ವಿಜಯಪುರ | ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ: ಸಿ ಎಸ್ ನಾಡಗೌಡ

Date:

ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಈ ಹಿಂದೆ ಅನೇಕ ಬಾರಿ ನನ್ನ ಹೆಸರು ಸಚಿವರ ಪಟ್ಟಿಯಲ್ಲಿತ್ತು. ನವದೆಹಲಿ ಮಟ್ಟದಲ್ಲೂ ಕ್ಲಿಯರ್ ಆಗಿತ್ತು. ಆದರೆ, ಆ ನಂತರ ಕೈ ತಪ್ಪಿತು. ಅದಕ್ಕೆ ಅಸಮಾಧಾನ ಹೊರಹಾಕಲು ಆಗುತ್ತದೆಯೇ’ ಎಂದು ಕರ್ನಾಟಕ ಸಾಬೂನು-ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಹೇಳಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸಚಿವ ಸ್ಥಾನ ಅಪೇಕ್ಷೆ ಪಡುವುದರಲ್ಲಿ ನೈತಿಕ ಹಕ್ಕಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಯಶವಂತರಾಯ ಗೌಡ ನನ್ನ ತಮ್ಮ, ಅವರಿಗೆ ಸಚಿವ ಸ್ಥಾನ ಸಿಕ್ಕರೂ ಸಂತೋಷಪಡುವೆ” ಎಂದರು.

“ನಾನು ನಿಷ್ಠಾವಂತ ಕಾಂಗ್ರೆಸ್ಸಿಗ, 1981ರಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ ರಾಜಕೀಯ ಜೀವನದಲ್ಲಿರುವ ವ್ಯಕ್ತಿ. ಹೀಗಾಗಿ ನಾನು ಸಚಿವ ಸ್ಥಾನದ ಆಕಾಂಕ್ಷಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಬಂದರೆ ಬೇಡವೆನ್ನುವುದೇಕೆ? ನಾವೆಲ್ಲ ಒಟ್ಟಾಗಿ ಕಾಂಗ್ರೆಸ್ ಹೈಕಮಾಂಡ್ ಬಳಿ ಹೋಗೋಣ, ನಮ್ಮಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರೂ ಸಂತೋಷವೆಂದು ಹೇಳಿ ಬರೋಣ” ಎಂದು ಹೇಳಿದರು.

“ಲಿಂಗಾಯತ ಕೋಟಾ ಆಧರಿಸಿಯೇ ನಂತರ ಕೈ ತಪ್ಪಿತು. ಅದಕ್ಕೆ ಅಸಮಾಧಾನ ಹೊರಹಾಕಲು ಆಗುತ್ತದೆಯೇ? ಲಿಂಗಾಯತ ಕೋಟಾ ಆಧರಿಸಿಯೇ ಅನೇಕರು ಮಂತ್ರಿಯಾಗಿದ್ದಾರೆ. ನಾನು ಮಂತ್ರಿಯಾಗಬೇಕು ಎಂಬುದು ಅಪೇಕ್ಷೆ. ಆದರೆ ಬೇರೆಯವರಿಗೆ ಸಚಿವ ಸ್ಥಾನ ಕೊಡಬೇಡಿ ಎನ್ನುವ ಜಾಯಮಾನ ನನ್ನದಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸದಿದ್ದರೆ ಹೋರಾಟ ತೀವ್ರವಾಗುತ್ತದೆ: ಚಿಂತಕ ಸಿದ್ದನಗೌಡ ಪಾಟೀಲ

30 ಸ್ಥಳ ಪರಿಶೀಲನೆ: “ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದನಾ ಘಟಕ ಸ್ಥಾಪನೆಗೆ ಇಟ್ಟಂಗಿಹಾಳದಲ್ಲಿ ಉದ್ದೇಶಿತ ಎಕರೆ ಜಮೀನಿನಲ್ಲಿ ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಬೇರೆ ಜಮೀನನ್ನು ಪರಿಶೀಲನೆ ಮಾಡಲಾಗಿದೆ. ಆದರೆ, ಅಲ್ಲಿ ನೆಡುತೋಪು ನಿರ್ಮಾಣ ಕಷ್ಟಸಾಧ್ಯ, ಉತ್ಪಾದನಾ ಘಟಕ ಮಾತ್ರ ನಿರ್ಮಾಣ ಸಾಧ್ಯ, ಈ ಎರಡು ವಿಷಯಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...