ವಿಜಯಪುರ | ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ ಎನ್ ನಾಮಪತ್ರ ಸಲ್ಲಿಕೆ 

Date:

ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಪಕ್ಷ ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವ ಭರವಸೆ ಸುಳ್ಳಾಗಿದೆ ಎಂದು ವಿಜಯಪುರ ಲೋಕಸಭಾ ಕ್ಷೇತ್ರದ ಎಸ್‌ಯುಸಿಐ(ಕಮ್ಯೂನಿಸ್ಟ್‌) ಪಕ್ಷದಿಂದ ನಾಗಜ್ಯೋತಿ ಬಿ ಎನ್ ಆರೋಪಿಸಿದರು.

ವಿಜಯಪುರ ಲೋಕಸಭಾ ಕ್ಷೇತ್ರದ ಎಸ್‌ಯುಸಿಐ(ಕಮ್ಯೂನಿಸ್ಟ್‌) ಪಕ್ಷದಿಂದ ಶುಕ್ರವಾರ ನಾಮಪತ್ರ ಸಲ್ಲಿಸಿ ಮಾತನಾಡಿದರು.

“ಪ್ರಸ್ತುತ ಭಾರತದ ಯುವಜನರು ನಿರುದ್ಯೋಗ ಎದುರಿಸಲಾಗದೆ ಯುದ್ಧಪೀಡಿತ ರಷ್ಯಾ, ಇಸ್ರೇಲ್ ಮೊದಲಾದ ರಾಷ್ಟ್ರಗಳಿಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾರೆ. ಇನ್ನೊಂದೆಡೆ ಜಾಗತಿಕ ಹಸಿವಿನ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಪಾತಾಳದಲ್ಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ನೀರಿಗಾಗಿ ಹಾಹಾಕಾರ ಇದ್ದರೂ ಕೂಡಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಕ್ಷುಲ್ಲಕ ರಾಜಕೀಯದಲ್ಲಿ ಮುಳುಗಿವೆಯೇ ಹೊರತು ಜನರ ಸಂಕಷ್ಟಗಳಿಗೆ ಗಮನ ಹರಿಸುತ್ತಿಲ್ಲ” ಎಂದರು.

ಜನಸಮುದಾಯ ಹಾಗೂ ರೈತ, ಕೃಷಿ, ಕಾರ್ಮಿಕರಿಗೆ ಅವಶ್ಯಕತೆ ಇರುವುದು ಉದ್ಯೋಗ, ಶಿಕ್ಷಣ, ವಸತಿಗಳಂತಹ ಸೌಲಭ್ಯಗಳು. ಇಂತಹ ಜ್ವಲಂತ ಸಮಸ್ಯೆಗಳ ವಿರುದ್ಧ ಲೋಕಸಭೆಯಲ್ಲಿ ಧ್ವನಿ ಎತ್ತಲು ಜನ ಹೋರಾಟಗಳಿಂದ ಹೊರಹೊಮ್ಮಿದ ಅಭ್ಯರ್ಥಿ ನಾಗಜ್ಯೋತಿ ಬಿ ಎನ್ ಅವರು ಎಸ್‌ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ಕಣಕ್ಕಿಳಿಯಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಸಂಘಟನಾಕಾರರು ಮಾತನಾಡಿ, “ವಿಜಯಪುರ ಜಿಲ್ಲೆಯ ಎಲ್ಲ ಮತದಾರರು ಎಸ್‌ಯುಸಿಐ ಕಮ್ಯೂನಿಸ್ಟ್‌ ಪಕ್ಷ ಬೆಳೆಸಿದ ಹೋರಾಟ ಚಳವಳಿಗಳನ್ನು ಗುರುತಿಸಿ, ಜನಹೋರಾಟದಲ್ಲಿ ಹೊರಹೊಮ್ಮಿದ ಅಭ್ಯರ್ಥಿ ಕಾಮ್ರೇಡ್ ನಾಗಜ್ಯೋತಿ ಬಿ ಎನ್ ರವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ನಾಮಪತ್ರ ಸಲ್ಲಿಸುವಾಗ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನರೆಡ್ಡಿ, ಹಿರಿಯರಾದ ವಿ ಎ ಪಾಟೀಲ, ವಕೀಲ ಸಂಗಾರೆಡ್ಡಿ ದೇಸಾಯಿ, ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಸಿದ್ದಲಿಂಗ ಬಾಗೇವಾಡಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...