ವಿಜಯಪುರ | NH-50 ದುರಸ್ಥಿಗೆ ಆಗ್ರಹಿಸಿ ಸುನೀಲಗೌಡ ಪತ್ರ; ಸಚಿವ ನಿತಿನ್‌ ಗಡ್ಕರಿ ಸ್ಪಂದನೆ

Date:

ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ-50 ರ ದುರಸ್ಥಿಗೆ ಆಗ್ರಹಿಸಿ ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಂದಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಲಿಖಿತವಾಗಿ ಪತ್ರ ಬರೆಯುವ ಮೂಲಕ ತಿಳಿಸಿದ್ದಾರೆ.

ಶಾಸಕ ಸುನೀಲಗೌಡ ಪಾಟೀಲ ಅವರು ಕಳೆದ ನವೆಂಬರ್‌ 24ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರದ ಸೋಲಾಪುರದಿಂದ ಪ್ರಾರಂಭವಾಗಿ ರಾಜ್ಯದ ವಿಜಯಪುರ ಮೂಲಕ ಚಿತ್ರದುರ್ಗ ಮೂಲಕ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ- 50 ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಆಂತಾರಾಜ್ಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ರಸ್ತೆ ಹದಗೆಟ್ಟಿದೆ. ವಿಜಯಪುರದಿಂದ ಚಿತ್ರದುರ್ಗದವರೆಗೆ ರಸ್ತೆಯ ಮೇಲ್ಪದರು ಕಿತ್ತು ಹೋಗಿದೆ. ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿಯೂ ಬಹುತೇಕ ಹಾಳಾಗಿದೆ. ಈ ಎರಡೂ ಮಾರ್ಗಗಳಲ್ಲಿ ರಸ್ತೆ ಮಧ್ಯದಲ್ಲಿ ಕುಣಿಗಳು ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ವಾಹನಗಳ ಸಂಚಾರ ನಿಧಾನವಾಗಿದ್ದು, ದಿನನಿತ್ಯ ಸಂಚಾರಕ್ಕೆ ಸಾರ್ವಜನಿಕರಿಗೆ ಅಪಾಯ ಎದುರಾಗಿದೆ.

ಭಾರಿ ಸಾರಿಗೆ ವಾಹನಗಳೂ ಈ ರಸ್ತೆಯಲ್ಲಿ ಸಂಚರಿಸುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ. ಅತೀ ಹೆಚ್ಚು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಮಾರ್ಗವೂ ಒಂದಾಗಿದೆ. ಪ್ರತಿನಿತ್ಯ ಈ ಎರಡೂ ಮಾರ್ಗಗಳಲ್ಲಿ ಸುಮಾರು 27 ಸಾವಿರ ಪಿಸಿಯುನಷ್ಟು ವಾಹನಗಳು ಸಂಚರಿಸುತ್ತವೆ. ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗುತ್ತಿದೆ. ವಿಜಯಪುರದಿಂದ ಬೆಂಗಳೂರು ಮಾರ್ಗದಲ್ಲಿ ಹುನಗುಂದ, ಕುಷ್ಟಗಿ ಹಾಗೂ ಹೊಸಪೇಟೆಗಳಿಗೆ ಬೇರೆ ಹೆದ್ದಾರಿಗಳು ಸಂಪರ್ಕಿಸುವುದರಿಂದ ಆ ಮಾರ್ಗದ ವಾಹನಗಳೂ ಇದೇ ರಸ್ತೆಗೆ ಸೇರಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗುತ್ತಿದೆ ಎಂದು ಅವರು ಎಳೆಎಳೆಯಾಗಿ ಅಂಕಿ-ಅಂಶ ಸಮೇತ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತೀ ಹೆಚ್ಚು ಟೋಲ್ ಸಂಗ್ರಹವಾಗುವ ಮಾರ್ಗಗಳಲ್ಲಿ ಇದೂ ಒಂದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಪ್ರತಿದಿನ ಸರಾಸರಿ ಸುಮಾರು ರೂ. 30 ಲಕ್ಷ ಟೋಲ್ ಸಂಗ್ರಹಿಸಲಾಗುತ್ತಿದೆ. ಇಷ್ಟೋಂದು ಟೋಲ್ ಹಣ ಸಂಗ್ರಹವಾಗುತ್ತಿದ್ದರೂ ರಸ್ತೆ ಮಾತ್ರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾನದಂಡಕ್ಕೆ ಅನುಗುಣವಾಗಿರದೇ ಕಳಪೆಯಾಗಿದೆ. ಆದ್ದರಿಂದ ಈ ರಸ್ತೆಯನ್ನು ನಿರ್ದಿಷ್ಠ ಮಾನದಂಡಗಳಿಗೆ ಅನುಗುಣವಾಗಿ ದುರಸ್ತಿ ಮಾಡಿ ಮೂಲಭೂತ ಸೌಲಭ್ಯ ಒದಗಿಸಬೇಕು. ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಹೆದ್ದಾರಿಯಲ್ಲಿ ಹೊಸದಾಗಿ ಮೇಲ್ಪದರು ಹಾಕಬೇಕು. ಅಗತ್ಯವಿರುವ ಕಡೆ ಹೆದ್ದಾರಿಯನ್ನು ಅಗಲೀಕರಣ ಮಾಡಬೇಕು ಎಂದು ಶಾಸಕರು ತಮ್ಮ ಪತ್ರದಲ್ಲಿ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ವಿಜಯಪುರ | 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅಲ್ಲದೇ, ಕೇಂದ್ರ ಸಚಿವರು ಮುತುವರ್ಜಿ ವಹಿಸಿದರೆ ಈ ರಸ್ತೆ ದುರಸ್ಥಿಯಾಗಿ ಮಾಡಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರಿಗೆ ಸಂಚಾರಕ್ಕೆ ಅನುಕೂಲ ಒದಗಿಸಬೇಕು. ಇದರಿಂದ ಈ ಮಾರ್ಗದಲ್ಲಿ ಬರುವ ಬಹಳಷ್ಟು ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಕೂಡಲೇ ಈ ನಟ್ಟಿನಲ್ಲಿ ಕ್ರಮ ಕೈಗೊಳ್ಳೇಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಇದೀಗ ಕೇಂದ್ರ ಹೆದ್ದಾರಿ ಸಚಿವ ಪತ್ರದ ಮೂಲಕ ಸ್ಪಂದಿಸಿದ್ದು, ರಸ್ತೆ ದುರಸ್ತಿ ಕಾರ್ಯಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...