ವಿಜಯಪುರ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸಿಎಂಗೆ ಮಾದಿಗ ಹೋರಾಟ ಸಮಿತಿ ಮನವಿ

Date:

ಸುಪ್ರೀಂ ಕೋರ್ಟ್ ಆದೇಶದಂತೆ ಸೂಕ್ತ ದತ್ತಾಂಶಗಳನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಜನ ಸಂಘ ಹೋರಾಟ ಸಮಿತಿಯು ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

“ಅಸಮಾನತೆಯ ಸಂತ್ರಸ್ತರಾದ ಮಾದಿಗರು, ದಲಿತರು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ 30 ವರ್ಷಗಳ ತ್ಯಾಗ ಬಲಿದಾನದಿಂದ ಸಾವು ನೋವುಗಳನ್ನು ಅನುಭವಿಸಿ ನಿರಂತರವಾಗಿ ಹೋರಾಟ ಮಾಡಿದ ಪರಿಣಾಮ ಸುಪ್ರೀಂ ನ್ಯಾಯಾಲಯವು ಒಳ ಮೀಸಲಾತಿ ಪರವಾದ ತೀರ್ಪು ನೀಡಿದೆ. ಮಾದಿಗ ಸಮುದಾಯದ ಬಲದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳು ತಮ್ಮ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂಬುದಾಗಿ ಆಶ್ವಾಸನೆ ಮಾತ್ರ ನೀಡು ಸುಮ್ಮನಾಗಿವೆ” ಎಂದು ಸಮಿತಿಯ ಪದಾಧಿಕಾರಿಗಳು ಆರೋಪಿಸಿದರು.

‌”ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು. ನಾ. ನಾಗಮೋಹನ್ ದಾಸ್‌ರವರ ಸಮಿತಿಗೆ ಈ ಹಿಂದೆ 7 ವರ್ಷಗಳ ಕಾಲ ಅಧ್ಯಯನ ನಡೆಸಿದ ನ್ಯಾಯಮೂರ್ತಿ ಎ ಜೆ ಸದಾಶಿವರ ಆಯೋಗದ ದತ್ತಾಂಶಗಳಿರುವ ವರದಿಯ ಶಿಫಾರಸ್ಸುಗಳನ್ನು ಬಳಸಿಕೊಂಡು ವರದಿ ತಯಾರಿಸಲು ಸರ್ಕಾರ ಆದೇಶ ನೀಡಬೇಕು. ಮಾದಿಗ, ಸಮಗಾರ, ಡೊಹರ, ದಕ್ಕಲಿಗ, ಮಚ್ಚಗಾರ, ಮತ್ತು ಇತರೆ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗದಿರುವ ಕಾರಣ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿಯುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕಾಲುವೆಗೆ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ

ಈ ವೇಳೆ ಕರ್ನಾಟಕ ಮಾದಿಗ ಜನಸಂಘ ಹೋರಾಟ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಪರಶುರಾಮ ರೋಣಿಹಾಳ, ರಾಜ್ಯ ಉಪಾಧ್ಯಕ್ಷ ಸದಾನಂದ ಗುನ್ನಾಪುರ, ರಾಜ್ಯ ಕಾರ್ಯದರ್ಶಿ ದಶರಥ ಹೊನ್ನಳ್ಳಿ, ಜಿಲ್ಲಾಧ್ಯಕ್ಷ ಎಂ ಆರ್ ದೊಡ್ಡಮನಿ, ಯುವ ಘಟಕದ ರಾಜ್ಯಾಧ್ಯಕ್ಷ ನಾಗರಾಜ ಮಾದರ, ಜಿಲ್ಲಾ ಉಪಾಧ್ಯಕ್ಷ ಸಾಗರ ಪೂಜಾರಿ, ವಿಠ್ಠಲರಾಜ ಸಂದರಮನಿ, ಧರ್ಮರಾಜ ಹೊಸುರ, ಕೃಷ್ಣ ಬಾನಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...