ವಿಜಯಪುರ | ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಚುನಾವಣೆ; ಅ.12ರಂದು ಮತದಾನ

Date:

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದೇ ಅಕ್ಟೋಬರ್‌ 12ರಂದು ವಿವಿಧ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 4ರಂದು ಕೊನೆಯದಿನವಾಗಿದೆ.

ಶತಮಾನ ಕಂಡ ಬ್ಯಾಂಕಿನ ನಿರ್ದೇಶಕರಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ಇರುವ ಮುಖಂಡರಿಗೆ ಈ ಚುನಾವಣೆ ವೇದಿಕೆಯಾಗಿದೆ. ಎರಡನೇ ಹಂತದ ರಾಜಕೀಯ ನಾಯಕರಿಗೆ ರಾಜಕಾರಣದಲ್ಲಿ ಉನ್ನತ ಮಟ್ಟದ ಸ್ಥಾನ ಗಿಟ್ಟಿಸಿಕೊಳ್ಳಲು ಚುನಾವಣೆಯು ಪ್ರತಿಷ್ಠೆಯ ಕಣವಾಗಿದೆ. ಅನೇಕ ಗಣ್ಯರು, ಉದ್ಯಮಿಗಳು, ರಾಜಕಾರಣಿಗಳು ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯಲು ಚುನಾವಣೆಯಲ್ಲಿ ಪೈಪೋಟಿಗಿಳಿಯುತ್ತಾರೆ.

ಸಾಕಷ್ಟು ಮಂದಿ ಸಿದ್ದೇಶ್ವರ ಬ್ಯಾಂಕಿನ ನಿರ್ದೇಶಕ, ಅಧ್ಯಕ್ಷ ಉಪಾಧ್ಯಕ್ಷರಾಗುವ ಮೂಲಕ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ರಾಜಕಾರಣಿಗಳಾಗಿ ಹೊರಹೊಮ್ಮಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯಿಂದ ರಾಜಕೀಯ ನಂಟು ಬೆಳೆಯುತ್ತದೆ. ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಮಿಂಚುತ್ತಿರುವ ರಾಜಕೀಯ ನಾಯಕರು ತಮ್ಮ ಬೆಂಬಲಿಗರನ್ನು ಸಿದ್ದೇಶ್ವರ ಬ್ಯಾಂಕ್ ನಿರ್ದೇಶಕರನ್ನಾಗಿಸಿ ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯ 13, ಮಹಿಳೆ 2, ಹಿಂದುಳಿದ ಅ ವರ್ಗ 1, ಹಿಂದುಳಿದ ಬ ವರ್ಗ 1, ಪರಿಶಿಷ್ಟ ಜಾತಿ 1, ಪರಿಶಿಷ್ಟ ಪಂಗಡ 1 ಸ್ಥಾನ ಸೇರಿ 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅರ್ಹ ಸದಸ್ಯರಿಗೆ ಮತದಾನದ ಹಕ್ಕಿರುತ್ತದೆ. ಹಾಲಿ ನಿರ್ದೇಶಕರು ತಮ್ಮದೇ ಬಣ ಕಟ್ಟಿಕೊಂಡು ಮತ್ತೆ ಬ್ಯಾಂಕಿನ ಅಧಿಕಾರ ಹಿಡಿಯಲು ತಂತ್ರಗಾರಿಕೆ ರೊಪಿಸಿ, ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ರಾಜಕೀಯ ನಾಯಕರ ಬೆಂಬಲ ಗಿಟ್ಟಿಸಲು ಮುಂದಾಗಿದ್ದಾರೆ. ಈ ಬಣಕ್ಕೆ ಟಕ್ಕರ್ ಕೊಡಲು ಅನೇಕ ಹೊಸಬರು ಕೊಡ ಮುಂದಾಗಿದ್ದಾರೆ.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರೀಯ ಪ್ರಶಸ್ತಿ

ಶ್ರಿ ಸಿದ್ದೇಶ್ವರ ಸಹಕಾರಿ ಬ್ಯಾಂಕ್ 2023-24 ನೇ ಸಾಲಿನಲ್ಲಿ 542.55 ಕೋಟಿ ಠೇವಣಿ, 642.79 ಕೋಟಿ ದುಡಿಯಿವ ಬಂಡವಾಳ ಹೊಂದಿದೆ. 52.67ಕೋಟಿ ರೊ ಆದಾಯ ಗಳಿಸಿದೆ. ವಿವಿಧ ಶಾಖೆ, ಎಟಿಎಂ ಸೌಲಭ್ಯ ಹೊಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...