ವಿಜಯಪುರ | ಹಲವು ಬೇಡಿಕೆ ಈಡೇರಿಕೆಗೆ ಒಡಲದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟ ಆಗ್ರಹ

Date:

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಕೋಳರುಗಿ ಗ್ರಾಮದಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದ ಮುಂದೆ ಸ್ವಚ್ಛಗೊಳಿಸಲು ಆಗ್ರಹಿಸಿ ಒಡಲು ದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟದಿಂದ ಕೊಳೂರು ಗ್ರಾಮ ಪಂಚಾಯಿತಿ ಪಿಡಿಒಗೆ ಮನವಿ ಸಲ್ಲಿಸಿದರು.

ಒಕ್ಕೂಟದ ಅಧ್ಯಕ್ಷೆ ಇಂದು ಹೊಸಮನಿ ಮಾತನಾಡಿ, “ಸಾವಳಗಿ ಗ್ರಾಮದಲ್ಲಿರುವ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನದ ಸುತ್ತಮುತ್ತ ಸ್ವಚ್ಛಗೊಳಿಸಬೇಕು. ಗರಸು ಹಾಕಿಸಿ ಜಲಜೀವನ ಮಿಷನ್ ನೀರಿನ ಸೌಲಭ್ಯ ಮತ್ತು ಕಾಂಪೌಂಡ್ ಗೋಡೆ ಮತ್ತು ಶೌಚಾಲಯ ನಿರ್ಮಿಸಬೇಕು” ಎಂದು ಒತ್ತಾಯಿಸಿದರು.

“ಒಡಲದನಿ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟದಿಂದ ಸಂಜೆ ತರಗತಿ ನಡೆಸುತ್ತಿದ್ದೇವೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮುದಾಯ ಭವನದಲ್ಲಿ ಈ ತರಬೇತಿ ನಡೆಸಲಾಗುತ್ತದೆ.
ಸಮುದಾಯ ಭವನದ ಸುತ್ತಮುತ್ತ ಕೊಳಚೆ ನೀರು, ಗಲೀಜು ಇರುವುದರಿಂದ ಮಕ್ಕಳಿಗೆ ತರಬೇತಿ ನಡೆಸಲು ಆಗುತ್ತಿಲ್ಲ. ಕೊಳಚೆ ನೀರಿನ ಗಬ್ಬು ವಾಸನೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಇದರಿಂದ ಮಕ್ಕಳು ಡೆಂಗಿ ಜ್ವರ, ಕೆಮ್ಮು ನೆಗಡಿ ಇತರ ರೋಗಗಳಿಗೆ ತುತ್ತಾಗುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮುದಾಯ ಭವನದಲ್ಲಿ ಸ್ಥಳೀಯ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಉಚಿತ ತರಬೇತಿ(ಟ್ಯೂಷನ್) ಕೇಂದ್ರವನ್ನು ಆರಂಭಿಸಿದ್ದೇವೆ.
ಹಾಗೂ ಪ್ರತಿ ಶನಿವಾರ ಮತ್ತು ಭಾನುವಾರ ವಲಸೆ ಮಹಿಳಾ ಕಾರ್ಮಿಕರ ಒಕ್ಕೂಟ ಮತ್ತು ಸ್ಥಳೀಯ ಸ್ವ ಸಹಾಯ ಸಂಘಗಳ ಸಭೆ ನಡೆಸಲಾಗುತ್ತದೆ. ಸಮುದಾಯ ಭವನದ ಮುಂಭಾಗದಲ್ಲಿ ಕಸದ ತಿಪ್ಪೆಗಳಿವೆ. ಅದರ ಸುತ್ತಮುತ್ತ ತುಂಬಾ ಕೊಳಚೆ ವಾಸನೆ ಬರುತ್ತಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದಕ್ಕೆ ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಾಲೇಜಿಗೆ ಹೋಗೆಂದಿದ್ದಕ್ಕೆ ಬಾವಿಗೆ ಹಾರಿದ ಯುವತಿ; ಅಣ್ಣನೂ ಸಾವು

“ಮನವಿಗೆ ಸರಿಯಾಗಿ ಸ್ಪಂದಿಸದಿದ್ದರೆ ಮುಂದಿನ ಹಂತದಲ್ಲಿ ಹೋರಾಟ ಮಾಡಲು ಸಿದ್ದರಾಗುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ರಾಜಶ್ರೀ ಮಕನಾಪುರ್, ಜ್ಯೋತಿ ಹೊಸಮನಿ, ಸುಜಾತ ಚಲವಾದಿ, ಸುನಿಲ್ ಹೊಸಮನಿ, ಬಸವರಾಜ್ ಕಾಂಬ್ಳೆ, ಲಕ್ಷ್ಮಿ ಕಟ್ಟಿಮನಿ, ಪಾರ್ವತಿ ಹರಿಜನ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...