ವಿಜಯಪುರ | ಎಸ್‌ಡಿಎಂಸಿ ಅನ್ನುವುದು ಅಧಿಕಾರವಲ್ಲ, ಜವಾಬ್ದಾರಿ: ಡಾ. ಜಿ ಡಿ ಕೊಟ್ನಾಳ

Date:

ಎಸ್‌ಡಿಎಂಸಿ ಅನ್ನುವುದು ಅಧಿಕಾರವಲ್ಲ ಅದೊಂದು ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ಸಮರ್ಥ ರೀತಿಯಲ್ಲಿ ಪಾಲಿಸಿದರೆ ಸರ್ಕಾರಿ ಶಾಲೆಗಳನ್ನು ಸುಧಾರಿಸಬಹುದು. ಜೊತೆಗೆ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವಲ್ಲಿ ಸಫಲತೆ ಕಂಡುಕೊಳ್ಳಬಹುದು ಎಂದು ನಿವೃತ್ತ ಶಿಕ್ಷಣ ಇಲಾಖೆ ನಿರ್ದೇಶಕ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಜಿ ಡಿ ಕೊಟ್ನಾಳ ಹೇಳಿದರು.

ಜಿಲ್ಲೆಯ ನವಚೇತನ ಸಭಾಂಗಣದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮನ್ವಯ ಸಮಿತಿ(ಎಸ್‌ಡಿಎಂಸಿ) ಸಹಯೋಗದಲ್ಲಿ ಎಸ್‌ಡಿಎಂಸಿ ಸದಸ್ಯರಿಗೆ ಶಾಲಾ ಅಭಿವೃದ್ಧಿ ಮತ್ತು ಶಿಕ್ಷಣ ಗುಣಮಟ್ಟ ಸುಧಾರಣೆ ಕ್ರಮಗಳ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಪಾಲಕ-ಪೋಷಕರ ಮಧ್ಯೆ ಹೊಂದಾಣಿಕೆ ಇದ್ದರೆ ಮಾತ್ರ ಶಾಲೆಯೊಂದನ್ನು ಮಾದರಿಯನ್ನಾಗಿ ರೂಪಿಸಲು ಸಾಧ್ಯ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಮುಂದೆ ಸಾಗಿಬೇಕು” ಸಲಹೆ ನೀಡಿದರು.

ಪತ್ರಕರ್ತ ಡಿ ಜಿ ಕುಪಸ್ತ ಮಾತನಾಡಿ, ಒಂದು ಶಿಕ್ಷಣ ಸಂಸ್ಥೆಯ ಏಳಿಗೆಯಲ್ಲಿ ಶಿಕ್ಷಕ, ಪಾಲಕ, ಬಾಲಕ ಮೂವರ ಪಾತ್ರ ತುಂಬಾ ಪ್ರಮುಖವಾಗಿದೆ. ಮೂರರಲ್ಲಿ ಒಂದು ಕೊರತೆಯಾದರೂ ಶಾಲಾ ಅಭಿವೃದ್ಧಿಯಲ್ಲಿ ಹಿನ್ನಡೆಯಾಗುತ್ತದೆ. ಆದ್ದರಿಂದ ಮೂವರು ಹೊಂದಾಣಿಕೆಯಿಂದ ಸಾಗಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನ್ಯಾಕರಾಗಿ ಆಗಮಿಸಿದ್ದ ಮೊಯಿದ್ದೀನ್ ಕುಟ್ ಮಾತನಾಡಿ, ಎಸ್‌ಡಿಎಂಸಿ ರಚನೆ, ಸದಸ್ಯರ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಜೊತೆಗೆ ಶಾಲೆಯಲ್ಲಿ ಮಕ್ಕಳ ಸುರಕ್ಷಾ ಸಮಿತಿ ರಚನೆ ಮಾಡುವ ಕುರಿತು ಸಲಹೆ ನೀಡಿದರು.

WhatsApp Image 2025 01 24 at 3.48.10 PM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಾಚಾದೊ ಮಾತನಾಡಿ, ಶಾಲೆಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಕಲ್ಪಸುವ ನಿಟ್ಟಿನಲ್ಲಿ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಕರ್ನಾಟಕ ಉತ್ತರ ಭಾಗದಲ್ಲಿ ಶಾಲಾ ಅಭಿವೃದ್ಧಿಯ ಕಾರ್ಯನಡೆಯು ಭಿನ್ನವಾಗಿದೆ. ಬೇರೆ ಭಾಗಗಳಲ್ಲಿ ಎಸ್‌ಡಿಎಂಸಿ ಸದಸ್ಯರು ಹೆಚ್ಚಿನ ಮುತುವರ್ಜಿ ವಹಿಸಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವತ್ತ ಗಮನಹರಿಸುತ್ತಿದ್ದಾರೆ. ಅದರಂತೆ ಉತ್ತರ ಭಾಗದಲ್ಲಿಯೂ ಸಹ ಶಾಲೆಗಳ ಅಭಿವೃದ್ಧಿಗೆ ನಾವೆಲ್ಲರು ಕೈಜೋಡಿಸೋಣವೆಂದುರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕೂಲಿ ಕಾರ್ಮಿಕರ ಮೇಲೆ ಹಲ್ಲೆ; ಕಾಂಗ್ರೆಸ್ ಎಸ್‌ಸಿ ಘಟಕ ಖಂಡನೆ

ಬಳಿಕ ಜಿಲ್ಲಾ ಮಟ್ಟದ 18 ಜನರನ್ನು ಒಳಗೊಂಡ ಎಸ್‌ಡಿಎಂಸಿ ಸಮನ್ವಯ ಸಮಿತಿ ರಚನೆ ಮಾಡಲಾಯಿತು. ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...