ವಿಜಯಪುರ | ಲೋಕಸಭಾ ಚುನಾವಣೆ – ಭಾವನೆ ಕೆರಳಿಸುವ v/s ಬದುಕು ರೂಪಿಸುವ ಸಂಘರ್ಷ: ಸಚಿವ ಎಚ್.ಕೆ ಪಾಟೀಲ್‌

Date:

ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ ಹೇಳಿದರು.

ಬಬಲೇಶ್ವರ ತಾಲೂಕಿನ ಗಲಗಲಿ ಬಳಿಯ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮೋದಿಯವರು ಹೇಳಿದಂತೆ ಯಾವುದೂ ಈಡೇರಿಸಲಿಲ್ಲ. ಆದರೆ, ನಾವು ನುಡಿದಂತೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಶೇ.90ರಷ್ಟು ಭಾಗದ ಹೆಣ್ಣುಮಕ್ಕಳಿಗೆ ಹಣ ನೇರವಾಗಿ ತಲುಪಿದೆ. ಮಧ್ಯವರ್ತಿಗಳಿಲ್ಲ, ಶೋಷಣೆ ಇಲ್ಲದೆ ಯೋಜನೆ ಮುಟ್ಟಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ವಚನ ಭ್ರಷ್ಟತೆ ಮೆರೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಕ್ಕೆ ಪರಿಹಾರ ನೀಡಲು, ಜಿಎಸ್‌ಟಿ ಪಾಲು ನೀಡುವಲ್ಲಿ ತಾರತಮ್ಯವನ್ನು ಮಾಡಲಾಗಿದೆ. ಶ್ರೀಮಂತರ ಸಾಲ ಮನ್ನಾ ಮಾಡುತ್ತಾರೆ. ನಾವು ಬಡವರ ಪರ ದುಡ್ಡು ಹಾಕಿದರೆ ದಿವಾಳಿಯಾಗುತ್ತದೆ ಎನ್ನುತ್ತಾರೆ. ಆದರೆ, ಅಚ್ಚುಕಟ್ಟಾಗಿ ಯೋಜನೆ ತಲುಪಿಸಿದ್ದು ನಮ್ಮ ಸಾಧನೆ ಎಂದು ಹೇಳಿದರು.

ರೈತರಿಗೆ ವಿಮೆ ಕೊಡುವುದರಲ್ಲೂ ಹಗರಣ ಮಾಡಲಾಗಿದೆ. ಎಕರೆಗೆ ಎಪ್ಪತ್ತು ರೂ. ಪರಿಹಾರವನ್ನು ರೈತರಿಗೆ ನೀಡಿ ಮೋದಿ ಸರ್ಕಾರ ನಾಚಿಕೆ ಮೆರೆದಿದೆ. ಮತದಾರರು ಪ್ರಜಾಪ್ರಭುತ್ವ ಹಕ್ಕನ್ನು ಉಳಿಸಲು ಪ್ರಜ್ಞಾವಂತಿಕೆ ಮೆರೆಯಬೇಕಿದೆ. ಸಂಸತ್ತನ್ನು ತಮ್ಮ ದುರ್ನಡತೆಗೆ ಇವರು ಬಳಸಿಕೊಂಡಿದ್ದಾರೆ. ಚುನಾವಣಾ ಬಾಂಡ್ ಮೂಲಕ ನಡೆಸಿದ ಅವ್ಯವಹಾರದ ಬಣ್ಣವನ್ನು ಸುಪ್ರೀಂ ಕೋರ್ಟ್ ಕಳಚಿದೆ ಎಂದರು.

ರೈತರ ಹೋರಾಟಕ್ಕೆ ಬೆಲೆ ಇಲ್ಲ. ಅವರ ಕಲ್ಯಾಣದ ವಿಚಾರವಿಲ್ಲ. ವ್ಯಾಪಾರಿಗಳ ಹದಿನಾಲ್ಕು ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡುವ ಇವರು, ರೈತರಿಗೆ ನೀಡುವ ಪರಿಹಾರದ ಲೆಕ್ಕ ಹಾಕುತ್ತಾರೆ. ಸದ್ಯ ಲೋಕಸಭೆಗೆ ವಿವೇಚನೆಯಿಂದ ಆಲಗೂರರಿಗೆ ಮತ ನೀಡಿದರೆ ವಿಜಯಪುರ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಮಾತನಾಡಿ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆ. ಗ್ಯಾರಂಟಿಗಳ ಮೂಲಕ ಬಡವರ ಮನೆಗೆ ಸೌಖ್ಯ ಬಂದಿದೆ. ಬೆಲೆ ಏರಿಕೆ ದಿನಗಳಲ್ಲಿ ಇದು ಸಂಜೀವಿನಿಯಾಗಿದೆ ಎಂದರು.

ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲಿ ಮಾತು ತಪ್ಪಿ ವೈಫಲ್ಯ ಕಂಡಿದೆ. ಸದ್ಯದ ಸಂಸತ್ ಸದಸ್ಯರು ಯಾವೊಂದು ಕೆಲಸ ಮಾಡಿಲ್ಲ. ಇದೆಲ್ಲ ವ್ಯತ್ಯಾಸ ಗಮನಿಸಿ ತಮಗೆ ಮತ ನೀಡಿದರೆ ನಿಮ್ಮ ವಿಶ್ವಾಸ ಉಳಿಸಿಕೊಳ್ಳುವೆ ಎಂದು ಹೇಳಿದರು.

ಸಕ್ಕರೆ ಕಾರ್ಖಾನೆ ಅಧ್ಯಕ್ಷ ಆನಂದ ಕುಮಾರ ದೇಸಾಯಿ, ಮುಖಂಡರಾದ ಬಸವರಾಜ ದೇಸಾಯಿ, ಎಚ್.ಬಿ. ಹರಣಹಟ್ಟಿ, ಅದೃಶ್ಯಪ್ಪ ದೇಸಾಯಿ, ಸಂಗಮೇಶ ಬಬಲೇಶ್ವರ, ಡಾ.ಮಹಾಂತೇಶ ಬಿರಾದಾರ, ಲಕ್ಷ್ಮಣ ಚಿಕ್ಕದಾನಿ, ತಿಪ್ಪಣ್ಣ ತುಂಗಳ, ಶಶಿಧರ ಬೀದರ, ಎಸ್.ಟಿ.ಪಾಟೀಲ, ರಮೇಶ ದೇಸಾಯಿ, ಶಂಕರಗೌಡ ಪಾಟೀಲ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...