ವಿಜಯಪುರ | ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂರಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ!

Date:

ಡೀಸೆಲ್ ಹಾಕಿಸಿದ್ದ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್​ನಲ್ಲಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಕೂರಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

“ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಮೌನೇಶ್ ಪತ್ತಾರ್ ಎಂಬಾತ ಅಂದಾಜು 10 ರಿಂದ 15 ಲಕ್ಷ ರೂ.ನಷ್ಟು ಬಾಕಿ ಹಣ ನೀಡಬೇಕಿತ್ತು. ಆ ಹಣವನ್ನು ಪಾವತಿಸುವಂತೆ ಒತ್ತಾಯಿಸಿದ ಆತನನ್ನು ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕಳೆದ 12 ದಿನಗಳಿಂದ ಅರೆಬೆತ್ತಲೆಯಾಗಿ ಕೂಡಿಹಾಕಿದ್ದಾರೆ” ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ತಮಿಳುನಾಡು ಮೂಲದ ಶಿವಶಕ್ತಿ ಬೋರ್‌ವೆಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ್, ವಾಹನಗಳಿಗೆ ಬೋಸಲೆ ಅವರ ಬಂಕ್‌ನಲ್ಲಿ ಡೀಸೆಲ್ ಹಾಕಿಸುತ್ತಿದ್ದರು. ಆದರೆ, ಶಿವಶಕ್ತಿ ಬೋರ್‌ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣ ಪಾವತಿಸುವಂತೆ ಮೌನೇಶ್‌ನನ್ನು ಪೆಟ್ರೋಲ್ ಬಂಕ್ ಮಾಲೀಕ ಹಿಡಿದುಕೊಂಡಿದ್ದು, ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ್ ಬಿಡುಗಡೆಗಾಗಿ ಆಗ್ರಹಿಸಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್‌ನಲ್ಲೇ ಕುಳಿತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪ್ರವಾಹ ಸಂತ್ರಸ್ತೆ

ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರ್‌ನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೆ ಬಂಕ್ ಮಾಲೀಕರು ಮೌನೇಶ್ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...