ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸದಿದ್ದರೆ ಹೋರಾಟ ತೀವ್ರವಾಗುತ್ತದೆ: ಚಿಂತಕ ಸಿದ್ದನಗೌಡ ಪಾಟೀಲ

Date:

‘ವಿಜಯಪುರದಲ್ಲಿ ಉದ್ದೇಶಿತ ಪಿಪಿಪಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಸ್ಪಂದಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಪ್ರಗತಿಪರ ಚಿಂತಕ ಸಿದ್ದನಗೌಡ ಪಾಟೀಲ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ವಿಜಯಪುರದಲ್ಲಿ 40 ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸದೇ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಕಾರಣ ಹೋರಾಟವನ್ನು ಶೀಘ್ರದಲ್ಲೇ ಬೆಂಗಳೂರಿಗೆ ವಿಸ್ತರಿಸಲಾಗುವುದು” ಎಂದು ತಿಳಿಸಿದರು.

“ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಆದರೆ, ವಿಜಯಪುರಕ್ಕೆ ಪಿಪಿಪಿ ಮಾದರಿ ಏಕೆ? ಮುಖ್ಯಮಂತ್ರಿಗಳು, ಸಚಿವರು ಜಿಲ್ಲೆಯ ಶಾಸಕರೊಬ್ಬರಿಗೆ ರಾಜಕೀಯ ಲಾಭಕ್ಕಾಗಿ ಮಾತು ಕೊಟ್ಟಿದ್ದಾರೆಂಬ ಆರೋಪ ಕೇಳಿಬರುತ್ತಿದೆ” ಎಂದು ಶಂಕೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಜಯಪುರದಲ್ಲಿ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆ ಹಿಂದೆ ಭೂ ಮಾಫಿಯಾ, ವೈದ್ಯಕೀಯ ಮಾಫಿಯಾ ಮಾಡುತ್ತಿವೆ” ಎಂದು ಆರೋಪಿಸಿದರು.

“ವಿಜಯಪುರ ಜಿಲ್ಲೆಯಲ್ಲಿ ನವಜಾತ ಶಿಶು, ತಾಯಿ ಮರಣ, ಅಪೌಷ್ಟಿಕತೆ, ಬಡತನ ಹೆಚ್ಚಿದೆ. ಶೈಕ್ಷಣಿಕವಾಗಿ ಜಿಲ್ಲೆಯು ಹಿಂದುಳಿದಿದೆ. ಕಾರಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದರೆ ಈ ಭಾಗದ ಜನತೆಗೆ ಅನುಕೂಲವಾಗಲಿದೆ” ಎಂದು ಹೇಳಿದರು.

“ಖಾಸಗಿ ಕಂಪನಿಗಳು ಎಂದಿಗೂ ಜನರಿಗೆ ಸಹಾಯ, ಸೇವೆ ಮಾಡುವುದಿಲ್ಲ. ಲಾಭಕ್ಕಾಗಿ ಬಂಡವಾಳ ಹೂಡಿಕೆ ಮಾಡುತ್ತವೆ. ಆರೋಗ್ಯ ಉದ್ಯಮವಾಗಬಾರದು, ಸೇವೆಯಾಗಿಯೇ ಇರಬೇಕು. ವೈದ್ಯಕೀಯ ಶಿಕ್ಷಣ ಇಂದು ದೊಡ್ಡ ಮಾಫಿಯಾ ಆಗಿದೆ. ವೈದ್ಯಕೀಯ ಶಿಕ್ಷಣ ಬಡವರಿಗೆ ನಿಲುಕದ ಸ್ಥಿತಿಯಲ್ಲಿದೆ. ಖಾಸಗಿ ಕಾಲೇಜುಗಳು ದುಬಾರಿ ಹಣಕ್ಕೆ ಸೀಟು ಮಾರಾಟ ಮಾಡುತ್ತಿವೆ. ಆರೋಗ್ಯ ಎಂಬುದು ಖರೀದಿ ಮತ್ತು ಮಾರಾಟದ ಸರಕಾಗಬಾರದು” ಎಂದರು.

ಬಸವ ಚಿಂತಕ ಜಿ ಬಿ ಪಾಟೀಲ ಮಾತನಾಡಿ, “ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಲು ಹೆಚ್ಚು ಅನುದಾನದ ಅಗತ್ಯವಿಲ್ಲ. ಕೇವಲ ಕಾಲೇಜು ಕೊಠಡಿಗಳನ್ನು ನಿರ್ಮಿಸಿ, ಅಧ್ಯಾಪಕರನ್ನು ನೇಮಿಸಿದರೆ ಸಾಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನವೆಂಬರ್ 08ಕ್ಕೆ ಕನಕದಾಸರ ಜಯಂತಿ: ತಯಾರಿಗೆ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಗದುಗಿನ ಲಡಾಯಿ ಪ್ರಕಾಶನದ ಸಂಚಾಲಕ ಬಸವರಾಜ ಸೂಳಿಬಾವಿ ಮಾತನಾಡಿ, “ಜನಸಾಮಾನ್ಯರ ಹಿತ ಕಾಯುವ ಬದಲು ಖಾಸಗಿಯವರ ಹಿತ ಕಾಪಾಡಲು ಸಚಿವರು, ಶಾಸಕರು ನಿಂತಿರುವುದು ಸರಿಯಲ್ಲ. ಸಚಿವರು, ಶಾಸಕರು ಜಿಲ್ಲೆಯ ಜನತೆಯ ವಿರೋಧಿಗಳಾಗಬಾರದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಜಿಲ್ಲೆಯ ರಾಜಕಾರಣಿಗಳು ಒಟ್ಟಾಗಿ ಧ್ವನಿ ಎತ್ತಬೇಕಿದೆ” ಎಂದರು.

ಪ್ರಮುಖರಾದ ಡಾ. ಅರವಿಂದ ಮಾಲಗತ್ತಿ, ವಿದ್ಯಾವತಿ ಅಂಕಲಗಿ, ಭರತ್ ಎಚ್ ಟಿ, ಚನ್ನು ಕಟ್ಟಿಮನಿ, ಫಾದರ್ ಕೆವಿನ್, ಶ್ರೀನಾಥ ಪೂಜಾರಿ, ಅನಿಲ ಹೊಸಮನಿ, ಸುರೇಶ ಜಿ ಬಿ, ಲಕ್ಷ್ಮಣ ಹಂದ್ರಾಳ, ಜಗದೇವ ಸೂರ್ಯವಂಶಿ, ಸಿದ್ರಾಮ ಹಳ್ಳೂರ, ಸೋಮು ರಣದೇವಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...