ವಿಜಯಪುರ | ರಾಜ್ಯ ಸರ್ಕಾರ ಆ.19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು: ಸಂಸದ ಗೋವಿಂದ ಕಾರಜೋಳ

Date:

ರಾಜ್ಯ ಸರ್ಕಾರ ಆಗಸ್ಟ್‌ 19ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು. ಇದು ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ಮಾಡಲು ಬಿಡುವುದಿಲ್ಲ ಮತ್ತು ರಕ್ತಪಾತವಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಮೀಸಲಾತಿ ಸಂಬಂಧ ಹಾವನೂರ ವರದಿ, ಸದಾಶಿವ ವರದಿ, ಕಾಂತರಜ ವರದಿ, ಮಧುಸ್ವಾಮಿ ವರದಿ ಹಾಗೂ ನಾಗಮೋಹನದಾಸ್ ವರದಿ ಇದ್ದು, ಎಲ್ಲವೂ ವೈಜ್ಞಾನಿಕವಾಗಿವೆ. ಅದರಲ್ಲೂ, ಮಧು ಸ್ವಾಮಿ ವರದಿ ಹೊರತುಪಡಿಸಿ ಉಳಿದ ನಾಲ್ಕು ಆಯೋಗಗಳನ್ನು ಕಾಂಗ್ರೆಸ್ ನೇಮಕ ಮಾಡಿದೆ. ಎಲ್ಲ ವರದಿಗಳ ಮಾಹಿತಿ ಸಹ ಸರ್ಕಾರದಲ್ಲೇ ಇದ್ದು, ಐದರಲ್ಲಿ ಯಾವುದಾದರೂ ಒಂದನ್ನು ದಾರಿ ಮಾಡಿದರೂ, ಅದಕ್ಕೆ ನಮ್ಮ ಸಮ್ಮತಿ ಇದೆ” ಎಂದು ತಿಳಿಸಿದರು.

“ನ್ಯಾ. ನಾಗಮೋಹನದಾಸ್ ಅವರ ಜಾತಿಗಳ ಹಿಂದುಳಿಯುವಿಕೆ ಆಧಾರದ ಮೇಲೆ ತಮ್ಮ ವರದಿಯಲ್ಲಿ ಗುಂಪುಗಳನ್ನು ಮಾಡಿದ್ದಾರೆ. ಇದು ವೈಜ್ಞಾನಿಕವಾಗಿದೆ. ಅಸ್ಪೃಶ್ಯರಲ್ಲಿ ಅತ್ಯಂತ ಹಿಂದುಳಿದವರಿಗೆ ಶೇ.1ರಷ್ಟು ಹೆಚ್ಚು ಹಿಂದುಳಿದ ಮಾದಿಗ ಸಮುದಾಯಕ್ಕೆ ಶೇ.6ರಷ್ಟು, ಹಿಂದುಳಿದ ಹೊಲಯ ಸಮುದಾಯಕ್ಕೆ ಶೇ.5ರಷ್ಟು, ಕಡಿಮೆ ಹಿಂದುಳಿದ ಕೊರಮ, ಕೊರಚ ಜನಾಂಗಕ್ಕೆ ಶೇ.4ರಷ್ಟು ಹಾಗೂ ಆದಿ ಆಂಧ್ರ, ಆದಿ ಕರ್ನಾಟಕ ಮತ್ತು ಜಾತಿಯನ್ನೇ ಹೇಳದವರಿಗೆ ಶೇ.1ರಷ್ಟು ಮೀಸಲು ನಿಗದಿ ಮಾಡಿದ್ದಾರೆ. ಈ ವರದಿಯನ್ನು ಸಂವಿಧಾನ ಮತ್ತು 2014ರ ಏಪ್ರಿಲ್ 1ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮುಂದಿಟ್ಟುಕೊಂಡು ನೋಡಿದಾಗ ಅರ್ಥವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ಇದೀಗ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ. ಜಗಳ ಹತ್ತಿಸುವ ಕೆಲಸವನ್ನು ಕಾಂಗ್ರೆಸ್ ಬಿಡಬೇಕು. ನಾವು ಯಾರಿಗೂ ಅನ್ಯಾಯ ಮಾಡಲು ಹಾಗೂ ತೆಗೆದು ಹಾಕಲು ಹೇಳುವುದಿಲ್ಲ. ಸರ್ಕಾರ ತಂದೆ ಸ್ಥಾನದಲ್ಲಿ ನಿಂತು ಅವರವರ ಪಾಲನ್ನು ಕೊಡಬೇಕು. ಒಳಮೀಸಲಾತಿಯಿಂದ ಯಾರೂ ವಂಚಿತರಾಗಬಾರದು. ವರದಿಯಲ್ಲಿ ತಿದ್ದುಪಡಿ ಮಾಡುವ ಅವಶ್ಯಕತೆ ಇದ್ದರೆ, ಅದನ್ನಾದರೂ ಮಾಡಿ ಒಳಮೀಸಲಾತಿ ಜಾರಿ ಮಾಡಬೇಕು. ನಮ್ಮದು ಯಾವುದೇ ತಕರಾರು ಇಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

“ನೆರೆಯ ಆಂಧ್ರ ಮತ್ತು ತೆಲಂಗಾಣದಲ್ಲಿ ಈಗಾಗಲೇ ಒಳಮೀಸಲಾತಿ ಅನುಷ್ಠಾನಗೊಳಿಸಲಾಗಿದೆ. ಆದರೆ, ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ತಮ್ಮದೇ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ನೀಡಿದ ಭರವಸೆಯನ್ನು ಯಾಕೆ ಈಡೇರಿಸುತ್ತಿಲ್ಲ? ನುಡಿದಂತೆ ನಡೆದ ಸರ್ಕಾರ ಅಂದರೆ ಇದೇನಾ? ಆಗಸ್ಟ್‌ 16ರಂದೇ ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಿ ಮುಂಡೂಡಲು ಕಾರಣವೇನು? ಎಲ್ಲ ಜಾತಿಯವರು ರಸ್ತೆಯಲ್ಲಿ ಒಡದಾಡಿಕೊಂಡು ಹೋಗಬೇಕೆಂಬ ಕಾಂಗ್ರೆಸ್‌ನ ಒಡೆದು ಆಳುವ ನೀತಿ ಖಂಡಿನೀಯವಾಗಿದೆ. ಒಳಮೀಸಲಾತಿಯು ಮತ ಬ್ಯಾಂಕ್ ರಾಜಕಾರಣಕ್ಕೆ ಅಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಇದನ್ನು ಜಾರಿ ಮಾಡಬೇಕು” ಎಂದು ಕಾರಜೋಳ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...