ವಿಜಯಪುರ | ಜೀವಿಗಳ ಪೋಷಣೆಯಲ್ಲಿ ಪರಿಸರ ಪಾತ್ರ ಪ್ರಮುಖವಾದದ್ದು: ಅರಣ್ಯಾಧಿಕಾರಿ ಪ್ರಿಯಾಂಕ

Date:

ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಪರಿಸರದ ಸಮೃದ್ಧಿಯೇ ಕಾರಣವಾಗಿದೆ ಎಂದು ಸಿಂದಗಿ ವಲಯ ಉಪ ಅರಣ್ಯಾಧಿಕಾರಿ ಪ್ರಿಯಾಂಕ ನಗರ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಂಗಮ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಗಮ ಸಂಸ್ಥೆಯ ನಿರ್ದೇಶಕ ಫಾ. ಸಂತೋಷ ಮಾತನಾಡಿ, “ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧೈಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವ ಮೂಲಕ ಪರಿಸರ ಹಾಳು ಮಾಡುವುದನ್ನು ತಡೆಯುವುದಾಗಿದೆ. ವಿಶ್ವಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಗಮ ಸಂಸ್ಥೆಯ ಸಹಾ ನಿರ್ದೇಶಕಿ ಸಿಸ್ಟರ್ ಸಿಂತಿಯ ಮಾತನಾಡಿ, “ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಸರ ಸಂರಕ್ಷಣೆಯತ್ತ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಇತ್ತೀಚಿನ ದಿನಗಳಲ್ಲಿ ವಿಶ್ವದೆಲ್ಲೆಡೆ ಆಧುನೀಕರಣ, ಕೈಗಾರೀಕರಣದಿಂದಾಗಿ ಹೆಚ್ಚಿನ ಪರಿಸರ ನಾಶ ಸಂಭವಿಸುತ್ತಿದೆ. ಇದರಿಂದಾಗಿ ಮಳೆ, ಬೆಳೆ ಕಡಿಮೆಯಾಗುತ್ತಿದೆ. ವಾತಾವರಣದಲ್ಲಿ ಬದಲಾವಣೆ ಕಾಣಬಹುದಾಗಿದೆ. ಆದ್ದರಿಂದ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಮರ ಗಿಡಗಳನ್ನು ಬೆಳೆಸುವತ್ತ ಹೆಚ್ಚಿನ ಗಮನಹರಿಸಬೇಕಿದೆ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡುವಲ್ಲಿ ಕೈಜೋಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಸ್ಪರ್ಧಾತ್ಮಕ ಪರೀಕ್ಷೆಗಳ ಓದು ನಿರಂತರವಾಗಿರಲಿ: ಡಾ ಪರಮಶಿವಮೂರ್ತಿ

“ಮುಂದಿನ ದಿನಗಳಲ್ಲಿ ಅತಿಹೆಚ್ಚು ಗಿಡಗಳನ್ನು ನೆಡುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು. ಜತೆಗೆ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವಂತಾಗಬೇಕು” ಎಂದು ತಿಳಿಸಿದರು.

“ಅರಣ್ಯ ಅಗ್ನಿ ಪಾಲಕರಾದ ಶಿವಾನಂದ ಹಾಗೂ ಅನಿಲ, ವಿವಿಧ ಹಳ್ಳಿಗಳಿಂದ ಸ್ವ-ಸಹಾಯ ಸದಸ್ಯರು, ಸಂಗಮ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಒಂದೊಂದು ಸಸಿ ಕೊಡಲಾಯಿತು. ತೇಜಸ್ವಿನಿ ಹಳ್ಳದಕೇರಿ ಸ್ವಾಗತಿಸಿದರು. ಬಸವರಾಜ ಬಿಸನಾಳ ನಿರೂಪಿಸಿದರು. ಉಮೇಶ ದೊಡ್ಡಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...