ವಿಜಯಪುರ | ಸಿಎಸ್ಆರ್ ಅನುದಾನದಡಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ: ಸಚಿವ ಎಂ ಬಿ ಪಾಟೀಲ

Date:

ವಿದ್ಯಾರ್ಥಿಗಳನ್ನು ಬೌದ್ಧಿಕ ಮತ್ತು ದೈಹಿಕವಾಗಿ ಸದೃಢರನ್ನಾಗಿಸಲು ಸಿಎಸ್ಆರ್ ಅನುದಾನಡಿ ಸ್ಮಾರ್ಟ್ ಕ್ಲಾಸ್ ಮತ್ತು ಕ್ರೀಡಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ತಿಳಿಸಿದರು.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆ ಪ್ರಾರಂಭೋತ್ಸವದ ಅಂಗವಾಗಿ 9ನೇ ತರಗತಿ ಉದ್ಘಾಟನೆ, ಸರಸ್ವತಿ ಪೂಜೆ ಹಾಗೂ ಸಿಎಸ್ಆರ್ ಅನುದಾನದಲ್ಲಿ ಶಾಲಾ ಮಕ್ಕಳಿಗಾಗಿ ಅಳವಡಿಸಿರುವ ಕ್ರೀಡಾ ಸಲಕರಣೆಗಳನ್ನು ವಿದ್ಯಾರ್ಥಿಗಳಿಂದ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

“ಇಲ್ಲಿನ ವಿದ್ಯಾರ್ಥಿಗಳು ಹೈಸ್ಕೂಲು‌ ಶಿಕ್ಷಣಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಮತ್ತು ಪೋಷಕರ ಕಾಳಜಿಗೆ ಸ್ಪಂದಿಸಲು‌ ಸರಕಾರಿ ಹೈಸ್ಕೂಲು ಪ್ರಾರಂಭಿಸಬೇಕು ಎಂಬ ಬಹುದಿನಗಳ ಬೇಡಿಕೆಯನ್ನು ಈಗ ಈಡೇರಿಸಿದ್ದೇವೆ. ವಿಶೇಷವಾಗಿ ವಿದ್ಯಾರ್ಥಿನಿಯರು ತಮ್ಮೂರಿನಲ್ಲಿಯೇ ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಲು ಇದರಿಂದ ಅನುಕೂಲವಾಗಲಿದೆ. ಹೈಸ್ಕೂಲು ಪ್ರಾರಂಭಿಸಲು ಸಾಕಷ್ಟು ಶ್ರಮ ವಹಿಸಿದ್ದೇವೆ. ಮಕ್ಕಳಿಂದಲೇ ಈಗ ಉದ್ಘಾಟನೆ ಮಾಡಿಸಿದ್ದೇವೆ. ಕೆಂಪೇಗೌಡ ಅಂತಾರಾಷ್ಡ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸಿಎಸ್ಆರ್ ಅನುದಾನ ಬಳಸಿ ಇಲ್ಲಿ ಶಾಲೆ ಉನ್ನತೀಕರಿಸಲಾಗಿದೆ. ಈ ಶಾಲೆಗೆ ಅಲ್ಲಿನ ಅಧಿಕಾರಿಗಳು ಇಂದು ಭೇಟಿ ನೀಡಿದ್ದು, ಈ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಿದ್ದಾರೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಸಿಎಸ್ಆರ್ ಅನುದಾನದಡಿ ರೂ. 200 ಕೋಟಿ ವೆಚ್ಚದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಒಟ್ಟು 211 ಕೊಠಡಿಗಳನ್ನು ನಿರ್ಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಈವರೆಗೆ ರೂ. 53 ಕೋಟಿ ವೆಚ್ಚ ಮಾಡಲಾಗಿದೆ. ಹೊಂಡಾ ಕಂಪನಿಯವರು ಇಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಿಸಲಿದ್ದಾರೆ” ಎಂದು ಅವರು ತಿಳಿಸಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಶಿಕ್ಷಕ ಅರವಿಂದ ಮಸಳಿ ಮಾತನಾಡಿ, “ಗ್ರಾಮದ ವಿದ್ಯಾರ್ಥಿಗಳು ಹೈಸ್ಕೂಲು ಶಿಕ್ಷಣ ಪಡೆಯಲು ಪಕ್ಕದ ಊರಿಗೆ ತೆರಳಲು ಪರದಾಡುತ್ತಿದ್ದರು. ಸಚಿವರು ಈ ಶಾಲೆ ಉನ್ನತೀಕರಿಸಿ ವಿದ್ಯಾರ್ಥಿಗಳು ಮತ್ತು ಪೋಷಕರ ಸಮಸ್ಯೆ ಬಗೆಹರಿಸಿದ್ದಾರೆ. ಅಷ್ಟೇ ಅಲ್ಲ, ಜಿಲ್ಲೆಯ.ಬಡಮಕ್ಕಳಿಗೆ ಶಿಕ್ಷಣಕ್ಕಾಗಿ ನೆರವಾಗುವ ಕೊಡುಗೈ ದಾನಿ ಎನಿಸಿಕೊಂಡಿದ್ದಾರೆ. ನೀರಾವರಿ ಮೂಲಕ ರೈತರ ಬಾಳು ಹಸನು ಮಾಡಿದ್ದಾರೆ” ಎಂದರು.

ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಾತನಾಡಿ, “ಸಚಿವರು ಗ್ರಾಮಸ್ಥರ ಬಹುದಿನಗಳ ಬೇಡಿಕೆಯನ್ನು ಈ ಶಾಲೆ ಉನ್ನತೀಕರಣ ಮಾಡುವ ಮೂಲಕ ಈಡೇರಿಸಿದ್ದಾರೆ. ರಾಜ್ಯದಲ್ಲಿಯೇ ಬಬಲೇಶ್ವರ‌ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಅಂದರೆ ಆರು ಪ್ರೌಢ ಶಾಲೆಗಳನ್ನು ಮಂಜೂರು ಮಾಡಲು ಕ್ರಮ ಕೈಗೊಂಡಿದ್ದಾರೆ. ರೂ. 100 ಕೋಟಿ ಸಿಎಸ್ಆರ್ ಅನುದಾನದಲ್ಲಿ ಮತಕ್ಷೇತ್ರದ 100 ಶಾಲೆಗಳಲ್ಲಿ ತಲಾ ರೂ. 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. 80 ಶಾಲೆಗಳಲ್ಲಿ ಹೆಚ್ಚುವರಿ‌ ಕೋಣೆಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಮತಕ್ಷೇತ್ರದ ಎಲ್ಲ 40 ಪ್ರೌಢ ಶಾಲೆಯಲ್ಲಿ 10ನೇ ತರಗತಿಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಿದ್ದಾರೆ. ಮಮದಾಪುರಕ್ಕೆ ಭೇಟಿ‌ ನೀಡಿದ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಯೊಬ್ಬರು ಅಲ್ಲಿನ ಸುಸಜ್ಜಿತ ಸರಕಾರಿ‌ ಶಾಲೆಯನ್ನು ವೀಕ್ಷಿಸಿ ಸಂತಸಪಟ್ಟು ಅದರ ಬ್ಲ್ಯೂಪ್ರಿಂಟ್ ತೆಗೆದುಕೊಂಡು ಹೋಗಿದ್ದಾರೆ. ಮಕ್ಕಳಿಗೆ ಶಿಕ್ಷಣದ ಜೊತೆ ಸ್ವಾಸ್ತ್ಯ ಒದಗಿಸಲು ಕ್ರೀಡಾ ಸಲಕರಣೆ ಸೌಲಭ್ಯ ಒದಗಿಸಿದ್ದಾರೆ. ಮೂಲಭೂತ ಸೌಲಭ್ಯ ಒದಗಿಸಿರುವ ಪರಿಣಾಮ ಹೆಚ್ಚಿನ‌ ಸಂಖ್ಯೆಯಲ್ಲಿ ಮಕ್ಕಳು ಸರಕಾರಿ ಶಾಲೆಗಳಲ್ಲಿ ‌ಪ್ರವೇಶ ಪಡೆಯುತ್ತಿದ್ದಾರೆ. ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳ ಕನಸು ನನಸು ಮಾಡಲು ಶಿಕ್ಷಕರು ಮತ್ತು ಸಿಬ್ಬಂದಿ ಶ್ರಮಿಸಲಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಈ ಸಂದರ್ಭದಲ್ಲಿ ಮುಖಂಡರಾದ ವಿಜಯಕುಮಾರ ಗುರಸಿದ್ದಯ್ಯ ಹಿರೇಮಠ, ತುಕಾರಾಮ ದಡಕೆ, ರಾಮನಗೌಡ ಸಿದ್ಧನಗೌಡ ಚಾವರ, ನಬಿರಸೂಲ ತೆಲಸಂಗ, ಸಿದ್ದು ಗೌಡನವರ, ಸಿದ್ದು ಬೆಳಗಾವಿ, ಯಾಕೂಬ ಜತ್ತಿ, ಶೈಲೇಂದ್ರ ಬಾವಿಮನಿ, ಸಾಬು‌ ಖಂಡೇಕರ, ಮುರಿಗೆಪ್ಪ ಕೋಟಿ, ಶೋಭಾ ಶೀಳಿನ, ಸುರೇಶಗೌಡ ಪಾಟೀಲ, ಬಸವರಾಜ ನರಳೆ, ಸೀತಾರಾಮ ನರಳೆ, ದುಂಡಪ್ಪ ವಾಲಿಕಾರ, ಅಕ್ಬರ ತಿಕೋಟಿ, ತಹಸೀಲ್ದಾರ ಸುರೇಶ ಚವಲರ, ತಾಪಂ ಇಒ ಬಸವಂತರಾಯ ಬಿರಾದಾರ, ಸಿಪಿಐ ರಮೇಶ ಅವಜಿ, ಶೋಭಾ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...