ವಿಜಯಪುರ | ಮಕ್ಕಳ ಹಕ್ಕುಗಳ ರಕ್ಷಣೆಯೇ ಆಯೋಗದ ಕೆಲಸ: ಆಪ್ತಸಮಾಲೋಚಕಿ ನೀಲಮ್ಮ

Date:

ಪ್ರತಿ ಮಗುವಿನ ಹಕ್ಕುಗಳನ್ನು ಎತ್ತಿ ಹಿಡಿಯಲು ಮಕ್ಕಳ ಹಕ್ಕುಗಳ ಆಯೋಗವು ಶ್ರಮಿಸುತ್ತದೆ. ಮಕ್ಕಳನ್ನು ಮಾನಸಿಕ, ದೈಹಿಕ ಹಿಂಸೆ, ಶೋಷಣೆ ಮತ್ತು ನಿರ್ಲಕ್ಷದಿಂದ ಕಾಣದೆ, ಪ್ರತಿ ಮಗುವಿನ ಹಕ್ಕನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದು ವಿಜಯಪುರದ ಮಕ್ಕಳ ಸಹಾಯವಾಣಿ ಆಪ್ತಸಮಾಲೋಚಕಿ ನೀಲಮ್ಮ ಅರಳಗುಂಡಗಿ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹೊರವಲಯದ ಲೊಯೋಲ ಶಾಲೆಯಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ್ದ “ಚಿಣ್ಣರ ಮೇಳ” ಹಾಗೂ ಮಕ್ಕಳ ಸಂಭ್ರಮದ ಹಬ್ಬದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, “ಎಂತಹ ಸಂದರ್ಭದಲ್ಲಿಯಾದರೂ, ಸಮಾಜದಲ್ಲೇ ಆಗಲಿ, ಕುಟುಂಬದಲ್ಲೇ ಆಗಲಿ ಮಕ್ಕಳನ್ನು ಶೋಷಿಸುವುದು ಕಂಡುಬಂದರೆ, ಅಥವಾ ಮಕ್ಕಳು ತೊಂದರೆಗೆ ಒಳಗಾಗಿದ್ದರೆ ಕೂಡಲೇ 1098ಕ್ಕೆ ಕರೆ ಮಾಡಿ ಇಲ್ಲವೆ ಮಕ್ಕಳ ರಕ್ಷಣಾ ಸಮಿತಿಗೆ ತಿಳಿಸಬೇಕು” ಎಂದರು.

ಮಕ್ಕಳ ಸಾಹಿತಿ ಬಸವರಾಜ ಅಗಸರ ಮಾತನಾಡಿ, “ಚಿಣ್ಣರ ಮೇಳದ ಮೂಲಕ ಮಕ್ಕಳ ಸೃಜನಶೀಲತೆ, ಪ್ರತಿಭೆ ಮತ್ತು ಕಲಿಕೆಯನ್ನು ಉತ್ತೇಜಿಸುವ ಕೆಲಸವಾಗುತ್ತದೆ. ಕಲಿಕೆ, ನೃತ್ಯ, ಆಟ ಮತ್ತು ಸಂಭ್ರಮದ ಮೂಲಕ ಹಬ್ಬದ ವಾತಾವರಣ ನಿರ್ಮಿಸಿ ಕಾರ್ಯಕ್ರಮ ಸಂಘಟಿಸಿರುವ ಸಂಗಮ ಸಂಸ್ಥೆ ಮಕ್ಕಳಿಗೆ ತಮ್ಮ ಸಾಧನಗೈಯಲು ಉತ್ತಮ ವೇದಿಕೆ ನೀಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳೆ ಆತ್ಮರಕ್ಷಣೆ ಕಲೆ ಕಲಿಯುವುದು ಅನಿವಾರ್ಯ: ಪ್ರೊ. ನಾಮದೇವಗೌಡ

ಕಾರ್ಯಕ್ರಮದಲ್ಲಿ ರಾಂಪೂರ ಪಿ ಎ ಗ್ರಾಮದ ಶಾಲೆಯ ಮಗು ಅಶ್ವಿನಿ ರಾಠೋಡ, ಲೊಯೋಲ ಸಿ ಬಿ ಎಸ್ ಸಿ ಪ್ರಾಶುಂಪಾಲ ಫಾ.ವಿಶಾಲ್ ಡಿ ಮೆಲ್ಲೊ, ಗಣಿಹಾರ ಶಾಲೆಯ ಮಗು ಸಚೀನ ಹಿಕ್ಕನಗುತ್ತಿ, ತನು ಜಾದವ, ಸಂಗಮ ಸಂಸ್ಥೆ ಸಹ ನಿರ್ದೇಶಕ ಸಿ ಸಿಂತಿಯಾ ಡಿ ಮೆಲ್ಲೊ, ಲೊಯೋಲ ಸಿ ಬಿ ಎಸ್ ಸಿ ಫಾ. ಜೀವನ್ ಡಿಸೋಜ, ಸಂಗಮ ಸಂಸ್ಥೆ ನಿರ್ದೇಶಕ ಫಾ. ಸಂತೋಷ ವಿಲ್ಸನ್, ಫಾ. ಸುನೀಲ ಫೆರ್ನಾಂಡಿಸ್, ಪಾ. ರೊನಾಲ್ಡ್‌, ಪಾಯಲ್ ರಾಠೋಡ, ಶೋಭಾ ವಾಲಿಕಾರ, ರಾಜು ಕುರಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಸಂಗಮ ಸಂಸ್ಥೆ ಕಲಿಕಾ ಕೇಂದ್ರ ಮಕ್ಕಳು ವಿವಿಧ ಆಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬಹುಮಾನಗಳ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...