ವಿಜಯಪುರ | ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಮುಂದುವರೆದ ಹೋರಾಟ; ಸ್ಥಳಕ್ಕೆ ಸಂಸದ ರಮೇಶ್‌ ಜಿಗಜಿಣಗಿ ಭೇಟಿ

Date:

ವಿಜಯಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ, ಖಾಸಗಿ ಸಹಭಾಗಿತ್ವವನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

“ಜಿಲ್ಲೆಯ ಜನತೆ ಎಲ್ಲಾ ಒಂದಾಗಿ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಯನ್ನು ವಿರೋಧಿಸಿ ಹೋರಾಟ ಕೈಗೊಂಡಿದ್ದೀರಿ. ಅದು ಬೇಡವೆಂಬುದು ಎಲ್ಲರ ಮನಸ್ಸಿನಲ್ಲಿದೆ ಎಂದರು. ಅಲ್ಲದೇ ಈ ಕುರಿತು ನಾನು ಈಗಾಗಲೇ ಪ್ರಧಾನ ಮಂತ್ರಿಗಳ ಗಮನಕ್ಕೆ ತರುವ ಕೆಲಸ ಮಾಡಿದ್ದು. ಹಾಗೆಯೇ ಕೇಂದ್ರ ಆರೊಗ್ಯ ಸಚಿವರಿಗೂ ಯಾವುದೇ ಕಾರಣಕ್ಕೂ ಕಾರಣಕ್ಕೂ ನಮ್ಮ ಜನತೆ ಪಿಪಿಪಿ ಯನ್ನು ಒಪ್ಪುವದಿಲ್ಲ ಯಾವ ಕಾರಣಕ್ಕೂ ವಿಜಯಪುರ ದಲ್ಲಿ ಪಿಪಿಪಿ ಯೋಜನೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಬಾರದು ಎಂದು ಮನವಿ ಮಾಡಲಾಗಿದೆ” ಎಂದರು.

“ಸರಕಾರಿ ವೈದ್ಯಕೀಯ ಕಾಲೇಜು ಬಡವರಿಗೆ ಸಾಮಾನ್ಯ ಜನರಿಗೆ ಎಲ್ಲರಿಗೂ ಇದು ಉಪಯೋಗವಾಗುವಂತಹದ್ದಾಗಿದೆ. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಪಕ್ಷದ ನಾಯಕದೊಂದಿಗೆ ಚರ್ಚಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಅಲ್ಲದೆ ಜಿಲ್ಲೆಗೆ ಏಮ್ಸ್ ತರುವುದೇ ನನ್ನ ಉದ್ದೇಶವಾಗಿದೆ. ಅದಕ್ಕೆ ಸದಾ ಸಿದ್ಧನಿದ್ದೇನೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ವಿದಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಚಂದ್ರಶೇಖರ ಕವಟಗಿ, ಗುರಲಿಂಗಪ್ಪ ಅಂಗಡಿ, ಸುರೇಶ ಬಿರಾದಾರ, ಉಮೇಶ ಕಾರಜೋಳ, ಭೋಗೇಶ ಸೋಲಾಪುರ, ಉಮೇಶ ಕೋಳೂಕರ, ನವಸ್ಫೂರ್ತಿ ಸಂಘದ ಅಧ್ಯಕ್ಷ ಶಬ್ಬಿರ ಕಾಗಜಕೋಟ, ಮಲ್ಲಿಕಾರ್ಜುನ ಮಲ್ಲಿಕಾರ್ಜುನ ಹಿರೇಮಠ, ಕಾಶಿಬಾಯಿ ಜನಗೊಂಡ, ಪ್ರವೀಣ ಚಿಕ್ಕಲಕಿ, ಗಿರೀಶ ಕಲಘಟಗಿ, ಲಕ್ಷಣ ಕಂಬಾಗಿ, ಉಮೇಶ ವಾಲಿಕಾರ, ಲಂಕೇಶ ತಳವಾರ ಮುಂತಾದವರು ಮಾತನಾಡಿದರು.

ಇದನ್ನೂ ಓದಿ: ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ಪ್ರತಿಭಟನಾ ಧರಣಿಯಲ್ಲಿ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಫಯಾಜ್ ಕಲಾದಗಿ, ಶ್ರೀನಾಥ ಪೂಜಾರಿ, ಸಿದ್ದರಾಮ ಹಳ್ಳೂರ ಪ್ರಭುಗೌಡ ಪಾಟೀಲ, ಮಲ್ಲಿಕಾರ್ಜುನ ಕೆಂಗಿನಾಳ, ಮಲ್ಲಿಕಾರ್ಜುನ ಬಟಗಿ, ದಸ್ತಗೀರ್ ಉಕ್ಕಲಿ, ಸಿದ್ದನಗೌಡ ಪಾಟೀಲ, ಶಿವಬಾಳನ್ನ ಕೊಂಡ ಗೂಳಿ, ಮಹಾದೇವಿ ಧರ್ಮಶೆಟ್ಟಿ, ಶರಣಬಸಪ್ಪ ಗಂಗಶೆಟ್ಟಿ, ನವಸ್ಫೂರ್ತಿ ಸಂಘದ ಪದಾಧಿಕಾರಿಗಳಾದ ಗುಲಾಬ್, ರೇಣುಕಾ ಶಾಂತಗೌಡ ಯಮನವ್ವ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...