ವಿಜಯಪುರ | ವಕ್ಫ್‌ ನೋಟಿಸ್‌ಗೆ ಖಂಡನೆ: ರೈತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

Date:

ವಕ್ಫ್‌ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡಿದ್ದನ್ನು ಹಾಗೂ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯ ರೈತ ಸಂಘ- ಹಸಿರು ಸೇನೆ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಆಹೋರಾತ್ರಿ ಧರಣಿಯನ್ನು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಹಮ್ಮಿಕೊಳ್ಳಲಾಯಿತು.

ಸರ್ಕಾರದ ಹುನ್ನಾರದಿಂದ ರೈತರಿಗೆ ದೀಪಾವಳಿ ಹಬ್ಬ ಕರಾಳವಾಗಿದೆ ಎಂದು ಆರೋಪಿಸಿದ ರೈತರು, ನೋಟಿಸ್‌ನಿಂದ ರೈತ ಕುಟುಂಬಗಳು ಆತಂಕಕ್ಕೀಡಾಗಿದ್ದಾರೆ. ವಕ್ಫ್‌ ಬೋರ್ಡ್ ಎಂದು ದಾಖಲಾಗಿರುವುದನ್ನು ಕೂಡಲೇ ತೆಗೆಯಬೇಕು. ರಾಜ್ಯ ಸರ್ಕಾರ ರೈತರ ವಿಷಯದಲ್ಲಿ ಗಂಭೀರವಾಗಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರೈತ ವಲಯಕ್ಕೆ ಆತಂಕಕ್ಕೀಡಾಗಿರುವ ವಿಷಯವನ್ನು ಸರ್ಕಾರ ಕೂಡಲೇ ಪರಿಹರಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ರೈತ ಮುಖಂಡರಾದ ಅರವಿಂದ ಕುಲಕರ್ಣಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಹೋರಾತ್ರಿ ಧರಣಿಗೂ ಮುನ್ನ ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿ ಆರಂಭಿಸಿ, ಗಾಂಧಿಚೌಕ್ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ರೈತರು ಪ್ರತಿಭಟನಾ ರ್‍ಯಾಲಿ ನಡೆಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭಾವಚಿತ್ರ ಪ್ರದರ್ಶಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಥಣಿ ರಸ್ತೆಯಲ್ಲಿ ಧರಣಿಗೆ ಆಣಿಯಾದ ರೈತರು ರಸ್ತೆ ತಡೆ ನಡೆಸಿದರು. ಬಸವೇಶ್ವರ ಸರ್ಕಲ್. ಡಾ.ಅಂಬೇಡ್ಕರ್ ಸರ್ಕಲ್ ಮೂಲಕ ಡಿಸಿ ಕಚೇರಿವರೆಗೂ ಮೆರವಣಿಗೆ ಮಾಡಿದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.

ಇದನ್ನೂ ಓದಿದ್ದೀರಾ;ಹಾಸನ | ವಿಪಕ್ಷದವರು ಏನೇ ಮಾಡಿದರು ಮುಖ್ಯಮಂತ್ರಿಯನ್ನು ಕುಂದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡರು

ಹೋರಾಟವನ್ನು ರೈತರು ಮುಂದುವರಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭಾವಚಿತ್ರದ ಮುಂದೆ ದೀಪ, ಹಣತೆ ಇಟ್ಟು ರೈತರು ಕರಾಳ ದೀಪಾವಳಿ ಆಚರಣೆ ಮಾಡಿದ್ದಾರೆ. ಧರಣಿಯಲ್ಲಿ ರೈತ ಸಂಘಟನೆಯ ಮುಖಂಡರಾದ ಅರವಿಂದ ಕುಲಕರ್ಣಿ, ಸಂಗಮೇಶ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...