ವಿಜಯಪುರ | ಗ್ರಾಮೀಣ ಸೇವೆಯಲ್ಲಿ ವೈದ್ಯರ ಕೊರತೆ; ಕಾರಣ ಸಹಿತ ದಾಖಲೆ ಕೊಡಲು ಸಚಿವರ ಸೂಚನೆ

Date:

ಗ್ರಾಮೀಣ ಪ್ರದೇಶಗಳಲ್ಲಿ ಹೊಸ ವ್ಯೆದ್ಯರು ಕಾರ್ಯ ನಿರ್ವಹಿಸಲೇಬೇಕೆಂಬ ಸುಪ್ರೀಂ ಕೋರ್ಟ್ ನಿರ್ದೇಶನವಿದ್ದರೂ, ಜಿಲ್ಲೆಯಲ್ಲಿ ಪ್ರತಿ ವರ್ಷ 200 ವ್ಯೆದ್ಯರು ಕೋರ್ಸ್ ಮುಗಿಸಿ ಬಂದರೂ ಜಿಲ್ಲೆಯಲ್ಲಿ ಗ್ರಾಮೀಣ ಸೇವೆಗೆ ಏಕೆ ಬರುತ್ತಿಲ್ಲ? ಈ ಕುರಿತು ಕಾರಣ ಸಹಿತ ದಾಖಲೆ ಕೊಡಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರು ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ 2025-26ನೇ ವಾರ್ಷಿಕ ಕರಡು ಯೋಜನೆ ರೂಪಿಸಲು ಅಖಂಡ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ವಿಜಯಪುರ ಜಿಲ್ಲೆಯಲ್ಲಿ 2 ಎಂಬಿಬಿಎಸ್ ಕಾಲೇಜುಗಳಿವೆ. ಪ್ರತಿ ವರ್ಷ 200 ವೈದ್ಯ ವಿದ್ಯಾರ್ಥಿಗಳು ಕೋರ್ಸ್ ಮುಗಿಸಿ‌ ಆಚೆ ಬರುತ್ತಾರೆ. ಹಾಗೆ ಬಂದ ಪ್ರತಿಯೊಬ್ಬ ವೈದ್ಯರೂ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದರೆ ವೈದ್ಯರ ಕೊರತೆ ಇರುವುದಿಲ್ಲ. ಆದರೂ ಜಿಲ್ಲೆಯಲ್ಲಿ ವೈದ್ಯರ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರ ಬಗ್ಗೆ ಲಿಖಿತ ಮಾಹಿತಿ ಒದಗಿಸಬೇಕು” ಎಂದು ತಿಳಿಸಿದರು.

WhatsApp Image 2025 11 26 at 11.04.48 AM

“ತಾಲೂಕಿನಲ್ಲಿ 48 ಸಾವಿರ ಹೆಕ್ಟೇರ್‌ನಲ್ಲಿ ತೊಗರಿ, ಸೂರ್ಯಕಾಂತಿ, ಮೆಕ್ಕೆಜೋಳ ಬೆಳೆ ಹಾನಿಯಾಗಿರುವುದಾಗಿ ವರದಿಯಾಗಿದೆ. ಸದ್ಯ ಬೆಳೆಹಾನಿಯ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ನಷ್ಟ ಅನುಭವಿಸುತ್ತಿರುವ ಪ್ರತಿ ರೈತರಿಗೂ ಆದ್ಯತೆಯ ಮೇರೆಗೆ ವಿಮೆ ಜಮಾವಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಶಾಸಕರಿಗೆ ದೆಹಲಿ ಹೋಗುವ ಅಧಿಕಾರವಿದೆ: ಸಚಿವ ಎಂ ಬಿ ಪಾಟೀಲ

ಮಸೂತಿ, ಮಲಘಾಣ, ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕಟ್ಟಡದ ರಿಪೇರಿಗೆ ಅನುದಾನ ಒದಗಿಸುವಂತೆ ಪಿಡಿಒಗಳಿಗೆ ಸೂಚಿಸಿದರು.

ಸಭೆಯಲ್ಲಿ ಯೋಜನಾ ನಿರ್ದೇಶಕ ಬದ್ರುದ್ದೀನ, ಸವದಗರ, ಬಬಾಗೇವಾಡಿ ತಹಶೀಲ್ದಾರ ಯಮನಪ್ಪ ಸೋಮನಕಟ್ಟಿ, ಕೊಲ್ಹಾರ ಹಾಗೂ ನಿಡಗುಂದಿ ತಹಶೀಲ್ದಾರ, ಬಸವನಬಾಗೇಡಿ ತಾಪಂ ಇಒ ಪ್ರಕಾಶ ದೇಸಾಯಿ, ನಿಡಗುಂದಿ ಇಒ ವೆಂಕಟೇಶ ವಂದಾಲ, ಕೊಲ್ಹಾರ ಇಒ ಸುನೀಲ್ ಮದ್ದಿನ, ಕೊಲ್ಹಾರ ಪ ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ, ನಿಡಗುಂದಿ ಪಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...