ವಿಜಯಪುರ | ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವ

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಕೊಟ್ಟು ನಮ್ಮ ಬದುಕಿನಲ್ಲಿ ಬದಲಾವಣೆ ಹಾಗೂ ಚೈತನ್ಯ ತಂದಿರುವ ಈ ಪುಣ್ಯ ಭೂಮಿಯಲ್ಲಿ ನಿಮ್ಮನ್ನು ಭೇಟಿ ಮಾಡುತ್ತಿರುವುದು ನನ್ನ ಭಾಗ್ಯ” ಎಂದು ಹೇಳಿದರು.

“ಇದು ಬಸವಣ್ಣನ ಜನ್ಮಭೂಮಿ. ಈ ವರ್ಷ ನಮ್ಮ ಸರ್ಕಾರ ಬಸವಣ್ಣನವರಿಗೆ “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂಬ ಬಿರುದು ನೀಡಿದೆ. ನಾವೆಲ್ಲರೂ ಧರ್ಮದಲ್ಲಿ ಮುಳುಗಿದ್ದೇವೆ. ಜಗತ್ತಿನಲ್ಲಿ ಯಾವುದೇ ಧರ್ಮವಾದರೂ ಶಾಂತಿ, ಸೌಹಾರ್ದತೆ ಮೇಲೆ ನಂಬಿಕೆ ಇಟ್ಟು ಬದುಕುತ್ತಿದ್ದೇವೆ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೆ, ಪೂಜೆ ನೂರಾದರೂ ಭಕ್ತಿಯೊಂದೆ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲಿನಲ್ಲಿ, ಕಂಬದಲ್ಲಿ, ನೀರಿನಲ್ಲಿ ದೇವರನ್ನು ನೋಡುತ್ತೇವೆ. ನಾವು ಸಗಣಿಗೆ ಗರಿಕೆ ಹುಲ್ಲು ಸೇರಿಸಿ ಅದನ್ನು ದೇವರೆಂದು ಪೂಜಿಸುತ್ತೇವೆ. ಅಕ್ಕಿ ಜತೆ ಹರಿಷಿನ ಸೇರಿಸಿ ಮಂತ್ರಾಕ್ಷತೆ ಎಂದು ಪೂಜಿಸುತ್ತೇವೆ. ನಾವು ದೇವರನ್ನು ಪ್ರಕೃತಿಯ ಎಲ್ಲ ವಸ್ತುಗಳಲ್ಲೂ ದೇವರನ್ನು ಕಾಣುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಳಲಿನಲ್ಲಿ ಉತ್ತಮ ನಾದ ಬರುತ್ತದೆ ಎಂದು ಬಂಬಿಗೆ ಗೊತ್ತಿರಲಿಲ್ಲ. ಅದೇ ರೀತಿ ಪ್ರತಿಯೊಬ್ಬರಲ್ಲೂ ಅವರದೇ ಆದ ಶಕ್ತಿ ಇರುತ್ತದೆ. ಮಗುಹುಟ್ಟಿದಾಗ ನಾವು ಸಂತೋಷ ಪಡುತ್ತೇವೆ. ಅದೇ ವ್ಯಕ್ತಿ ಸತ್ತಾಗ ಅವನ ಸಾಧನೆ ಬಗ್ಗೆ ಮಾತನಾಡುತ್ತೇವೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ ಮರಣ ಖಚಿತ, ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ” ಎಂದು ತಿಳಿಸಿದರು.

“ಧರ್ಮ ಎಂದರೆ ಎಲ್ಲರ ಬದುಕು. ಧರ್ಮ ಎಂದರೆ ಎಲ್ಲರನ್ನು ಕಟ್ಟುವ ಮಾರ್ಗ. ಧರ್ಮ ಎಂದರೆ ಶಾಂತಿ, ಧರ್ಮ ಎಂದರೆ ಎಲ್ಲರನ್ನೂ ಪ್ರೀತಿಸುವ ಮಾರ್ಗ. ದೇವಾಲಯ ಎಂದರೆ ಭಕ್ತ ಹಾಗೂ ಭಗವಂತನ ನಡುವೆ ವ್ಯವಹಾರ ನಡೆಯುವ ಸ್ಥಳ. ನಮ್ಮ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲವೆಂದು ನಂಬಿದ್ದೇವೆ. ಇದೊಂದು ಧರ್ಮದ ಸಭೆ” ಎಂದು ಹೇಳಿದರು.

“ಜ್ಞಾನದಿಂದ ಅರಿವು ಮೂಡಿಸಬೇಕು. ಮೊನ್ನೆ ಗವಿಸಿದ್ದೇಶ್ವರನ ಜಾತ್ರೆಗೆ ಹೋಗಿದ್ದೆ. ಅಲ್ಲಿನ ಜನಸಾಗರ ನಾನು ಎಲ್ಲೂ ನೋಡಿರಲಿಲ್ಲ. ನನ್ನ ಬದುಕಿನಲ್ಲಿ ಅಷ್ಟು ದೊಡ್ಡ ಪ್ರಮಾಣದ ಶಿಸ್ತಿನ ಜಾತ್ರೆಯನ್ನು ನಾನು ಕಂಡಿರಲಿಲ್ಲ. ಇದಕ್ಕೆ ಅಲ್ಲಿನ ಶಕ್ತಿಯೇ ಕಾರಣ. ನಮ್ಮ ಹಿರಿಯರು ಮನೆ ಉಷಾರು, ಮಠ ಉಷಾರು ಎಂಬ ಬುದ್ಧಿಮಾತು ಹೇಳಿಕೊಂಡು ಬಂದಿದ್ದಾರೆ. ನೀವು ಸಹಕಾರ ನೀಡಿದರೆ ಸ್ವಾಮೀಜಿಗಳು ಏನಾದರೂ ಸಾಧನೆ ಮಾಡಲು ಸಾಧ್ಯ. ಬಸವಣ್ಣನವರು ಸಾಕ್ಷಿಗುಡ್ಡೆ ಬಿಟ್ಟು ಹೋಗಿದ್ದಕ್ಕೆ ನಾವು ಇದನ್ನು ಬಸವಣ್ಣನ ನಾಡೆಂದು ಕರೆಯುತ್ತೇವೆ” ಎಂದರು.

“ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು. ಇತ್ತೀಚೆಗೆ ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಈ ವೇದಿಕೆಯಲ್ಲಿ ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ. ಈ ಜಿಲ್ಲೆಯಲ್ಲಿ ನಮ್ಮ ಸರ್ಕಾರಕ್ಕೆ ಹೆಚ್ಚಿನ ಶಾಸಕರನ್ನು ನೀಡಿ ಶಕ್ತಿ ನೀಡಿದ್ದೀರಿ” ಎಂದು ಹೇಳಿದರು.

“ನಿಮ್ಮ ಶಕ್ತಿಯಿಂದ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದು ನೀವು ಕೊಟ್ಟ ಶಕ್ತಿಯಿಂದ ಮಾಡಿದ ಕಾರ್ಯವಾಗಿದೆ. ನಿಮ್ಮ ಬದುಕಿನಲ್ಲಿ ಆರ್ಥಿಕ ಹಾಗೂ ಮಾನಸಿಕ ಶಕ್ತಿ ತುಂಬಲು ಈ ಯೋಜನೆಗಳಿಗೆ ಸರ್ಕಾರ ಪ್ರತಿ ವರ್ಷ ₹60,000 ಕೋಟಿಯನ್ನು ನೀಡುತ್ತಾ ಬಂದಿದೆ” ಎಂದು ಹೇಳಿದರು.

“ರೈತನಿಗೆ ಸಂಬಳ, ಪಿಂಚಣಿ, ಬಡ್ತಿ, ಲಂಚವಿಲ್ಲ. ಈ ರೈತನನ್ನು ಬದುಕಿಸಬೇಕು. ನಮ್ಮ ಸರ್ಕಾರ ನಿಮ್ಮ ಸೇವೆಗೆ ಬದ್ಧವಾಗಿದೆ. ನಾನು ಇಂದು ನಿಮ್ಮ ಸನ್ಮಾನಕ್ಕಾಗಿ ಇಲ್ಲಿಗೆ ಬಂದಿಲ್ಲ, ನಿಮ್ಮ ಜತೆ ನಾನು ಇದ್ದೇನೆಂದು ಹೇಳಲು ಬಂದಿದ್ದೇನೆ. ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಹೇಳಿದ್ದಾರೆ. ನಾವು ಬದುಕಿನಲ್ಲಿ ನಡೆದು ಬಂದ ಹಾದಿಯೇ ಇತಿಹಾಸ. ನಾನು ಉಪಮುಖ್ಯಮಂತ್ರಿ ಎಂಬುದಕ್ಕಿಂತ ಈ ಮಠದ ಭಕ್ತ. ನಾನು ಪ್ರಮಾಣವಚನ ಸ್ವೀಕಾರ ಮಾಡುವಾಗ ಯಾರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದೆ ಎಂಬುದು ಎಲ್ಲರಿಗೂ ಗೊತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆ ಜಾಗ ಒತ್ತುವರಿ ತೆರವುಗೊಳಿಸಲು ಒತ್ತಾಯ

“ಈ ಭಾಗದ ಶಾಸಕರ ಸರಳತೆಯನ್ನು ಗಮನಿಸಿ ಅವರನ್ನು ಮಗನಂತೆ ಸಾಕಿದ್ದೀರಿ. ಅವರು ರಾಜ್ಯಕ್ಕೆ ದೊಡ್ಡ ಆಸ್ತಿ. ಅವರು ಸರಳತೆಯ ಶಕ್ತಿ. ನಿಮ್ಮ ಸಹಕಾರ ಹೀಗೆ ಮುಂದುವರಿಯಲಿ ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...