ವಿಜಯಪುರ | ‘ಶರಣರ ಶಕ್ತಿ’ ಚಲನಚಿತ್ರ ಪ್ರದರ್ಶನ: ತಡೆ ನೀಡುವಂತೆ ಆಗ್ರಹ

Date:

ಬಸವಾದಿ ಶರಣರನ್ನು ಅವಮಾನಿಸುವ, ಶರಣತತ್ವ ಸಿದ್ದಾಂತ ತಿರುಚುವ, ಶರಣರ ಆಶಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ನಿರ್ಮಾಣಗೊಂಡಿರುವ ‘ಶರಣಶಕ್ತಿ’ ಚಲನಚಿತ್ರವನ್ನು ಬಿಡುಗಡೆಗೊಳಿಸಿದಂತೆ ಆಗ್ರಹಿಸಿ ವಿಜಯಪುರದ ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದ ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಸಮುದಾಯ ಭವನದಲ್ಲಿ ಮೊದಲ ಸಭೆ ನಡೆಸಿದ ಪದಾಧಿಕಾರಿಗಳು ಚಲನಚಿತ್ರದಲ್ಲಿರುವ ಲೋಪ ದೋಷಗಳ ಕುರಿತು ಚರ್ಚಿಸಿದರು.

ನಿರ್ದೇಶಕ ದಿಲೀಪ್ ಶರ್ಮ, ನಿರ್ಮಾಪಕಿ ಆರಾಧನಾ ಕುಲಕರ್ಣಿ ನಿರ್ಮಿಸಿರುವ ಚಲನಚಿತ್ರ ‘ಶರಣರ ಶಕ್ತಿ’ ಸಂಪೂರ್ಣ ಬಸವಾದಿ ಶರಣರ ತತ್ವಗಳಿಗೆ ವಿರುದ್ಧವಾಗಿದ್ದು, ಕೂಡಲೇ ಸರ್ಕಾರ ಈ ಚಲನಚಿತ್ರವನ್ನು ಪ್ರದರ್ಶನಕ್ಕೆ ಅವಕಾಶ ಕೊಡಬಾರದೆಂದು ಸಂಘಟಕರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಗಳೇಶ್ವರ ವಚನ ಶಿಲಾಮಂಟಪದ ಚನ್ನಬಸವ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ತತ್ವ, ಸಿದ್ಧಾಂತಕ್ಕೆ ಧಕ್ಕೆ ತರುವಂತ ಈ ಚಿತ್ರವನ್ನು ಯಾವುದೇ ಕಾರಣಕ್ಕೂ ಪ್ರದರ್ಶನಗೊಳಿಸಬಾರದು ಎಂದು ಆಗ್ರಹಿಸಿದರು. ಬ. ಬಾಗೇವಾಡಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಶರಣರಿಗೆ ಅವಮಾನ ಮಾಡುವ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದುರು. ರಾಷ್ಟ್ರೀಯ ಬಸವ ಸೇನಾ ಜಿಲ್ಲಾಧ್ಯಕ್ಷ ಡಾ. ರವಿ ಬಿರಾದಾರ ಮಾತನಾಡಿ, ಶರಣರಿಗೆ ಅವಹೇಳನ ಮಾಡಿರುವ ಈ ಚಲನಚಿತ್ರವನ್ನು ನಿರ್ಬಂಧಿಸಿ, ನಿರ್ದೇಶಕ ಹಾಗೂ ನಿರ್ಮಾಪಕರಿಗೆ ಕ್ರಿಮಿನಲ್ ಮೊಕದ್ದಮೆ ಹಾಕಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ ವಿಜಯಪುರ | ಅ. 6ಕ್ಕೆ ಜನಕಲಾ ಸಾಂಸ್ಕೃತಿಕ ಮೇಳ: ಪರಿಶಿಷ್ಟ ಜಾತಿ ಮತ್ತು ಪಂಗಡ‌ ಸಮಿತಿ ಬೆಂಬಲ

ಈ ಸಂದರ್ಭದಲ್ಲಿ ವೀರೇಶಾನಂದ ಸ್ವಾಮೀಜಿ, ಮನಗೂಳಿ ವಿರಕ್ತ ಮಠದ ಸೆರೆಮಯ್ಯ ಸ್ವಾಮೀಜಿ, ಚಂದ್ರಕಲಾ ಸಾ. ಗುಣದಾಳ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ವಿ. ಸಿ. ನಾಗಠಾಣಾ, ಲಡಾಯಿ ಪ್ರಕಾಶನದ ಬಸವರಾಜ ಸುಳಿಭಾವಿ, ಜೇ ಎಸ್, ಪಾಟಿಲ, ಪ್ರಕಾಶ್ ಕಶೆಟ್ಟಿ, ಪ್ರಭುಗೌಡ ಪಾಟೀಲ, ಚನ್ನು ಕಟ್ಟಿಮನಿ, ಅನಿಲ ಹೊಸಮನಿ, ರಾಜಶೇಖರ ಯರನಾಳ, ದಾನೇಶ ಅವಟಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...