ವಿಜಯಪುರ | ಕಾರ್ಮಿಕ ಸಂಹಿತೆ, ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ: ಸುನಂದಾ ಎಚ್ ಎಸ್

Date:

ದೇಶದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳು ಹಾಗೂ ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ ಎಂದು ಜೆಸಿಟಿಯು ರಾಜ್ಯ ಮುಖಂಡೆ ಸುನಂದಾ ಎಚ್ ಎಸ್ ಹೇಳಿದರು.

ವಿಜಯಪುರ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಭವನದಲ್ಲಿ ಜಂಟಿ ಕಾರ್ಮಿಕ ಸಂಘಟನೆಗಳ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮಾವೇಶ ಉದ್ವಾಟಿಸಿ ಮಾತನಾಡಿದರು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಎನ್ ಎಸ್ ವೀರೇಶ್ ಮಾತನಾಡಿ, “ಕಾರ್ಮಿಕರ ಪರವಾಗಿದ್ದ 44 ಕಾರ್ಮಿಕ ಕಾಯ್ದೆಗಳನ್ನು ಕೇವಲ ನಾಲ್ಕು ಸಂಹಿತೆಗಳಾಗಿ ಮಾಡಲಾಗಿದೆ. ಇವುಗಳ ಜಾರಿಯಾದರೆ ಕಾರ್ಮಿಕರ ಹಕ್ಕುಗಳನ್ನು ಮೊಟಕು ಮಾಡಿದಂತಾಗುತ್ತದೆ. ಬಹಳ ದೊಡ್ಡ ಸಂಖ್ಯೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರು, ಸ್ಕೀಮ್ ಕಾರ್ಯಕರ್ತರಿಗೆ ಕಾರ್ಮಿಕ ಸ್ಥಾನಮಾನ ಕೊಡುತ್ತಿಲ್ಲ. ಬಿಡಿಗಾಸಿಗೆ ದುಡಿಸಿಕೊಳ್ಳುತ್ತಿರುವುದರ ವಿರುದ್ಧ ರಾಷ್ಟ್ರಮಟ್ಟದಲ್ಲಿ ಮೇ 20ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಾರ್ಮಿಕ ಸಂಹಿತೆ ವಿರುದ್ಧ ಹೋರಾಟ

ಸಿಐಟಿಯು ಜಿಲ್ಲಾಧ್ಯಕ್ಷ ಅಣ್ಣಾರಾಯ ಇಳಗೇರಿ ಮಾತನಾಡಿ, “ದೇಶದ ಸಂಪತ್ತು ಕೇವಲ ಶೇ.1ರಷ್ಟು ಶ್ರೀಮಂತ ಜನರ ಕೈಯಲ್ಲಿದೆ. ಶೇ.1ರಷ್ಟು ಜನರು ಒಡೆಯರಾಗಿದ್ದಾರೆ. ಇಡೀ ದೇಶದ ಕಾರ್ಮಿಕ ವರ್ಗ ದುಡಿದು ಸಂಪತ್ತಿಗೆ ಮಾಲೀಕರಾಗದೆ ಗುಲಾಮರಾಗಿ ದುಡಿಯುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ; ರಕ್ಷಿತಾ ಪಂಡಿತ ಕೊಡಹೊನ್ನಗೆ ಸನ್ಮಾನ

ಕಾರ್ಯಕ್ರಮದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್ ಟಿ, ಗ್ರಾಮೀಣ ಅಂಚೆ ನೌಕರರ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಎಐಯುಟಿಯುಸಿ ಜಿಲ್ಲಾ ಜಂಟಿ ಕಾರ್ಯದರ್ಶಿ ಮಹದೇವಿ ಧರ್ಮಶೆಟ್ಟಿ, ಸಿಐಟಿಯುನ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಹಂದ್ರಳ, ಕಿರಣ ಕೊಂಡಗೋಳಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...