ವಿಜಯಪುರ | ಆರೋಗ್ಯ ಪೂರ್ಣ ಸಮಾಜಕ್ಕೆ ದೇಶದ ಸಂವಿಧಾನವೇ ಅಡಿಗಲ್ಲು; ಗಾಯಕ ಜನಾರ್ದನ

Date:

ಆರೋಗ್ಯ ಪೂರ್ಣ ಸಮಾಜಕ್ಕೆ ನಮ್ಮ ದೇಶದ ಸಂವಿಧಾನವೇ ಅಡಿಗಲ್ಲು. ಅದು ಬುದ್ಧನ ಗ್ರಂಥ, ಬಸವಣ್ಣನ ಆತ್ಮ, ಕನಕದಾಸರ ಆಶಯಗಳು, ನಮ್ಮ ಸಂಸ್ಕೃತಿಯ ಬೇರೆ-ಬೇರೆ ಪರಪಂಪರೆಯ ಪ್ರತೀಕ. ಕವಿರಾಜ ಮಾರ್ಗದಿಂದ ಹಿಡಿದು ವಚನ ಚಳವಳಿ, ದಾಸ ಸಾಹಿತ್ಯ, ಸೂಫಿ ಸಂತರ ಸಾಹಿತ್ಯದವರೆಗಿನ ಎಲ್ಲ ಅಂಶಗಳನ್ನು ಸಮಗ್ರವಾಗಿ ನಮ್ಮ ಸಂವಿಧಾನ ಒಳಗೊಂಡಿದೆ. ಹೀಗಾಗಿ ನಮ್ಮ ಸಂವಿಧಾನಕ್ಕೆ ಏನೂ ಮಾಡಲು ಆಗಲ್ಲ ಎಂದು ಮೈಸೂರಿನ ಜನಪರ ಗಾಯಕ ಜನಾರ್ದನ ಹೇಳಿದರು.

ವಿಜಯಪುರ ಪಟ್ಟಣದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ರವಿವಾರ ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಮತ್ತು ಚಿತ್ತಾರ ಕಲಾ ಬಳಗಸೇರಿ ವಿವಿಧಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಜನಕಲಾ ಸಾಂಸ್ಕೃತಿಕ ಮೇಳ’ದಲ್ಲಿ ಅವರು ಮಾತನಾಡಿದರು.

ಡಾ ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ನ್ಯಾಯದಡಿ ದೇಶವನ್ನು ಕಟ್ಟಬೇಕೆಂಬ ರಚನೆ ಹೊಂದಿದೆ. ನಮ್ಮ ಸಂವಿಧಾನವು ವಿಶ್ವದ ಸಮೃದ್ಧ ಮತ್ತು ಪ್ರಬುದ್ಧತೆ ಹೊಂದಿದೆ ಎಂದು ಜಗತ್ತಿನ ಅನೇಕರು ಕರೆಯುತ್ತಾರೆ. ಹೀಗೆ ಕರೆದವರು ಹುಚ್ಚರಾ? ಆದರೆ, ನಮ್ಮ ದೇಶದಲ್ಲಿರುವ ಕೆಲವರಿಗೆ ಅದರ ಬಗ್ಗೆ ಅಸಮಾಧಾನವಿದೆ. ಎಲ್ಲಿ ಸಮಾನತೆ ಬಂದರೆ, ತಮ್ಮ ಹಿಡಿತ ತಪ್ಪಲಿದೆ ಎಂಬ ಭಯ ಕೆಲವರನ್ನು ಕಾಡುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ನೇರವಾಗಿ ದ್ವೇಷ ಬಿಟ್ಟು ದೇಶ ಕಟ್ಟೋಣ ಎಂದು ಹೇಳುತ್ತೇವೆ. ಇದರಲ್ಲಿ ತಪ್ಪೇನಿದೆ? ಎಲ್ಲಿಯವರೆಗೆ, ಯಾರಿಗಾಗಿ ದ್ವೇಷ ಸಾಧಿಸುತ್ತೀರಿ, ನಮಗೆ ಸಮಾನತೆ, ಸೌಹಾರ್ದತೆ, ಶಾಂತಿ ಸಮನ್ವಯ ತತ್ವ ಮತ್ತು ಸಹಬಾಳ್ವೆ ಬೇಕೆಂದು ಕೇಳುವುದು ತಪ್ಪಾ? ಇವೆಲ್ಲವೂ ನಾವು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನದ ಹಕ್ಕಿನಡಿ ಕೇಳುತ್ತಿದ್ದೇವೆ ಎಂದು ಹೇಳಿದರು.

“ದಲಿತರು ದಮನಿಯ ಸ್ಥಿತಿಗೆ ತಲುಪಿದಾಗ ಹುಟ್ಟಿದ ಚಳುವಳಿಗೆ ದಲಿತ ಚಳುವಳಿ. ಕೆಲ ವರ್ಷಗಳಿಂದ ದಲಿತ ಚಳುವಳಿ ಮಂಕಾಗಿದೆ. ಇದಕ್ಕೆ ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು ಈಗ ಸಂಘಟನೆಗೆ ಸೇರಿಕೊಳ್ಳುತ್ತಿರುವುದೇ ಕಾರಣ. ಹೀಗಾಗಿ ಅಂಬೇಡ್ಕರ್, ಬಸವಣ್ಣನ ತತ್ವಗಳ ಸ್ಪಷ್ಟತೆ ಇರಬೇಕು. ತಾತ್ವಿಕ ನೆಲೆ ಸ್ಪಷ್ಟವಾಗಿರಬೇಕು ಎಂದು ಜನಾರ್ದನ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ಗೆ ಅಂದಯ್ಯ ಅರವಟಗಿಮಠ ಭಾಜನ

ಹಿರಿಯ ಪತ್ರಕರ್ತ ಅನಿಲ ಹೊಸಮನಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ದಾವಣಗೆರೆಯ ಬಿ .ಶ್ರೀನಿವಾಸ, ಕಲಬುರಗಿಯ ಕನ್ನಡ ಮತ್ತು ಸಂಸ್ಕೃತ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಈ ಕಾರ್ಯಕ್ರಮವನ್ನು ಬಸ್ಸಮ್ಮ ಈರಪ್ಪ ನಡುವಿನಮನಿ, ಆದಮ್ಮ ಚಂದ್ರಪ್ಪ ಖಾದ್ರಿ, ಸಾವಿತ್ರಿಬಾಯಿ ನೀಡೋನಿ, ರಮಾಬಾಯಿ ಸಂಗಪ್ಪ ಬೆಳ್ಳನವರ, ಪದ್ಮಾವತಿ ಸಂಗಪ್ಪ ವಾಗಮೊರೆ ಅವರು ಡಾ. ಬಿಆರ್ ಅಂಬೇಡ್ಕರ್ ಕುರಿತು ಹಾಡುಗಳ ಗಾಯನದ ಮೂಲಕ ಉದ್ಘಾಟಿಸಿದರು.

ಲಡಾಯಿ  ಪ್ರಕಾಶನದ ಮುಖಂಡರಾದ ಬಸವರಾಜ ಸೂಳಿಬಾವಿ, ಜೆ.ಎಸ್.ಪಾಟೀಲ್, ತುಕಾರಾಂ ಚಂಚಲಕರ, ಪ್ರಭುಗೌಡ ಪಾಟೀಲ, ಚನ್ನು ಕಟ್ಟಿಮನಿ, ನಾಗರಾಜ ಲಂಬು, ಪರಶುರಾಮ ಲಂಬು, ಚಂದ್ರಕಾಂತ ಶಿಂಗೆ, ಅಶೋಕ್ ಚಲವಾದಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...