ವಿಜಯಪುರ | ಪಂಪನಿಂದ ಮುಷ್ತಾಕ್‌ವರೆಗೆ ಕನ್ನಡದ ಶ್ರೀಮಂತಿಕೆ ಹಬ್ಬಿದೆ: ಶಂಕರಗೌಡ ಸೋಮನಾಳ

Date:

ಕನ್ನಡ ಭಾಷೆಗೆ 2,000 ವರ್ಷಗಳ ದೀರ್ಘ ಮತ್ತು ಶ್ರೀಮಂತ ಇತಿಹಾಸವಿದೆ. ಪಂಪನಿಂದ ಬಾನು ಮುಷ್ತಾಕ್‌ವರೆಗೆ ಅನೇಕ ಸಾಹಿತಿಗಳು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೌಲ್ಯಮಾಪನ ಕುಲಸಚಿವ ಪ್ರೊ. ಬಸವರಾಜ ಎಲ್ ಲಕ್ಕಣ್ಣವರ ಮಾತನಾಡಿ, “ಕರ್ನಾಟಕದ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದಲ್ಲಿ ಮಾತನಾಡುವುದು, ಕನ್ನಡದಲ್ಲಿ ಬರೆಯುವುದು ಮತ್ತು ಕನ್ನಡ ಗ್ರಂಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಾಗ ಮಾತ್ರ ನಾಡು–ನುಡಿ–ಭಾಷೆ ನಿಜವಾಗಿಯೂ ಬೆಳೆಯಲು ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ನಾರಾಯಣ ಬಿ ಪವಾರ ಮಾತನಾಡಿ, ಹಳೆಗನ್ನಡದ ಹಲವು ಪದ್ಯಗಳನ್ನು ಉದಾಹರಣೆಯಾಗಿ ವಾಚಿಸಿ, ವಿವಿಧ ಕಾಲಘಟ್ಟಗಳ ಕವಿಗಳು ಮತ್ತು ಕೃತಿಗಳನ್ನು ಪರಿಚಯಿಸುವ ಮೂಲಕ ಸಂಪೂರ್ಣ ಕನ್ನಡ ಸಾಹಿತ್ಯದ ಅವಲೋಕನದ ಬಗ್ಗೆ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕ್ಪಾಲ ಹೂವಣ್ಣ ಮಾತನಾಡಿ “ಕನ್ನಡವನ್ನು ಕೇವಲ ವಿಷಯವಷ್ಟೆ ಎಂದುಕೊಳ್ಳದೆ ಉಸಿರಿನಂತೆ ಬದುಕಿನಲ್ಲಿ ಬಳಸಿದಾಗ ಮಾತ್ರ ನಮ್ಮ ಕನ್ನಡ ಭಾಷೆ ಉಳಿದು ಬೆಳೆಯುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ರಾಜ್ಯೋತ್ಸವದ ಅಂಗವಾಗಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಜೊತೆಗೆ, 19ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯರನ್ನು ವೇದಿಕೆಯ ಮೇಲೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ವಿಭಾಗದ ಉಪನ್ಯಾಸಕ ಡಾ. ಚಲುವರಾಜು, ಡಾ.ವಿದ್ಯಾ ಪಾಟನಕರ, ಡಾ.ರೂಪಾ ಇಂಗಳೆ, ವಿದ್ಯಾರ್ಥಿನಿಯರು ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...