಜಯಂತ್ಯೋತ್ಸವ, ಪ್ರೌಢಶಾಲೆ ವಿದ್ಯಾರ್ಥಿಗಳ ರಸಪ್ರಶ್ನೆ ಸ್ಪರ್ಧೆ ಉದ್ವಾಟಿಸಿ ಮಾತನಾಡಿದರು.

“ಸ್ವಾಮಿ ವಿವೇಕಾನಂದರ ಆಶಯದಂತೆ ಸ್ವಾತಂತ್ರ್ಯ ನಂತರದಲ್ಲಿ ಶಿಕ್ಷಣ ತಜ್ಞರ ತ್ಯಾಗ, ಸೇವೆಯ ಮಹತ್ವವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೇರಿಸಿದ್ದರೆ ಇಂದು ಮೌಲ್ಯಗಳು ಕುಸಿಯುವ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ರವೀಂದ್ರ ನಂದಪ್ಪನವರ್ ಮಾತನಾಡಿ, “ಭಾರತೀಯರೆಲ್ಲರೂ ಒಂದೇ, ಯಾರೂ ಜಾತಿ, ಧರ್ಮಗಳ ಬಗ್ಗೆ ಅತಿಯಾಗಿ ತಲೆಕೆಡಿಸಿಕೊಳ್ಳಬಾರದೆಂದು ಹೇಳಿದ್ದರು. ಹಲವು ಬಗೆಯ ವಿಭಿನ್ನ ಧಾರ್ಮಿಕ ಆಚಾರ, ವಿಚಾರ ಬಂದಿದ್ದರೂ ಭಾರತೀಯರಾದ ನಾವು ಎಲ್ಲರೂ ಒಂದೇ ಎನ್ನುವ ಮೂಲಕ ಏಕತ್ವವಾದವನ್ನು ಪ್ರತಿಪಾದಿಸಿದರು” ಎಂದರು.‌

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಫೈನಾನ್ಸ್ ಕಂಪನಿಯಿಂದ ಸಂಕಷ್ಟಕೀಡಾಗಿದ್ದ ಕುಟುಂಬ: ಲಕ್ಷ್ಮೀ ಹೆಬ್ಬಾಳ್ಕರ್ ಸಹಾಯ

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಸ್ ಎಂ ನೆರಬಂಚಿ ಮಾತನಾಡಿ, “ವಿವೇಕಾನಂದರು ಯುವ ಜನತೆಗಾಗಿ ಸಮಯದ ಸದ್ಬಳಕೆ ಹಾಗೂ ಧನಾತ್ಮಕ ಚಿಂತನೆ ಕುರಿತು ಸಾಕಷ್ಟು ಕಿವಿ ಮಾತುಗಳನ್ನು ಹೇಳಿದ್ದು, ಅವುಗಳ ಮಹತ್ವ ಅರಿತು ಪ್ರಯತ್ನಶಾಲಿಯಾದರೆ ಯಶಸ್ಸು ಖಂಡಿತ ದೊರೆಯುತ್ತದೆ” ಎಂದರು.

ಪ್ರಾಂಶುಪಾಲೆ ಆರ್ ಬಿ ರೋಡಗಿ, ಕಾಲೇಜಿನ ಉಪನ್ಯಾಸಕರು ವೇದಿಕೆಯಲ್ಲಿದ್ದರು. ತಾಲೂಕಿನ ಪ್ರೌಢಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ರಸಪ್ರಶ್ನೆಯಲ್ಲಿ ವಿಜೇತರಿಗೆ ನಗದು ಪುರಸ್ಕಾರ, ಪ್ರಮಾಣ ಪತ್ರ ಸಮೇತ ಸತ್ಕರಿಸಲಾಯಿತು. ಶಿಕ್ಷಕ ಗುರುರಾಜ ಶೆಟ್ಟರ್ ವಿವೇಕಾನಂದರ ಕುರಿತು ಪ್ರಾರ್ಥನೆ ನಡೆಸಿಕೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಬಿ ಆರ್ ಬೆಳ್ಳಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿ ಎಂ ಕುರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...