ವಿಜಯಪುರ | ವಿವಿಧ ಉದ್ದೇಶಗಳಿಗೆ ಜಾಗ ಗುರುತಿಸಿಕೊಡಲು ಮುಸ್ಲಿಂ ಸಮುದಾಯ ಒತ್ತಾಯ

Date:

ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗ ಗುರುತಿಸಿ ಕೊಡುವಂತೆ ಟಿಪ್ಪು ಕ್ರಾಂತಿ ಸೇನೆ ಹಾಗೂ ಡೋಣೂರ ಗ್ರಾಮದ ಅಂಜುಮನ್ ಕಮೀಟಿ ಒತ್ತಾಯಿಸಿದೆ. ಬಸವನಬಾಗೇವಾಡಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಟಿಪ್ಪು ಕ್ರಾಂತಿ ಸೇನೆಯ ಮುಖಂಡ ಖಾಜಂಬರ ನದಾಫ, “ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಸಮುದಾಯದ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗೆ ಗುರುತಿಸಿ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ಗ್ರಾಮದ ಆಶ್ರಯ ಕಾಲನಿಯಲ್ಲಿ ಬೇರೆ ಬೇರೆ ಸಮುದಾಯದವರು ಸ್ವತ: ತಾವೇ ಜಾಗಗಳನ್ನು ಗುರುತಿಸಿಕೊಂಡು ಕಬ್ಜಾ ಮಾಡಿಕೊಂಡಿದ್ದಾರೆ. ಹಾಗಾಗಿ, ನಮ್ಮ ಸಮುದಾಯ ಸ್ವತ: ಜಾಗೆ ಗುರುತಿಸಲು ಹೋದಲ್ಲಿ ಸಮಸ್ಯೆಯಾಗುವ ಸಂಭವವಿದೆ. ತಾಲೂಕು ದಂಡಾಧಿಕಾರಿಗಳು ಮುಸ್ಲಿಂ ಸಮಾಜಕ್ಕೆ ಜಾಗ ಗುರುತಿಸಿ ಕೊಡುವ ಮೂಲಕ ಸಮಾಜಕ್ಕೆ ಅನಕೂಲ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅಮಿನಸಾಬ ಹುಡೆದಗಡ್ಡಿ, ನಾಸೀರ್ ತಾಂಬೋಳಿ, ಅಬಿದ ತಾಂಬೋಳಿ, ಬಂದೇನವಜ್ ಸುತಾರ, ಮಹೇಬೂಬ ಸುತಾರ, ರಹೇಮಾನ ಮುಲ್ಲಾ, ಹಾಶಿಂಸಾಬ ಸುತಾರ, ಸುಲೇಮಾನ್ ಗೌಂಡಿ, ಅಬ್ಬುಸಾಬ ಮುಲ್ಲಾ, ಇಸ್ಮಾಯಿಲ್ ಮುಲ್ಲಾ ಹಾಗೂ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...