ವಿಜಯಪುರ | ಪಠ್ಯಕ್ರಮ, ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆ ತರುವುದು ಇಂದಿನ ಅಗತ್ಯ: ಪ್ರೊ. ಜಿ. ಬಿ ಸೋನಾರ್

Date:

ವೃತ್ತಿಪರ, ತಾಂತ್ರಿಕ ಹಾಗೂ ಉದಯೋನ್ಮುಖ ತಂತ್ರಜ್ಞಾನ ಶಿಕ್ಷಣದಲ್ಲಿ ಮಹಿಳೆಯರ ಪ್ರವೇಶವನ್ನು ವಿಸ್ತರಿಸುವುದು, ಪಠ್ಯಕ್ರಮ ಮತ್ತು ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆಗಳನ್ನು ತರಿಸುವುದು ಹಾಗೂ ಸ್ಕಿಲ್ ಕೋರ್ಸುಗಳಲ್ಲಿ ವಿದ್ಯಾರ್ಥಿನಿಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಇಂದಿನ ಅಗತ್ಯವೆಂದು ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ. ಬಿ ಸೋನಾರ್ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ಲೇಸ್‌ಮೆಂಟ್ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಹಾಗು ಸಮಾಜ ಶಾಸ್ತ್ರ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಪ್ರಧಾನಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ ಪಿಎಂ ಉಷಾ ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಪರಿಷತ್ತಿನ ಅನುದಾನದೊಂದಿಗೆ ಹಮ್ಮಿಕೊಂಡಿದ್ದ ಮಹಿಳೆಯರಿಗೆ ವೃತ್ತಿಪರ, ತಾಂತ್ರಿಕ ಮತ್ತು ಉದಯೋನ್ಮುಖ ತಂತ್ರಜ್ಞಾನ ಶಿಕ್ಷಣದಲ್ಲಿ ಪ್ರವೇಶವನ್ನು ಸುಲಭಗೊಳಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಜಯಪುರದ ಎಸ್.ಬಿ. ಆರ್ಟ್ಸ್ ಮತ್ತು ಕೆ.ಸಿ.ಪಿ. ಸೈನ್ಸ್ಕಾಲೇಜಿನ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀಧರ್ ಜೋಶಿ ಮಾತನಾಡಿ, ಇಂದಿನ ಜಗತ್ತು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದೆ. ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್, ಸೈಬರ್ ಸುರಕ್ಷತೆ, ಕ್ಲೌಡ್ ಕಂಪ್ಯೂಟಿಂಗ್, ಇಂಟರ್ನೆಟ್ ಆಫ್ ಥಿಂಗ್ಸ್ ಮುಂತಾದ ಉದಯೋನ್ಮುಖ ತಂತ್ರಜ್ಞಾನಗಳು ನಮ್ಮ ಜೀವನಶೈಲಿ ಹಾಗೂ ಉದ್ಯೋಗಕ್ಷೇತ್ರವನ್ನು ವೇಗವಾಗಿ ಬದಲಾಯಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಾಂತ್ರಿಕ ಮೂಲಾಧಾರಗಳನ್ನು ಗಟ್ಟಿಗೊಳಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಕಾರ್ಯಕ್ರಮದ ಸಂಯೋಜಕ ಡಾ. ಸಿ. ಎಂ. ಮಠಪತಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ತ ಪ್ರೊ. ಎಂ. ಪಿ. ಬಳಿಗಾರ್, ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಉಪಸ್ಥಿತರಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...