ವಿಜಯಪುರ | ʼಮಹಿಳಾ ಸಬಲೀಕರಣದಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯʼ

Date:

ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೆ ಮಹಿಳೆಯರೂ ಸರಿಸಮಾನವಾಗಿ ಬದುಕಬೇಕೆಂದು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಚಿಂತನೆ ನಡೆಸಿ ಮಹಿಳೆಗೆ ಸಮಾನವಾದ ಅವಕಾಶ ನೀಡಿದ್ದರು. ಸಾಮಾಜಿಕ ಅಭಿವೃದ್ಧಿಯಾಗಬೇಕಾದರೆ ಮಹಿಳಾ ಸಬಲೀಕರಣ ಬಹಳ ಮುಖ್ಯ ಎಂದು ವಿಜಯಪುರ ತಹಶೀಲ್ದಾರ್‌ ಎ.ಡಿ.ಅಮರವಾಡಗಿ ಹೇಳಿದರು.

ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಕೆಜಿಎಸ್ ಶಾಲೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ನಿಡಗುಂದಿ, ಕೆಜಿಎಸ್ ಶಾಲೆಯ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ತಾಯಂದಿರ ಪಾದಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಆಟೋ ಚಾಲಕರಿಂದ ಹಿಡಿದು ಬಾಹ್ಯಾಕಾಶ, ತಂತ್ರ ಜ್ಞಾನ, ರಾಜಕೀಯ, ಸೇನೆ, ಖಗೋಳಶಾಸ್ತ್ರ, ವಿಜ್ಞಾನ ಸೇರಿದಂತೆ ಎಲ್ಲ ರಂಗಗಳಲ್ಲಿ ಮಹಿಳೆ ಗುರುತಿಸಿಕೊಂಡಿದ್ದಾರೆ. ಆದರೂ ಮಹಿಳೆಯನ್ನು ಅಬಲೆ ಎನ್ನುವ ಮನಸ್ಥಿತಿ ಅಲ್ಲಲ್ಲಿ ತಲೆದೋರುತ್ತಿದೆ. ಇದು ಸಂಪೂರ್ಣವಾಗಿ ಬದಲಾಗಬೇಕು. ಪುರುಷನಷ್ಟೇ ಸಮನಾಗಿ ಬೆಳೆಯುತ್ತಿರುವ ಮಹಿಳೆಗೆ ಅನುಭೂತಿಗಿಂದ ಸಹಕಾರ ನೀಡುವುದು ಮುಖ್ಯ” ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಬಿ.ಟಿ.ಗೌಡರ ಮಾತನಾಡಿ, “ಮಹಿಳೆ ಸಾಹಸ ಕ್ಷೇತ್ರ ಆಯ್ಕೆ ಮಾಡಿಕೊಂಡು ಮುನ್ನಡೆದಾಗ ಅವಮಾನಿಸುವುದು ಸಹಜ. ಅಂಥ ಸಂದರ್ಭದಲ್ಲಿಯೂ ಹಿಂಜರಿಯದೆ ಮುಂದೆ ಸಾಗಿದಾಗ ಸಾಧನೆ ಗರಿ ಮುಡಿ ಸೇರುತ್ತದೆ. ಅವರನ್ನು ಪ್ರೋತ್ಸಾಹಿಸಿ ಉದ್ಯೋಗಶೀಲರಾಗಿಸಿ ಮುಖ್ಯವಾಹಿನಿಗೆ ತರುವ ಕಾರ್ಯ ಹೆಚ್ಚಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಂ ಮಾಜಿ ಸದಸ್ಯ ಶಿವಾನಂದ ಅವಟಿ ಮಾತನಾಡಿ, “ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರಯುತ ಶಿಕ್ಷಣ ಸಿಗುತ್ತಿಲ್ಲ. ಪೋಷಕರು ಮತ್ತು ಕುಟುಂಬಗಳನ್ನು ಕಡೆಗಣಿಸುವಂಥ ವಾತಾವರಣ ಹೆಚ್ಚುತ್ತಿದೆ. ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ, ಅಧ್ಯಾತ್ಮಿಕತೆ ಬಗ್ಗೆ ತಿಳಿಸಿಕೊಡುವ ಜವಾಬ್ದಾರಿ ಪೋಷಕರ ಮೇಲಿದೆ. ಮಹಿಳೆಯರು ಟಿವಿ ಸೀರಿಯಲ್, ಸಿನಿಮಾ ನೋಡುವ ಬದಲು ಅಕ್ಕಮಹಾದೇವಿಯವರಂಥ ಶರಣೆಯರ ವಚನಗಳನ್ನು ಓದಿ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಸಮಗ್ರ ಬೇಸಾಯ ಪದ್ಧತಿ ಅನುಸರಿಸಿ ಸ್ವಾವಲಂಬಿಗಳಾಗಿ: ಡಾ. ರವೀಂದ್ರ ಬೆಳ್ಳಿ ಸಲಹೆ

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಉದಯಕುಮಾರ ಬಶೆಟ್ಟಿ, ಆ‌ರ್.ಎ. ನಧಾಪ್, ಎಚ್.ಎಚ್. ದೊಡಮನಿ, ಡಾ.ಮಲ್ಲಮ್ಮ ರೆಡ್ಡಿ, ಸಾಹೇಬ ಗೌಡ ಬಿರಾದರ, ಬಿ.ಸಿ.ನಧಾಪ್, ಬಿ.ಎಸ್.ಇಜೇರಿ, ಸಂಗಮೇಶ ಮಡಿಕೇಶ್ವರ, ಎಸ್.ಬಿ.ಬಜಂತ್ರಿ, ಪಿ.ಎಸ್.ರಾಠೋಡ, ಎಸ್‌ಡಿಎಂಸಿ ಅಧ್ಯಕ್ಷ ರೇವಣಸಿದ್ದಯ್ಯ ಹಿರೇಮಠ ಸೇರಿ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...