ವಿಜಯಪುರ | ಇಸ್ಪೀಟ್ ಆಟ; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು ಜನ ನೀರುಪಾಲು

Date:

ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿಯ ಮಾಹಿತಿಯನ್ನರಿತು ತಪ್ಪಿಸಿಕೊಳ್ಳಲು ನದಿಗೆ ಜಿಗಿದಿದ್ದು, ಆರು ಜನ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ.

ಪೊಲೀಸರು ಬರುತ್ತಿದ್ದಾರೆ ಎಂದು ಮಾಹಿತಿ ಸಿಕ್ಕ ಬೆನ್ನಲ್ಲೇ ಭಯದಿಂದ ನದಿ ತಟದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪು ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿದೆ. ಆದರೆ, ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿರುವುದಾಗಿ ವರದಿಯಾಗಿದೆ.

ಕೃಷ್ಣಾ ನದಿ ತಟದಲ್ಲಿ ಗುಂಪೊಂದು ಇಸ್ಪೀಟ್ ಆಟವಾಡುತ್ತಿತ್ತು. ಸ್ಥಳಕ್ಕೆ ಪೊಲೀಸರು ಬರುತ್ತಿದ್ದಾರೆಂಬ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಯದಿಂದ ತಪ್ಪಿಸಿಕೊಳ್ಳಲು ತೆಪ್ಪದ ಮೂಲಕ ನದಿಯ ನಡುಗಡ್ಡೆಯತ್ತ ಹೊರಟ್ಟಿದ್ದಾರೆ. ಆದರೆ, ದುರದೃಷ್ಟವಶಾತ್ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನಡು ನದಿಯಲ್ಲೇ ಮಗುಚಿ ಬಿದ್ದಿರುವುದಾಗಿ ತಿಳಿದುಬಂದಿದೆ. ಈಜು ಬಾರದೇ ನೀರಿನಲ್ಲಿ ಮುಳುಗಿ, ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲ್ಹಾರ ಪಟ್ಟಣ ನಿವಾಸಿಗಳಾದ ಮೆಹಬೂಬ್ ವಾಲೀಕಾರ(30), ತಯ್ಯಬ್ ಚೌಧರಿ(30), ರಫೀಕ್ ಜಾಲಗಾರ(55), ಪುಂಡಲಿಕ ಮಲ್ಲಪ್ಪ ಯಂಕಂಚಿ(34), ದಶರಥ ಗೌಡರ ಸೂಳಿಬಾವಿ(66) ಎಂದು ತಿಳಿದುಬಂದಿದ್ದು, ಮತ್ತೋರ್ವನ ವಿವರ ತಿಳಿದುಬಂದಿಲ್ಲ. ಪುಂಡಲಿಕ ಯಂಕಂಚಿ(34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದ್ದು, ಉಳಿದವರ ಶೋಧ ಕಾರ್ಯ ಮುಂದುವರಿದಿದೆ.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ನಾಡ ಬಾಂಬ್ ಸ್ಫೋಟ; ಅಪಾಯದಿಂದ ಪಾರಾದ ಕಾರಿನಲ್ಲಿದ್ದ ಪತ್ರಕರ್ತರು

ಸ್ಥಳಕ್ಕೆ ಕೊಲ್ಹಾರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳಿಗಾಗಿ ಹುಡುಕಾಟ ನಡೆಸಿದ್ದು, ಇನ್ನುಳಿದವರ ಮೃದೇಹಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋವಾವಣೆ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಂಕರ ಮಾರಿಹಾರ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...