ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ಸೀರತ್‌ ಅಭಿಯಾನ

Date:

ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಜೀವನ, ತತ್ವ, ಸಂದೇಶ ಕುರಿತು ಇಸ್ಲಾಂ ಧರ್ಮೀಯರಿಗೆ ಹಾಗೂ ಅನ್ಯ ಧರ್ಮೀಯರಿಗೆ ತಿಳಿವಳಿಕೆ ನೀಡುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.3 ರಿಂದ 14ರವರೆಗೆ ರಾಜ್ಯಾದ್ಯಂತ ಸೀರತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್‌ನ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ ಅಲಿ ಬಳಗಾನೂರ ತಿಳಿಸಿದರು.

ವಿಜಯಪುರ ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಜಮಾಅತೆ ಇಸ್ಲಾಮಿ ಹಿಂದ್‌ ನೇತೃತ್ವದಲ್ಲಿ ‌ʼನ್ಯಾಯದ ಹರಿಕಾರ ಮಹಮ್ಮದ್ ಪೈಗಂಬರ್ʼ ಶೀರ್ಷಿಕೆ ಅಡಿಯಲ್ಲಿ ಜಾಗೃತಿ ಅಭಿಯಾನ ನಡೆಸಲಾಗುತ್ತದೆ. ಪ್ರವಾದಿ ಪೈಗಂಬರ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ಇರುವ ತಪ್ಪು ಕಲ್ಪನೆಗಳು ನಿವಾರಣೆಯಾಗಬೇಕಿದೆ. ಧರ್ಮ, ಧರ್ಮಗಳ ನಡುವೆ ಶಾಂತಿ, ಸೌಹಾರ್ದ, ಸಹೋದರತೆ, ಸಹಾನುಭೂತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದರು.

“ಈ ಅಭಿಯಾನದ ಅಂಗವಾಗಿ ವಿಜಯಪುರ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಹಾಗೂ ಅನಾಥ ಆಶ್ರಯಕ್ಕೆ ಭೇಟಿ‌ ಅವರರೊಂದಿಗೆ ಸಂವಾದ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ, ಜನರಿಗೆ ಪ್ರವಾದಿ ಸಂದೇಶಗಳನ್ನು ತಲುಪಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವಾದಿ ಪೈಗಂಬರ್‌ ಅವರು ಸಾಮಾಜಿಕ ಸಮಾನತೆಗೆ ಆದ್ಯತೆ ನೀಡಿದ್ದರು. ಶಿಕ್ಷಣದಲ್ಲಿ ಜ್ಞಾನದ ಜೊತೆ ವೈಚಾರಿಕತೆ ಇರಬೇಕು ಎಂದು ಪ್ರತಿಪಾದಿಸಿದ್ದರು. ಮಹಿಳಾ ವಿಮೋಚಕರಾಗಿದ್ದರು. ಪರಿಸರ ಸಂರಕ್ಷಣೆಗೆ ಒತ್ತು ನೀಡಿದ್ದರು. ಪರಧರ್ಮ ಸಹಿಷ್ಣುತೆಗೆ ಆದ್ಯತೆ ನೀಡಿದ್ದರು” ಎಂದು ಅವರು ಹೇಳಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯ ವಿವಿಧ ಪಿಜಿ ಕೋರ್ಸ್‌ಗಳಿಗೆ ಸೆ.2ರಂದು ಕೌನ್ಸೆಲಿಂಗ್‌

ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನದಿಂದ ಪ್ರವಾದಿ ಜೀವನ ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳು ಅಭಿಯಾನದಲ್ಲಿ ಬಿಡುಗಡೆಯಾಗಲಿವೆ ಎಂದು ವಿವರಿಸಿದರು.

ಈ‌ ಪತ್ರಿಕಾಗೋಷ್ಠಿಯಲ್ಲಿ ಸದಸ್ಯ ಎಂ. ಡಿ ಅಬ್ದುಲ್ ಕದೀರ್, ಯೂಸುಫ್ ಖಾಝಿ, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಅಧ್ಯಕ್ಷ ಅಬ್ದುಲ್ ಹಮೀದ್ ಜಾವೀದ್, ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ಜಿಲ್ಲಾ ಉಪಾಧ್ಯಕ್ಷ ಉಬೈದೂರ ರಹೇಮನ್ ಶೈಖ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...